Webdunia - Bharat's app for daily news and videos

Install App

ಆಹಾರ ಪದಾರ್ಥಗಳ ದರ ಗಗನಕ್ಕೆ : ಮೇ 21ರಂದು ಕೇಂದ್ರ, ರಾಜ್ಯಗಳ ಸಭೆ

Webdunia
ಶುಕ್ರವಾರ, 20 ಮೇ 2016 (17:50 IST)
ಆಹಾರ ಪದಾರ್ಥಗಳು, ಬೇಳೆಕಾಳುಗಳು ಮತ್ತಿತರ ಅವಶ್ಯಕ ವಸ್ತುಗಳ ದರ ಗಗನಕ್ಕೇರುತ್ತಿದೆ. ಜನಸಾಮಾನ್ಯರಿಗೆ ಇದರ ಬಿಸಿ ತಟ್ಟುತ್ತಿದ್ದು, ದರಗಳ ಏರಿಕೆಯಿಂದ ಕಂಗಾಲಾಗಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರ  ಬೇಳೆಕಾಳುಗಳು ಮತ್ತಿತರ ಅವಶ್ಯಕ ವಸ್ತುಗಳ ದರ ಏರಿಕೆಯನ್ನು ಜಂಟಿಯಾಗಿ ನಿಭಾಯಿಸಲು  ಮೇ 21ರಂದು ರಾಜ್ಯ ಆಹಾರ ಸಚಿವರ ಸಭೆಯನ್ನು ಕರೆದಿದೆ.

ಇಡೀ ದಿನ ನಡೆಯುವ ಸಭೆಯಲ್ಲಿ ಆಹಾರ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್, ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಮತ್ತು ವಾಣಿಜ್ಯ ಸಚಿವ ನಿರ್ಮಲಾ ಸೀತಾರಾಮನ್ ಭಾಗವಹಿಸಲಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
 
 ಸಭೆಯಲ್ಲಿ ಆಹಾರ ಪದಾರ್ಥಗಳ ದರ ಏರಿಕೆ ಹತೋಟಿಗೆ ತರುವ ಕಾರ್ಯಯೋಜನೆ, ದರ ನಿಗಾ ವ್ಯವಸ್ಥೆ ಬಲಪಡಿಸುವುದು, ಕಾಳಸಂತೆ ತಡೆಯಲು ಸಮನ್ವಯದ ಕಾರ್ಯತಂತ್ರ ಮತ್ತು ದರ ಸ್ಥಿರತೆಯ ನಿಧಿಯ ಬಳಕೆ ಕುರಿತು ಚರ್ಚಿಸಲಾಗುತ್ತದೆ. 
 ಬೇಳೆಕಾಳುಗಳ ದರ ದೇಶದ ಕೆಲವು ಭಾಗಗಳಲ್ಲಿ ಈಗಲೂ ಕೆಜಿಗೆ 190ರೂ.ಗೆ ಮಾರಾಟವಾಗುತ್ತಿದೆ.

ಕಳಪೆ ಮುಂಗಾರಿನಿಂದ ದೇಶೀಯ ಉತ್ಪಾದನೆಯಲ್ಲಿ ಕುಸಿತವಾಗಿದ್ದೇ ಬೇಳೆಕಾಳುಗಳ ದರ ಹೆಚ್ಚಳಕ್ಕೆ ಕಾರಣ. ಇದಲ್ಲದೇ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನುಷ್ಠಾನದ ಪುನರ್ಪರಿಶೀಲನೆ ನಡೆಸಲಿದೆ. ಇದನ್ನು 33 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅನುಷ್ಠಾನಕ್ಕೆ ತರಲಾಗುತ್ತದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌ಗೆ ಬೆಂಬಲ ಸೂಚಿಸಿದ ಟರ್ಕಿ: ಸೇಬು ಬೆನ್ನಲ್ಲೇ ಆಭರಣಕ್ಕೂ ಭಾರತದಲ್ಲಿ ಬಹಿಷ್ಕಾರ

India Pakistan: ಯಶಸ್ವಿಯಾಗಿ ಪಾಕ್‌ನ 600 ಡ್ರೋನ್‌ಗಳನ್ನು ಉರುಳಿಸಿದ ಭಾರತದ ವಾಯುಪಡೆ

ಉತ್ತರಪ್ರದೇಶ: ಕೂದಲು ಕಸಿ ಮಾಡಲು ಹೋಗಿ ಜೀವ ಕಳೆದುಕೊಂಡ ಇಬ್ಬರು ಎಂಜಿನಿಯರ್‌ಗಳು

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ

ಮುಂದಿನ ಸುದ್ದಿ
Show comments