Webdunia - Bharat's app for daily news and videos

Install App

ಮೊಬೈಲ್ ಮಾರುಕಟ್ಟೆಯಲ್ಲಿ ಎಲ್‌ಜಿ ಪಾಲು ನಾಚಿಕೆ ತರುವಂತಹದು: ಕಿ ವಾನ್

Webdunia
ಗುರುವಾರ, 1 ಸೆಪ್ಟಂಬರ್ 2016 (17:28 IST)
ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಎಲ್‌ಜಿ, ಭಾರತೀಯ ಸ್ಮಾರ್ಟ್‌ಪೋನ್ ಮಾರುಕಟ್ಟೆಯಲ್ಲಿ ಕಾರ್ಯಕ್ಷಮತೆ ಉತ್ತಮಗೊಳಿಸುವ ನಿಟ್ಟಿನಲ್ಲಿ, ತನ್ನ ಸ್ಮಾರ್ಟ್‌ಪೋನ್‌ಗಳ ಮಾರುಕಟ್ಟೆಯ ವಹಿವಾಟು ತಂತ್ರವನ್ನು ಮರು ಮೌಲ್ಯಮಾಪನ ನಡೆಸಲು ಸಿದ್ಧತೆ ನಡೆಸಿದೆ. 
 
ಎಲ್‌ಜಿ ಸ್ಮಾರ್ಟ್‌ಪೋನ್ ವಿಭಾಗದ ಕುರಿತು ಮಾತನಾಡುವಾಗ ನನಗೆ ತಲೆತಗ್ಗಿಸುವಂತ ಭಾವನೆ ಮೂಡುತ್ತಿದೆ. ಭಾರತೀಯ ಗ್ರಾಹಕರು ಎಲ್‌ಜಿ ಸ್ಮಾರ್ಟ್‌ಪೋನ್‌ಗಳನ್ನು ಏಕೆ ಇಷ್ಟ ಪಡುತ್ತಿಲ್ಲ ಎನ್ನುವುದರ ಕುರಿತು ಮನವರಿಕೆ ಮಾಡಿಕೊಳ್ಳಬೇಕಾಗಿದೆ. ಮತ್ತು, ಎಲ್‌ಜಿ ಪೋನ್‌ಗಳು ಭಾರತದ ನಿರ್ದಿಷ್ಟ ಉತ್ಪನ್ನಗಳಾಗುತ್ತಿಲ್ಲ?. ನಾವು ಸರಿಯಾದ ಮಾರಾಟ ಪ್ರಕ್ರಿಯೆಯನ್ನು ಅನುಸರಿಸಿದಲ್ಲಿ ದೇಶದಲ್ಲಿ ಗಮನಾರ್ಹ ಮಾರುಕಟ್ಟೆ ಪಾಲನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಭಾರತದ ಎಲ್‌ಜಿ ಎಲೆಕ್ಟ್ರಾನಿಕ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಕಿ ವಾನ್ ಕಿಮ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 
ಸ್ಮಾರ್ಟ್‌ಪೋನ್ ಮಾರುಕಟ್ಟೆಯಲ್ಲಿ ತನ್ನ ಕಳಪೆ ಪ್ರದರ್ಶನದ ಕುರಿತು ಎಲ್‌ಜಿ ಸಂಸ್ಥೆ ಕಾರಣಗಳನ್ನು ಹುಡುಕುತ್ತಿದೆ. ಕೊರಿಯಾ ಮೂಲದ ದೈತ್ಯ ಸ್ಯಾಮ್‌ಸುಂಗ್ ಕಂಪೆನಿ, ಫೋನ್‌ಗಳ ಉತ್ಪಾದನೆಯಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಅಗ್ರ ಸ್ಥಾನವನ್ನು ಉಳಿಸಿಕೊಂಡಿದೆ. ಆದರೆ, ಎಲ್‌ಜಿ ಸಂಸ್ಥೆಯ ಐಷಾರಾಮಿ ಪೋನ್‌ಗಳು ಭಾರತೀಯ ಗ್ರಾಹಕರು ಖರೀದಿಸಲು ಹಿಂದೇಟು ಹಾಕುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 
 
ಎಲ್‌ಜಿ ಸಂಸ್ಥೆ ಮಾಸಾಂತ್ಯಕ್ಕೆ ವಿ-20 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಕಿ ವಾನ್ ಕಿಮ್ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಂದರವಾಗಿದ್ದಳೆಂದು ತಲೆ ಬೋಳಿಸಿ, ವರದಕ್ಷಿಣೆ ಕಿರುಕುಳ: ಯುಎಇಯಲ್ಲಿ ಮಗುವಿನೊಂದಿಗೆ ಕೇರಳ ಮಹಿಳೆ ಆತ್ಮಹತ್ಯೆ

ಶುಭಾಂಶು ಶುಕ್ಲ ಬದಲು ದಲಿತರನ್ನು ಬಾಹ್ಯಾಕಾಶಕ್ಕೆ ಕಳುಹಿಸಬೇಕಿತ್ತು: ಕಾಂಗ್ರೆಸ್ ನಾಯಕ ಉದಿತ್ ರಾಜ್

ಬೆಂಗಳೂರು, ನೋಟ್ಸ್ ನೀಡು ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಶಿಕ್ಷಕರಿಬ್ಬರು, ಸ್ನೇಹಿತನಿಂದ ರೇಪ್‌

ಮಂತ್ರಾಲಯಕ್ಕೆ ಭೇಟಿ ನೀಡಿದ ಬಳಿಕ ಪೀಠಾಧಿಪತಿಯರನ್ನು ಭೇಟಿಯಾದ ಸಚಿವ ರಾಮಲಿಂಗಾರೆಡ್ಡಿ

₹1 ಕೋಟಿ ಸುಲಿಗೆಗೆ ಉದ್ಯಮಿಯ ಮಗನನ್ನೇ ಕಿಡ್ನ್ಯಾಪ್ ಮಾಡುವುದಾಗಿ ಬೆದರಿಕೆ: ಸಂಚು ವಿಫಲ

ಮುಂದಿನ ಸುದ್ದಿ
Show comments