Webdunia - Bharat's app for daily news and videos

Install App

ಮಂಗಳೂರಿನಲ್ಲಿ ಬ್ರಿಗೇಡ್ ಪಿನಾಕಲ್ ಲೋಕಾರ್ಪಣೆ

Webdunia
ಮಂಗಳವಾರ, 10 ಜನವರಿ 2017 (14:44 IST)
ದೇಶದ ಖ್ಯಾತ ಬಿಲ್ಡರ್‌ಗಳಲ್ಲಿ ಒಂದಾದ ಬೆಂಗಳೂರು ಮೂಲದ ಬ್ರಿಗೇಡ್ ಗ್ರೂಪ್ ಕಳೆದ 30 ವರ್ಷಗಳಿಂದ ದಕ್ಷಿಣ ಭಾರತದಲ್ಲಿ ಹೊಸ ಹೊಸ ಆಕರ್ಷಕ ವಿನ್ಯಾಸಗಳ ವಸತಿ ಯೋಜನೆಗಳನ್ನು ನೀಡುತ್ತಾ ಬಂದಿದೆ. ಇದೀಗ ಮಂಗಳೂರಿನಲ್ಲಿ ಬ್ರಿಗೇಡ್‍ನ ಬ್ರಿಗೇಡ್ ಪಿನಾಕಲ್ ಎಂಬ ಮೊದಲ ಲಕ್ಷುರಿ ಅಪಾರ್ಟ್‍ಮೆಂಟ್ ಅನ್ನು ಸಿದ್ಧಪಡಿಸಿದ್ದು, ಇದನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಹಿದ್ದೀನ್ ಬಾವ ಅವರು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಬ್ರಿಗೇಡ್ ಎಂಟರ್‍ಪ್ರೈಸಸ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ಜೈಶಂಕರ್ ಮತ್ತು ಸ್ಥಳೀಯ ಕಾರ್ಪೊರೇಟರ್ ರಾಜೇಶ್ ಕೆ. ಉಪಸ್ಥಿತರಿದ್ದರು.
 
ಮಂಗಳೂರಿನ ಸನಿಹದಲ್ಲಿರುವ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ದೇರೇಬೈಲ್‍ನಲ್ಲಿ ಈ ಬ್ರಿಗೇಡ್ ಪಿನಾಕಲ್ ನಿರ್ಮಾಣವಾಗಿದೆ. ಒಟ್ಟು 3.3 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಿರುವ ಈ ವಸತಿ ಅಪಾರ್ಟ್‍ಮೆಂಟ್‍ನಲ್ಲಿ ಒಟ್ಟು 22 ಮಹಡಿಗಳಲ್ಲಿ 394 ಅಪಾರ್ಟ್‍ಮೆಂಟ್‍ಗಳು ಸಾರ್ವಜನಿಕರಿಗೆ ಲಭ್ಯವಿವೆ. 2 ಮತ್ತು 3 ಬೆಡ್‍ರೂಂ ಹೊಂದಿದ ಈ ಅಪಾರ್ಟ್‍ಮೆಂಟ್‍ಗಳು ಲಕ್ಷುರಿ ಮತ್ತು ವಿನ್ಯಾಸದಲ್ಲಿ ಅತ್ಯುತ್ತಮವಾಗಿವೆ. ಕ್ಲಬ್‍ಹೌಸ್, ಸ್ವಿಮಿಂಗ್‍ಪೂಲ್, ಜಿಮ್ನಾಶಿಯಂ, ಸಾಂಸ್ಕøತಿಕ ವಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಸೌಲಭ್ಯಗಳನ್ನು ಹೊಂದಿದ ಸುಸಜ್ಜಿತ ಅಪಾರ್ಟ್‍ಮೆಂಟ್ ಇದಾಗಿದೆ.
 
ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಬ್ರಿಗೇಡ್ ಎಂಟರ್‍ಪ್ರೈಸಸ್ ಲಿಮಿಟೆಡ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ಜೈಶಂಕರ್ ಅವರು ಮಾತನಾಡಿ, ``ಬ್ರಿಗೇಡ್ ಪಿನಾಕಲ್ ಮೂಲಕ ಬ್ರಿಗೇಡ್ ಗ್ರೂಪ್ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಮಂಗಳೂರಿಗೆ ಪದಾರ್ಪಣೆ ಮಾಡಿದೆ. ಬೆಂಗಳೂರಿನ ವಿಶ್ವಾಸಾರ್ಹ ಮತ್ತು ಖ್ಯಾತನಾಮ ಡೆವಲಪರ್ ಕಂಪನಿಯ ಗುಣಮಟ್ಟದ ಅಪಾರ್ಟ್‍ಮೆಂಟ್‍ನ ಅನುಭವವನ್ನು ಇದೀಗ ಮಂಗಳೂರಿಗರು ಬ್ರಿಗೇಡ್ ಪಿನಾಕಲ್ ಮೂಲಕ ಅನುಭವಿಸಲಿದ್ದಾರೆ. ನಮ್ಮ ಮೊಟ್ಟ ಮೊದಲ ವಸತಿ ಯೋಜನೆಯನ್ನು ಮಂಗಳೂರಿನಲ್ಲಿ ಪೂರ್ಣಗೊಳಿಸಿರುವುದಕ್ಕೆ ನಮಗೆ ಸಂತಸವಾಗುತ್ತಿದೆ. ಇಲ್ಲಿನ ಗ್ರಾಹಕರಿಗೆ ಉತ್ತಮವಾದ ಮತ್ತು ಧನಾತ್ಮಕವಾದ ಸೇವೆಯನ್ನು ನೀಡಲಿದ್ದೇವೆ ಮತ್ತು ಆ ಸೇವೆಯ ಅನುಭವವನ್ನು ಗ್ರಾಹಕರು ಹೊಂದಲಿದ್ದಾರೆ ಎಂಬ ವಿಶ್ವಾಸ ನಮ್ಮದಾಗಿದೆ’’ ಎಂದು ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments