Webdunia - Bharat's app for daily news and videos

Install App

ಟಾಟಾ ಮೋಟಾರ್ಸ್ ಸಂಸ್ಥೆಗೆ ಹಿನ್ನೆಡೆ: ಸಿಂಗೂರ್ ಭೂ ಸ್ವಾಧೀನವನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್

Webdunia
ಬುಧವಾರ, 31 ಆಗಸ್ಟ್ 2016 (17:30 IST)
ಪಶ್ಚಿಮ ಬಂಗಾಳದ ಸಿಂಗನೂರಿನ ಟಾಟಾ ನ್ಯಾನೋ ಘಟಕಕ್ಕಾಗಿ ಸ್ವಾಧೀನಪಡಿಸಿಕೊಂಡ ಭೂಮಿ ವಿವಾದ ಕುರಿತಂತೆ ಕೋಲ್ಕತಾ ಹೈಕೋರ್ಟ್ ನೀಡಿದ ತೀರ್ಪಿಗೆ ವಿರುದ್ಧವಾಗಿ ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಟಾಟಾ ಮೋಟಾರ್ಸ್ ಸಂಸ್ಥೆಗೆ ಹಿನ್ನೆಡೆಯಾಗಿದೆ. 
 
2006 ರ ಸಾಲಿನಲ್ಲಿ ಅಂದಿನ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನೇತೃತ್ವದ ಸರ್ಕಾರ, ಟಾಟಾ ಮೋಟಾರ್ಸ್‌ನ ನ್ಯಾನೋ ಕಾರು ಉತ್ಪಾದನೆಗಾಗಿ ಸಿಂಗೂರಿನ ಭೂಮಿಯನ್ನು ಸ್ವಾಧೀನಕ್ಕೆ ತೆಗೆದುಕೊಂಡಿತ್ತು. 
 
ಭೂಸ್ವಾಧೀನ ಇಲಾಖೆಯ ಅಧಿಕಾರಿಗಳು ಭೂ ಸ್ವಾಧೀನ ಕುರಿತಂತೆ ಭೂಮಿ ಕಳೆದುಕೊಂಡ ರೈತರ ದೂರುಗಳಿಗೆ ಸ್ಪಂದಿಸದೆ ಸರಿಯಾದ ವಿಚಾರಣೆ ನಡೆಸದೇ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ ಎಂದು ಸುಪ್ರೀಂಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
 
ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿಗಳಾದ ವಿ.ಗೋಪಾಲ್ ಮತ್ತು ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ನ್ಯಾಯಪೀಠ,  ಕಳೆದ 10 ವರ್ಷಗಳಿಂದ ರೈತರ ಭೂಮಿಯನ್ನು ಸರಕಾರ ಕಿತ್ತುಕೊಂಡಿದ್ದರಿಂದ ಭೂಮಿ ಕಳೆದುಕೊಂಡ ರೈತರು ಸರಕಾರ ನೀಡಿದ ಪರಿಹಾರ ಧನವನ್ನು ವಾಪಸ್ ಕೊಡುವ ಅಗತ್ಯವಿಲ್ಲ ಎಂದು ತೀರ್ಪು ನೀಡಿದ್ದಾರೆ.
 
ಭೂ ಸ್ವಾಧೀನದ ಸಂದರ್ಭದಲ್ಲಿ ಪರಿಹಾರ ದನವನ್ನು ಮಡೆದುಕೊಳ್ಳದ ರೈತರಿಗೆ 12 ವಾರಗಳಲ್ಲಿ ತಮ್ಮ ಭೂಮಿಯನ್ನು ಹಸ್ತಾಂತರಿಸಲಾಗುತ್ತದೆ ಎಂದು ತಿಳಿಸಿದರು. 
 
ಪ್ರಸಕ್ತ ಸಾಲಿನ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಗೋಪಾಲ ಗೌಡ ಹಾಗೂ ಅರುಣ್ ಮಿಶ್ರಾ ನೇತೃತ್ವದ ಪೀಠ ಟಾಟಾ ಮೋಟರ್ಸ್ ವಾದವನ್ನು ಆಲಿಸಿತ್ತು. ಈ ವೇಳೆ ಬಂಗಾಳ ಸರಕಾರದ ಹಾಗೂ ರೈತರ ಬೇಡಿಕೆಗಳನ್ನು ಆಲಿಸಿದ್ದ ಕೋರ್ಟ್‌ ತಮ್ಮ ತೀರ್ಪನ್ನು ಕಾಯ್ದಿರಿಸಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮುಂದಿನ ಸುದ್ದಿ
Show comments