Webdunia - Bharat's app for daily news and videos

Install App

ಕೇಂದ್ರದ ತೆರಿಗೆ ಪಾಲು: ಕರ್ನಾಟಕಕ್ಕೆ ಕೊಟ್ಟ ಮೊತ್ತ ನೋಡಿದ್ರೆ ಸಿದ್ದರಾಮಯ್ಯ ರೊಚ್ಚಿಗೇಳುವುದು ಪಕ್ಕಾ

Krishnaveni K
ಶನಿವಾರ, 11 ಜನವರಿ 2025 (10:55 IST)
ನವದೆಹಲಿ: ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ತೆರಿಗೆ ಪಾಲು ಹಂಚಿಕೆ ಮಾಡಿದೆ. ಕರ್ನಾಟಕಕ್ಕೆ ಸಿಕ್ಕ ತೆರಿಗೆ ಪಾಲು ನೋಡಿದರೆ ಸಿಎಂ ಸಿದ್ದರಾಮಯ್ಯ ರೊಚ್ಚಿಗೇಳುವುದು ಪಕ್ಕಾ ಎನ್ನಬಹುದು.

ಕೇಂದ್ರದ ತೆರಿಗೆ ಪಾಲು ಹಂಚಿಕೆಯಲ್ಲಿ ಬಿಹಾರ ಮತ್ತು ಉತ್ತರ ಪ್ರದೇಶ ಸಿಂಹ ಪಾಲು ಪಡೆದಿದೆ. ಉತ್ತರ ಪ್ರದೇಶಕ್ಕೆ 31039 ಕೋಟಿ ರೂ. ಬಿಹಾರಕ್ಕೆ 17403.36 ಕೋಟಿ ರೂ. ಪಾಲು ಸಿಕ್ಕಿದೆ. ಆದರೆ ಕರ್ನಾಟಕಕ್ಕೆ ಕೇವಲ 6310 ಕೋಟಿ ರೂ. ಅಷ್ಟೇ ಸಿಕ್ಕಿದೆ.

ಕಳೆದ ವರ್ಷವೂ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ತೆರಿಗೆ ಹಂಚಿಕೆಯಲ್ಲಿ ನಮಗೆ ಅನ್ಯಾಯವಾಗುತ್ತಿದೆ ಎಂದು ದೆಹಲಿಗೆ ಹೋಗಿ ಹೋರಾಟ ನಡೆಸಿದ್ದವು. ಈ ಬಾರಿಯೂ ಬಿಹಾರ, ಉತ್ತರ ಪ್ರದೇಶಕ್ಕೇ ಹೆಚ್ಚು ಪಾಲು ನೀಡಿರುವುದರಿಂದ ಕಾಂಗ್ರೆಸ್ ಮತ್ತು ಮಿತ್ರ ಪಕ್ಷಗಳು ಆಡಳಿತವಿರುವ ರಾಜ್ಯಗಳು ಹೋರಾಟ ನಡೆಸುವುದು ಖಚಿತವಾಗಿದೆ.

ಕೇಂದ್ರ ಸರ್ಕಾರವು ಶೇ.410 ರಷ್ಟು ತೆರಿಗೆ ಸಂಗ್ರಹ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ವಿವಿಧ ರಾಜ್ಯಗಳಲ್ಲಿ ಕಂತು ಕಂತುಗಳಾಗಿ ಹಣ ಬಿಡುಗಡೆ ಮಾಡಲಾಗು್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಯಾವ ರಾಜ್ಯಕ್ಕೆ ಎಷ್ಟು?
ತೆರಿಗೆ ಪಾಲು ಹಂಚಿಕೆಯಲ್ಲಿ ಬಿಹಾರ ಸಿಂಹಪಾಲು ಪಡೆದಿದ್ದರೆ ಉತ್ತ ಪ್ರದೇಶಕ್ಕೂ ದೊಡ್ಡ ಮೊತ್ತವೇ ಸಿಕ್ಕಿದೆ. ಉಳಿದಂತೆ ಮಧ್ಯಪ್ರದೇಶಕ್ಕೆ 13582.86 ಕೋಟಿ ರೂ., ಮಹಾರಾಷ್ಟರಕ್ಕೆ 10930.31  ಕೋಟಿ ರೂ., ರಾಜಸ್ಥಾನಕ್ಕೆ 10426.78 ಕೋಟಿ ರೂ., ಪಶ್ಚಿಮ ಬಂಗಾಲಕ್ಕೆ 13017.06 ಕೋಟಿ ರೂ., ಗೋವಾಕ್ಕೆ 667.91 ಕೋಟಿ ರೂ., ಸಿಕ್ಕಿಂಗೆ 671.35 ಕೋಟಿ ರೂ. ಪಾಲು ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments