Webdunia - Bharat's app for daily news and videos

Install App

ವಾಹನ ಸವಾರರೆ ಎಚ್ಚರ! ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ದಂಡ

Webdunia
ಮಂಗಳವಾರ, 25 ಜೂನ್ 2019 (11:50 IST)
ನವದೆಹಲಿ : ಭಾರಿ ದಂಡ ಹಾಗೂ ಕಾನೂನಿನಡಿ ಶಿಕ್ಷೆಗೊಳಪಡಿಸುವ ಮೋಟಾರು ವಾಹನ ತಿದ್ದುಪಡಿ ವಿಧೇಯಕ ಲೋಕಸಭೆಯಲ್ಲಿ ಮರು ಮಂಡನೆಯಾಗಲಿದ್ದು, ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸುವ ವಾಹನ ಸವಾರರಿಗೆ ಬಾರೀ ದಂಡ ಬೀಳಲಿದೆ ಎನ್ನಲಾಗಿದೆ.




ಹೌದು ಕಳೆದ ಲೋಕಸಭೆಯಲ್ಲಿ ಈ ವಿಧೇಯಕ ಅಂಗೀಕಾರ ಪಡೆದಿತ್ತು. ಆದರೆ ರಾಜ್ಯಸಭೆಯಲ್ಲಿ  ಈ ವಿಧೇಯಕಕ್ಕೆ ಒಪ್ಪಿಗೆ ಸಿಗಲಿಲ್ಲ. ಈ ಹಿನ್ನಲೆಯಲ್ಲಿ ಈ ಬಾರಿ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ಈ ವಿಧೇಯಕ ಮತ್ತೆ ಮಂಡನೆಯಾಗಲಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.


ಒಂದು ವೇಳೆ ಈ ವಿಧೇಯಕ್ಕೆ ಅಂಗೀಕಾರ ಪಡೆದರೆ ವಾಹನ ಸವಾರರಿಗೆ ಬಾರೀ ದಂಡ ಬೀಳಲಿದೆ. ತುರ್ತುಸೇವೆ ವಾಹನಗಳಿಗೆ ದಾರಿ ಬಿಡದಿದ್ದರೆ 10 ಸಾವಿರ ರೂ. ದಂಡ, ಅನರ್ಹರಾಗಿದ್ದರೂ ವಾಹನ ಚಾಲನೆ ಮಾಡಿದರೆ 10 ಸಾವಿರ ರೂ. ದಂಡ, ಡಿಎಲ್ ನಿಯಮ ಉಲ್ಲಂಘಿಸಿದರೆ 1 ಲಕ್ಷ ರೂ., ಅತಿ ವೇಗದ ಚಾಲನೆಗೆ 1 ಸಾವಿರದಿಂದ 2 ಸಾವಿರ ರೂ., ವಿಮೆ ರಹಿತ ವಾಹನ ಚಾಲನೆ ಮಾಡಿದರೆ 2 ಸಾವಿರ ರೂ., ಸೀಟ್ ಬೆಲ್ಟ್ ಹಾಗೂ ಹೆಲ್ಮೆಟ್ ರಹಿತ ವಾಹನ ಚಾಲನೆಗೆ 1ಸಾವಿರ ರೂ. ದಂಡ ಜೊತೆಗೆ ಮೂರು ತಿಂಗಳು ಡಿಎಲ್ ಅಮಾನತು, ಅಪ್ರಾಪ್ತರ ವಾಹನ ಚಾಲನೆಗೆ 25 ಸಾವಿರ ರೂ. ದಂಡ ಹಾಗೂ ಪಾಲಕರ ವಿರುದ್ಧ ಕ್ರಮ, ಪ್ರಾಧಿಕಾರದ ಆದೇಶ ಉಲ್ಲಂಘನೆಗೆ 2 ಸಾವಿರ ರೂ., ಡಿಎಲ್ ಇಲ್ಲದೆ ವಾಹನ ಚಾಲನೆ 5 ಸಾವಿರ ರೂ., ನಿಗದಿತ ತೂಕಕ್ಕಿಂತ ಹೆಚ್ಚು ಪ್ರಮಾಣದ ಸಾಗಣೆಗೆ 20 ಸಾವಿರ ರೂ. ದಂಡ ವಿಧಿಸಲಾಗುತ್ತದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments