Webdunia - Bharat's app for daily news and videos

Install App

ಕೊನೆಗೂ, ಜೂನ್ 30 ರಿಂದ ಗ್ರಾಹಕರಿಗೆ ತಲುಪಲಿದೆ ಫ್ರೀಡಂ 251 ಸ್ಮಾರ್ಟ್‌ಫೋನ್

Webdunia
ಶುಕ್ರವಾರ, 24 ಜೂನ್ 2016 (18:38 IST)
ನೋಯ್ಡಾ:  ವಿಶ್ವದಲ್ಲಿಯೇ ಅತಿ ಕಡಿಮೆ ದರದ ಸ್ಮಾರ್ಟ್‌ಫೋನ್ ಫ್ರೀಡಂ 251 ಮಾಡೆಲ್ ಹ್ಯಾಂಡ್‌ಸೆಟ್ ಮಾರುಕಟ್ಟೆಗೆ ಬಿಡುಗಡೆಗೊಳ್ಳಲು ಸಾಧ್ಯವಿಲ್ಲ ಎನ್ನುವ ಹಲವಾರು ಆರೋಪಗಳು ಮಧ್ಯೆ, ಕಂಪೆನಿಯ ವಿರುದ್ಧ ಎಫ್‌ಐಆರ್ ಕೂಡಾ ದಾಖಲಾಗಿತ್ತು. ಆದರೆ,ಯಾವುದಕ್ಕೂ ಹಿಂಜರಿಯದ ರಿಂಗಿಂಗ್ ಬೆಲ್ ಸಂಸ್ಥೆ, ಪ್ರಸ್ತುತ ಎರಡು ಲಕ್ಷ ಫ್ರೀಡಂ 251 ಮೊಬೈಲ್ ಹ್ಯಾಂಡ್‌ಸೆಟ್‌ಗಳನ್ನು ಗ್ರಾಹಕರಿಗೆ ವಿತರಿಸಲು ಸಿದ್ದವಾಗಿದೆ ಎಂದು ಕಂಪೆನಿಯ ವಕ್ತಾರರು ತಿಳಿಸಿದ್ದಾರೆ.
 
ರಿಂಗಿಂಗ್ ಬೆಲ್ಸ್ ಸಂಸ್ಥಾಪಕ ಮೋಹಿತ್ ಗೋಯಲ್ ಪ್ರಕಾರ, ನಮ್ಮ ಸಂಸ್ಥೆ ಗ್ರಾಹಕರಿಗೆ ನೀಡಿರುವ ಭರವಸೆಯನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
 
ಸಂಸ್ಥೆ ಈಗಾಗಲೇ 2 ಲಕ್ಷ ಫ್ರೀಡಂ 251 ಸ್ಮಾರ್ಟ್‌ಪೋನ್‌ಗಳನ್ನು ಸಿದ್ಧಪಡಿಸಿದೆ. ಜೂನ್ 30 ರಿಂದ ಗ್ರಾಹಕರಿಗೆ ವಿತರಿಸುವ ಕಾರ್ಯ ಆರಂಭವಾಗಲಿದೆ. ಮೊದಲು ನೋಂದಣಿ ಮಾಡಿಕೊಂಡಿರುವ 2 ಲಕ್ಷ ಗ್ರಾಹಕರಿಗೆ ಸ್ಮಾರ್ಟ್‌ಪೋನ್‌ಗಳನ್ನು ವಿತರಿಸಿ, ನಂತರ ಮತ್ತೆ ಬುಕ್ಕಿಂಗ್ ಪ್ರಾರಂಭ ಮಾಡುತ್ತೇವೆಂದು ಮೋಹಿತ್ ಗೋಯಲ್ ತಿಳಿಸಿದ್ದಾರೆ.
 
ನಮ್ಮ ತಪ್ಪುಗಳಿಂದ ಪಾಠ ಕಲಿತಿದ್ದೇವೆ.ಆದ್ದರಿಂದ, ನಮ್ಮ ಉತ್ಪಾದನೆ ಮಾರುಕಟ್ಟೆಗೆ ಬರುವವರೆಗೆ  ಮೌನವಾಗಿರಲು ನಿರ್ಧರಿಸಿದ್ದೇವೆ. ಇದೀಗ ನಮ್ಮ ಬಳಿ 4-ಇಂಚ್, ಡ್ಯೂಯೆಲ್ ಸಿಮ್ ಫೋನ್ ಗ್ರಾಹಕರಿಗೆ ವಿತರಿಸಲು ಸಿದ್ದವಾಗಿದೆ. ನಾವು ಗ್ರಾಹಕರಿಗೆ ನೀಡಿದ ಭರವಸೆಯನ್ನು ಈಡೇರಿಸಿದ ಸಂತಸವಿದೆ ಎಂದು ಹೇಳಿದ್ದಾರೆ.
 
ವಿಶ್ವದಲ್ಲಿ ಅತೀ ಕಡಿಮೆ ಬೆಲೆಯ ಪ್ರೀಡಂ 251 ಸ್ಮಾರ್ಟ್‌ಪೋನ್‌ಗಳು 1.3 ಜಿಎಚ್‌ಝಡ್ ಕ್ವಾಡ್ ಕೋರ್ ಪ್ರೊಸೆಸರ್, 1 ಜಿಬಿ ರ್ಯಾಮ್ ಮತ್ತು 8 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯ ಹೊಂದಿದೆ. ಈ ಪೋನ್‌ಗಳು 8 ಮೆಗಾ ಪಿಕ್ಸೆಲ್ ರಿಯರ್ ಕ್ಯಾಮೆರಾ ಮತ್ತು 3.2 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ, 1800 ಎಮ್‌ಎಚ್‌ಝಡ್ ಬ್ಯಾಟರಿ ಮತ್ತು ಆಂಡ್ರಾಯ್ಡ್ 5.1 ಲಾಲಿಪಾಪ್ ವೈಶಿಷ್ಟ್ಯ ನೀಡುವುದಾಗಿ ಸಂಸ್ಥೆ ಭರವಸೆ ನೀಡಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments