Webdunia - Bharat's app for daily news and videos

Install App

ನಿಮ್ಮ ಸ್ಮಾರ್ಟ್‌ಫೋನ್ ನೀರಿನಲ್ಲಿ ಬಿದ್ದರೆ ಹೀಗೆ ಮಾಡಿ

ಅತಿಥಾ
ಬುಧವಾರ, 28 ಫೆಬ್ರವರಿ 2018 (16:18 IST)
ಕೆಲವೊಮ್ಮೆ ಕೈ ಜಾರಿ ಮೊಬೈಲ್ ಫೋನ್ ನೀರಿಗೆ ಬೀಳುತ್ತದೆ. ಇತ್ತೀಚಿಗೆ ಮಾರುಕಟ್ಟೆಯಲ್ಲಿ ಕೆಲವೊಂದು ಸ್ಮಾರ್ಟ್‌ಫೋನ್‌ಗಳು ವಾಟರ್ ಪ್ರೂಫ್ ಆಗಿರುತ್ತವೆ, ಅದು ನೀರಿನಲ್ಲಿ ಬಿದ್ದರು ಏನು ಆಗುವುದಿಲ್ಲ ಆದರೆ ಸಾಮಾನ್ಯವಾಗಿ ಬಳಸುವ ಸ್ಮಾರ್ಟ್‌ಫೋನ್‌ಗಳು ವಾಟರ್ ಪ್ರೂಫ್ ಆಗಿರುವುದಿಲ್ಲ. ಅಂತಹ ಸ್ಮಾರ್ಟ್‌ಫೋನ್‌ಗಳು ನೀರಿನಲ್ಲಿ ಬಿದ್ದರೆ ಅದಕ್ಕೆ ಪರಿಹಾರವಾಗಿ ಏನು ಮಾಡಬೇಕು ಎಂದು ನಮಗೆ ತಿಳಿದಿರುವುದಿಲ್ಲ. ಬನ್ನಿ ಸ್ಮಾರ್ಟ್‌ಫೋನ್ ನೀರಿನಲ್ಲಿ ಬಿದ್ದರೆ ಏನು ಮಾಡಬೇಕು, ಏನು ಮಾಡಬಾರದು ಎಂಬುವುದನ್ನು ತಿಳಿಯೋಣ
ಮಾಡಬೇಕಾದದು - 
* ಮೊಬೈಲ್ ಫೋನ್ ನೀರಿನಲ್ಲಿ ಬಿದ್ದ ತಕ್ಷಣ, ಮೊದಲು ಫೋನ್ ಬ್ಯಾಟರಿಯನ್ನು ತೆಗೆದು, ಮೊಬೈಲ್‌ನಲ್ಲಿ ನೀರಿನ ಅಂಶವಿರದ ರೀತಿಯಲ್ಲಿ ಸ್ವಚ್ಛಗೊಳಿಸಿ.
* ಇನ್‌ಬಿಲ್ಟ್ ಬ್ಯಾಟರಿ ಫೋನ್ ಆಗಿದ್ದರೆ, ಸಿಮ್ ಸ್ಲೋಟ್ ತೆಗೆದರೆ ಸಾಕು.
* ಮೊಬೈಲ್ ಫೋನ್‌ನಲ್ಲಿರುವ ನೀರನ್ನು ಸ್ವಚ್ಛಗೊಳಿಸಿ, ಹೆಚ್ಚುವರಿ ನೀರನ್ನು ತೆಗೆದುಹಾಕಲು ನಿಮ್ಮ ಮೊಬೈಲ್ ಫೋನ್ ಅನ್ನು ಅಲ್ಲಾಡಿಸಿ.
* ಒಂದು ಪ್ಲ್ಯಾಸ್ಟಿಕ್ ಕವರ್‌ನಲ್ಲಿ ಅಕ್ಕಿಯನ್ನು ಹಾಕಿ, ಅದರೊಳಗೆ ಮೊಬೈಲ್ ಫೋನ್‌ ಹಾಕಿ ಪ್ಯಾಕ್ ಮಾಡಿ 2-3 ದಿನಗಳಕಾಲ ಇರಿಸಿ. ಹೀಗೆ ಮಾಡುವುದರಿಂದ ಮೊಬೈಲ್ ಫೋನ್‌ನಲ್ಲಿರುವ ತೇವಾಂಶವನ್ನು ಅಕ್ಕಿ ಹೀರಿಕೊಳ್ಳುತ್ತದೆ.
* 2-3 ದಿನಗಳ ನಂತರ ಮತ್ತೆ ಫೋನ್‌ನಿಂದ ತೆಗೆದ ಬ್ಯಾಟರಿ, ಮೆಮೊರಿ ಕಾರ್ಡ್, ಸಿಮ್ ಸ್ಲೋಟ್ ಅನ್ನು ಹಾಕಿ ಫೋನ್‌ ಆನ್ ಮಾಡಿ.
* ಹೀಗೆ ಮಾಡಿದ ನಂತರವೂ ಫೋನ್‌ ಆನ್ ಆಗದಿದ್ದರೆ, ಸರ್ವಿಸ್ ಸೆಂಟರ್‌ಗೆ ಭೇಟಿ ನೀಡಬೇಕಾಗುತ್ತದೆ.
 
ಮಾಡಬಾರದು - 
* ಹೇರ್ ಡ್ರೈಯರ್ ಬಳಸಿ ಮೊಬೈಲ್ ಅನ್ನು ಒಣಗಿಸಬೇಡಿ.
* ಮೊಬೈಲ್‌ನಲ್ಲಿ ನೀರು ಹೋದಾಗ ಹೇಡ್‌ಫೋನ್, ಯುಎಸ್‌ಬಿ ಕೇಬಲ್‌ಗಳನ್ನು ಪ್ಲಗ್ ಮಾಡಬೇಡಿ.
* ನೀರು ಸೇರಿಕೊಂಡ ಸಾಧನವನ್ನು ಬೇರೆ ಸಾಧನದೊಂದಿಗೆ ಪ್ಲಗ್ ಮಾಡಬೇಡಿ.
* ನೀರು ಸೇರಿಕೊಂಡ ಸಾಧನದಿಂದ ತೇವಾಂಶವನ್ನು ತೆಗೆಯುವ ವಿಚಾರದಲ್ಲಿ ಮೊಬೈಲ್‌ ಅನ್ನು ಮೈಕ್ರೋವೇವ್‌ನಲ್ಲಿ ಇರಿಸಬೇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments