Webdunia - Bharat's app for daily news and videos

Install App

ಬಿಎಸ್ಎನ್ಎಲ್‍ನಿಂದ ಮೂರು ಹೊಸ ಆಫರ್‌ಗಳು

Webdunia
ಬುಧವಾರ, 25 ಜನವರಿ 2017 (11:08 IST)
ಖಾಸಗಿ ದೂರಸಂಪರ್ಕ ಕಂಪೆನಿಗಳಿಂದ ಎದುರಾಗುತ್ತಿರುವ ಸ್ಪರ್ಧೆಯನ್ನು ತಡೆದುಕೊಳ್ಳಲು ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಹೊಸ ಆಫರ್‌ಗಳನ್ನು ಪ್ರಕಟಿಸಿದೆ. ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಪ್ರೀಪೇಯ್ಡ್ ಗ್ರಾಹಕರಿಗೆ ಮೂರು ಆಫರ್‌ಗಳನ್ನು ಪರಿಚಯಿಸುತ್ತಿದೆ.
 
ರೂ.26ಕ್ಕೆ ರೀಚಾರ್ಜ್ ಮಾಡಿಕೊಳ್ಳುವ ಮೂಲಕ ಬಿಎಸ್ಎನ್ಎಲ್ ವ್ಯಾಪ್ತಿಯಲ್ಲಿ 26 ಗಂಟೆಗಳ ಕಾಲ ಅನಿಯಮಿತ ಕರೆಗಳನ್ನು ಮಾಡಬಹುದು. ಈ ಆಫರ್ ಜನವರಿ 26ರಿಂದ 31ರವೆಗೂ ಇರುತ್ತದೆ. ಇನ್ನು ಉಳಿದ ಎರಡು ಆಫರ್‌ಗಳ ಮೇಲೆ ಹೆಚ್ಚಿನ ಮೊತ್ತದ ಟಾಕ್‌ಟೈಂ ನೀಡುತ್ತಿರುವುದಾಗಿ ಬಿಎಸ್ಎನ್ಎಲ್ ವ್ಯವಸ್ಥಾಪಕ ನಿರ್ದೇಶಕ ಅನುಪಮ್ ಶ್ರೀವಾಸ್ತವ್ ತಿಳಿಸಿದ್ದಾರೆ.
 
ಕಾಂಬೋ 2601 ಹೆಸರಿನ ಆಫರ್‌ ಪ್ರಕಾರ ರೂ.2600ಕ್ಕೆ ರೀಚಾರ್ಜ್ ಮಾಡಿಕೊಂಡರೆ ರೂ.1300 ಹೆಚ್ಚುವರಿ ಟಾಕ್‌ಟೈಮ್ ಪಡೆದುಕೊಳ್ಳಬಹುದು. ರೂ.2600 ಮುಖ್ಯ ಬ್ಯಾಲೆನ್ಸ್‍ನಲ್ಲಿ ಜಮೆ ಮಾಡಲಿದ್ದಾರೆ. ಹೆಚ್ಚುವರಿ ಟಾಕ್‌ಟೈಮ್ ಸೆಕೆಂಡರಿ ಖಾತೆಯಡಿ ಜಮೆ ಮಾಡಲಿದ್ದಾರೆ. ಇದನ್ನು ಮೂರು ತಿಂಗಳಲ್ಲಿ ಬಳಸಿಕೊಳ್ಳಬೇಕಾಗುತ್ತದೆ.
 
ಕಾಂಬೋ 6801 ಹೆಸರಿನ ಆಫರ್‌ನಲ್ಲಿ ರೂ.6800 ರೀಚಾರ್ಜ್ ಮಾಡಿಕೊಂಡರೆ ಅಷ್ಟೇ ಮೊತ್ತದ ಮುಖ್ಯ ಬ್ಯಾಲೆನ್ಸ್‌ನಡಿ, ಹೆಚ್ಚುವರಿಯಾಗಿ ರೂ.6800 ಸೆಕೆಂಡರಿ ಅಕೌಂಟ್‌ನಲ್ಲಿ ಜಮೆಯಾಗಲಿದೆ. ಇದನ್ನೂ ಅಷ್ಟೇ ಮೂರು ತಿಂಗಳಲ್ಲಿ ಬಳಸಿಕೊಳ್ಳಬೇಕು. ಆದರೆ ಮೇನ್ ಬ್ಯಾಲೆನ್ಸ್ ಬಳಕೆಗೆ ಕಾಲಮಿತಿ ಇಲ್ಲ. ಈ ಎರಡು ಆಫರ್‌ಗಳು ಮಾರ್ಚ್ 31ರವರೆಗೂ ಲಭ್ಯವಾಗಲಿವೆ ಎಂದು ಶ್ರೀವಾಸ್ತವ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಮುಂದಿನ ಸುದ್ದಿ
Show comments