ಕೇಂದ್ರ ಬಜೆಟ್ 2025 ರಲ್ಲಿ ನಿಮ್ಮ ನಿರೀಕ್ಷೆಗಳೇನು: ಈ ಬದಲಾವಣೆಗಳು ಖಚಿತ

Krishnaveni K
ಶನಿವಾರ, 4 ಜನವರಿ 2025 (10:44 IST)
ನವದೆಹಲಿ: ಕೇಂದ್ರ ಬಜೆಟ್ 2025 ರನ್ನು ಸದ್ಯದಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಈ ಬಜೆಟ್ ನಲ್ಲಿ ನಿಮ್ಮ ನಿರೀಕ್ಷೆಗಳೇನು ಮತ್ತು ಈ ಬಾರಿ ಯಾವೆಲ್ಲಾ ಬದಲಾವಣೆ ನಿರೀಕ್ಷಿಬಹುದು ನೋಡೋಣ.

ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ನಲ್ಲಿ ಈ ಬಾರಿ ನಿಮಗೆ ಹಲವು ನಿರೀಕ್ಷೆಗಳಿರಬಹುದು. ಕಳದ ವರ್ಷದ ಅಂತ್ಯಕ್ಕೆ ಜಿಡಿಪಿ ಕೊಂಚ ಕಡಿಮೆಯಾಗಿತ್ತು. ಅದೀಗ ಹಳಿಗೆ ಬರುವ ಲಕ್ಷಣ ಕಾಣುತ್ತಿದೆ. ಜಿಡಿಪಿ ಇನ್ನಷ್ಟು ಪ್ರಬಲವಾಗಲು ನಿರ್ಮಲಾ ಯಾವ ಕ್ರಮ ಕೈಗೊಳ್ಳಲಿದ್ದಾರೆ ನೋಡಬೇಕಿದೆ.

ಈ ಬಾರಿ ಬಜೆಟ್ ನಲ್ಲಿ ತೆರಿಗೆ ವಿನಾಯ್ತಿ ಮಿತಿಯನ್ನು ಹೆಚ್ಚಳ ಮಾಡಬಹುದೇ ಎಂಬ ನಿರೀಕ್ಷೆ ಜನರಲ್ಲಿದೆ. ತೆರಿಗೆ ಮಿತಿಯನ್ನು ಹೆಚ್ಚಳ ಮಾಡುವುದರಿಂದ ಮಧ್ಯಮ ವರ್ಗದ ಜನರಿಗೆ ನಿರಾಳವಾಗಲಿದೆ.

ಇನ್ನು ಈ ಬಾರಿ ಬಜೆಟ್ ನಲ್ಲಿ ತೈಲ ಬೆಲೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಹಣದುಬ್ಬರ ನಿಯಂತ್ರಣ ಮಾಡಲು ಇದೂ ಒಂದು ಮಾರ್ಗವಾಗಿದೆ. ಹೀಗಾಗಿ ನಿರ್ಮಲಾ ಬಜೆಟ್ ನಲ್ಲಿ ಇದರ ಬಗ್ಗೆ ಗಮನಹರಿಸಿ ಸಾರ್ವಜನಿಕರ ಆರ್ಥಿಕ ಹೊರೆ ತಗ್ಗಿಸುವ ಕೆಲಸವಾಗಬೇಕಿದೆ.

ಇನ್ನು, ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕಳೆದ ಬಾರಿ ಬಜೆಟ್ ನಲ್ಲಿ ಘೋಷಿಸಿದಂತೆ ಯುವ, ವಿದ್ಯಾವಂತರಿಗೆ ಕೆಲವೊಂದು ಪ್ರೋತ್ಸಾಹಕರ ಯೋಜನೆಗಳು, ಕೈಗಾರಿಕೆಗಳು, ಸಣ್ಣ ಕೈಗಾರಿಕೆಗಳ ಸುಧಾರಣೆಗೆ ಕ್ರಮ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಇನ್ನು ಗ್ರಾಮೀಣ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಒತ್ತು ನೀಡುವ ನಿರೀಕ್ಷೆಯಿದೆ. ಅದಲ್ಲದೆ ಎಂದಿನಂತೆ ಸ್ವದೇಶೀ ಉತ್ಪನ್ನಗಳ ಪ್ರೋತ್ಸಾಹಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಗುವಂತಹ ಯೋಜನೆಗಳು ಬರಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments