Webdunia - Bharat's app for daily news and videos

Install App

ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ವಿಭಜನೆ: ನೂತನ ಟೆಲಿಕಾಂ ಸಚಿವರಾಗಿ ಮನೋಜ್ ಸಿನ್ಹಾ

Webdunia
ಗುರುವಾರ, 7 ಜುಲೈ 2016 (19:39 IST)
ನವದೆಹಲಿ: ಕೇಂದ್ರದ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಸಚಿವ ಮನೋಜ್ ಸಿನ್ಹಾ, ಎರಡು ಸಚಿವಾಲಯಗಳನ್ನು ವಿಭಜಿಸಿದ್ದಾರೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ. 
 
ದೇಶದಲ್ಲಿಯೇ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ, ಮೊದಲ ಬಾರಿಗೆ ಅತಿ ಹೆಚ್ಚಿನ ಮೊತ್ತದ ಸ್ಪೆಕ್ಟ್ರಂ ಹರಾಜಿಗೆ ಸಿದ್ದತೆ ನಡೆಸಿದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
 
ಸಂಪುಟ ಪುನಾರಚನೆಗೆ ಮೊದಲು ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಗಳನ್ನು ನಿರ್ವಹಿಸುತ್ತಿದ್ದ ಬಿಜೆಪಿ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಇದೀಗ ಸಂಪುಟ ಪುನಾರಚನೆಯ ನಂತರ ಕಾನೂನು ಮತ್ತು ನ್ಯಾಯ ಖಾತೆಯೊಂದಿಗೆ ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಸಚಿವಾಲಯದ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ 
 
ಸಹಾಯಕ ಸ್ವತಂತ್ರ ಖಾತೆ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮನೋಜ್ ಸಿನ್ಹಾ, ತಮ್ಮ ನೂತನ ಖಾತೆಯ ಕುರಿತು ನಾಡಿದ್ದು ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
 
ಉತ್ತರ ಪ್ರದೇಶದ ಘಾಜಿಪುರ್ ಲೋಕಕಸಭಾ ಕ್ಷೇತ್ರದಿಂದ ಮನೋಜ್ ಸಿನ್ಹಾ ಸಂಸದರಾಗಿ ಆಯ್ಕೆಯಾಗಿದ್ದಾರೆ. 
 
ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಎಂ.ಟೆಕ್ ಪದವಿ ಪಡೆದುಕೊಂಡಿರುವ ಮನೋಜ್ ಸಿನ್ಹಾ, ವಿಶ್ವದಲ್ಲಿಯೇ ಎರಡನೇ ಬೃಹತ್ ಮೊಬೈಲ್ ಗ್ರಾಹಕರು ಮತ್ತು ಕಡಿಮೆ ಕರೆದರಗಳನ್ನು ಹೊಂದಿರುವ ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಸ್ವತಂತ್ರವಾಗಿ ನಿರ್ವಹಿಸಲಿದ್ದಾರೆ. 
 
ಬಿಎಸ್‌ಎನ್‌ಎಲ್ ಸಂಸ್ಥೆಯನ್ನು ಮೊಬೈಲ್ ಮಾರುಕಟ್ಟೆಯ ಪ್ರಾಬಲ್ಯದಿಂದ ಹೊರಗಿಡಲು ಪ್ರಯತ್ನಿಸುತ್ತಿರುವ ಬೃಹತ್ ಕಾರ್ಪೋರೇಟ್ ಕಂಪೆನಿಗಳಾದ ರಿಲಯನ್ಸ್ ಇಂಡಸ್ಟ್ರೀಸ್, ಭಾರ್ತಿ ಏರ್‌ಟೆಲ್, ವೋಡಾಫೋನ್, ಐಡಿಯಾ ಸೆಲ್ಯೂಲರ್ ಕಂಪೆನಿಗಳಿಗೆ ಯಾವ ರೀತಿ ನಿಯಂತ್ರಣ ಹೇರುತ್ತಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಹೆಬ್ಬಾಳ ಮೇಲ್ಸೇತುವೆಯಲ್ಲಿ ಸಂಚರಿಸುವವರ ಗಮನಕ್ಕೆ: ಶನಿವಾರದವರೆಗೂ ರಾತ್ರಿ ಬಂದ್

Plane Crash: ಸ್ವಗೃಹಕ್ಕೆ ಮಂಗಳೂರು ಮೂಲದ ಕೋ ಪೈಲಟ್ ಕ್ಲೈವ್ ಕುಂದರ್ ಮೃತದೇಹ

ಕುರ್ಚಿ ಉಳಿಸಿಕೊಳ್ಳಲು ಸಂವಿಧಾನದ ಮೇಲೆ ನಡೆಸಿದ ದೌರ್ಜನ್ಯ: ಸಿ.ಟಿ.ರವಿ

ರಾಹುಲ್ ಗಾಂಧಿ ಭಾರತದ ಭವಿಷ್ಯದ ಬೆಳಕು, ನನ್ನ ಹೆಮ್ಮೆಯ ನಾಯಕ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments