Webdunia - Bharat's app for daily news and videos

Install App

ಮಾರುತಿ ಸುಜುಕಿ, ಹೊಂಡಾ ವಾಹನಗಳ ಮಾರಾಟದಲ್ಲಿ ಕುಸಿತ

Webdunia
ಶನಿವಾರ, 2 ಜುಲೈ 2016 (15:15 IST)
ದೇಶದ ಅತಿ ದೊಡ್ಡ ಕಾರು ತಯಾರಿಕಾ ಸಂಸ್ಥೆಯಾಗಿರುವ ಮಾರುತಿ ಸುಜುಕಿ, ತನ್ನ ಪ್ರಮುಖ ಮಾರಾಟಗಾರರ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿರುವ ಹಿನ್ನೆಲೆಯಲ್ಲಿ ಜೂನ್ ತಿಂಗಳ ಒಟ್ಟು ಮಾರಾಟದಲ್ಲಿ ಕುಸಿತ ಕಂಡು ಬಂದಿದೆ. ಆದರೆ, ಹುಂಡೈ ಸೇರಿದಂತೆ ಮಹೀಂದ್ರಾ & ಮಹೀಂದ್ರಾ ಮತ್ತು ಟಾಟಾ ಮೋಟರ್ಸ್ ಕಂಪೆನಿಗಳ ಒಟ್ಟು ಮಾರಾಟದಲ್ಲಿ ಚೇತರಿಕೆ ಕಂಡು ಬಂದಿದೆ. 
 
ಹೊಂಡಾ ಸಂಸ್ಥೆಯ ಕಾರುಗಳಾದ ಫೋರ್ಡ್ ಮತ್ತು ರೆನೌಲ್ಟ್ ಆವೃತ್ತಿಯ ಕಾರುಗಳು ಕಳೆದ ತಿಂಗಳ ಮಾರಾಟದಲ್ಲಿ ಕುಸಿತ ಕಂಡು ಬಂದಿದೆ. 
 
ಮಾರುತಿ ಸುಜುಕಿಯ ದೇಶಿಯ ಮಾರಾಟದಲ್ಲಿ 10.2 ಪ್ರತಿಶತ ಕುಸಿತ ಕಂಡು 92,133 ಕಾರುಗಳನ್ನು ಮಾರಾಟ ಮಾಡಿದೆ. ಕಳೆದ ತಿಂಗಳು ಇದೆ ಅವಧಿಯಲ್ಲಿ 1,02,626 ಕಾರುಗಳು ಮಾರಾಟವಾಗಿದ್ದವು. ಆಲ್ಟೋ ಮತ್ತು ವ್ಯಾಗನ್‌ಆರ್ ಸೇರಿದಂತೆ ಮಿನಿ ಸಿಗ್ಮೆಂಟ್ ವಿಭಾಗದ ಕಾರುಗಳ ಮಾರಾಟದಲ್ಲಿ 19.3 ಪ್ರತಿಶತ ಕುಸಿತ ಕಂಡು 27,712 ಕಾರುಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಇದೆ ಅವಧಿಯಲ್ಲಿ 34,336 ಕಾರುಗಳು ಮಾರಾಟವಾಗಿದ್ದವು ಎಂದು ಎಮ್‌ಎಸ್‌ಐ ತನ್ನ ವರದಿಯಲ್ಲಿ ತಿಳಿಸಿದೆ.
 
ಕಾಪ್ಯಾಕ್ಟ್ ವಿಭಾಗದ ಕಾರುಗಳಾದ ಸ್ವಿಫ್ಟ್, ಎಸ್ಟಿಲೊ, ರಿಟ್ಜ್, ಡಿಜೈರ್, ಬಲೆನೋ ಕಾರುಗಳ ಮಾರಾಟದಲ್ಲಿ 12.5 ಪ್ರತಿಶತ ಕುಸಿತ ಕಂಡು 39,971 ಕಾರುಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಇದೆ ಅವಧಿಯಲ್ಲಿ 45,701 ಕಾರುಗಳು ಮಾರಾಟವಾಗಿದ್ದವು. 
 
ಹುಂಡೈ ಮೋಟಾರ್ ಇಂಡಿಯಾ ಸಂಸ್ಥೆಯ ಒಟ್ಟು ಮಾರಾಟದಲ್ಲಿ 9.7 ಪ್ರತಿಶತ ಚೇತರಿಕೆ ಕಂಡು 39,806 ಕಾರುಗಳನ್ನು ಮಾರಾಟ ಮಾಡಿದೆ. ಕಳೆದ ತಿಂಗಳು ಇದೆ ಅವಧಿಯಲ್ಲಿ 36,300 ಕಾರುಗಳು ಮಾರಾಟವಾಗಿದ್ದವು
 
ಕಾರು ಮಾರುಕಟ್ಟೆಯಲ್ಲಿ ಗ್ರ್ಯಾಂಡ್ ಐ10, ಎಲೈಟ್ ಐ 20 ಮತ್ತು ಕ್ರೇಟಾ ಆವೃತ್ತಿಯ ಕಾರುಗಳು ಉತ್ತಮ ಪ್ರದರ್ಶನ ನೀಡುತ್ತಿವೆ. ಜೊತೆಗೆ ದೇಶದಲ್ಲಿ ಉತ್ತಮ ಮಾನ್ಸೂನ್ ಮಳೆ ಮತ್ತು 7ನೇ ವೇತನ ಆಯೋಗದ ಶಿಫಾರಸು ಅಂಗೀಕಾರವಾದ ಹಿನ್ನೆಲೆಯಲ್ಲಿ ಕಾರುಗಳ ಮಾರಾಟದಲ್ಲಿ ಹೆಚ್ಚಳವಾಗಿದೆ ಎಂದು ಹುಂಡೈ ಮೋಟಾರ್ ಇಂಡಿಯಾ ಸಂಸ್ಥೆಯ ಉಪಾಧ್ಯಕ್ಷ ರಾಕೇಶ್ ಶ್ರೀವಾಸ್ತವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
 
ಮಹೀಂದ್ರಾ & ಮಹೀಂದ್ರಾ ಸಂಸ್ಥೆಯ ಜೂನ್ ತಿಂಗಳ ಒಟ್ಟು ವಾಹನ ಮಾರಾಟದಲ್ಲಿ 5 ಪ್ರತಿಶತ ಹೆಚ್ಚಳವಾಗಿ 34,991 ವಾಹನಗಳನ್ನು ಮಾರಾಟ ಮಾಡಿದೆ. ಕಳೆದ ವರ್ಷದ ಇದೆ ಅವಧಿಯಲ್ಲಿ 33,282 ಕಾರುಗಳು ಮಾರಾಟವಾಗಿದ್ದವು ಎಂದು ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments