Webdunia - Bharat's app for daily news and videos

Install App

ಬಡ್ಡಿ ದರ ಕಡಿತಕ್ಕೆ ಆದ್ಯತೆ ನೀಡಿದ ವಿತ್ತ ಸಚಿವ ಅರುಣ್ ಜೇಟ್ಲಿ

Webdunia
ಶುಕ್ರವಾರ, 22 ಮೇ 2015 (15:48 IST)
ಹಣದುಬ್ಬರದ ಕುಸಿತದಿಂದ ರಿಸರ್ವ್ ಬ್ಯಾಂಕ್ ಬಡ್ಡಿ ದರವನ್ನು ಕಡಿತ ಮಾಡಲು ಸೂಕ್ತ ಕಾಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ವರದಿಗಾರರಿಗೆ ಶುಕ್ರವಾರ ತಿಳಿಸಿದರು.   ಜೂನ್ 2 ರಂದು ಆರ್‌ಬಿಐ ತನ್ನ ಹಣಕಾಸು ನೀತಿಯನ್ನು ಪರಾಮರ್ಶಿಸುತ್ತದೆ ಮತ್ತು ತನ್ನ ಪ್ರಮುಖ ಪಾಲಿಸಿ ದರವನ್ನು ಶೇ. 25 ಮೂಲಾಂಕಗಳಿಗೆ  ಕಡಿತ ಮಾಡುತ್ತದೆಂದು ಅರ್ಥಶಾಸ್ತ್ರಜ್ಞರು ನಂಬಿದ್ದಾರೆ.

ಚಿಲ್ಲರೆ ಮತ್ತು ಸಗಟು ದರಗಳಲ್ಲಿ ತೀವ್ರ ಕಡಿತದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಉಂಟಾಗಬಹುದೆಂದು ಅವರು ನಂಬಿದ್ದಾರೆ. ಬಿಜೆಪಿ ಸರ್ಕಾರ ಕಳೆದ ವರ್ಷ ಆಯ್ಕೆಯಾಗಿದ್ದ ಸಂದರ್ಭದಲ್ಲಿ ತಮ್ಮ ಸರ್ಕಾರ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ಆರ್ಥಿಕತೆಗೆ ಪುನಶ್ಚೇತನ ನೀಡುವುದಾಗಿ ಹೇಳಿತ್ತು.

ಆದರೆ ಜೇಟ್ಲಿ ಅವರು ಮಂಡಿಸಿದ ಮೊದಲ ಬಜೆಟ್‌ನಿಂದ ಆರ್ಥಿಕ ತಜ್ಞರು ತೀರಾ ನಿರಾಶರಾಗಿದ್ದರು. ಈಗ ಜೇಟ್ಲಿ ಸೂಚನೆಯಂತೆ ರಿಸರ್ವ್ ಬ್ಯಾಂಕ್ ಬಡ್ಡಿ ದರ ಕಡಿತ ಮಾಡಿದರೆ ಗ್ರಾಹಕರ  ಮನೆ ಸಾಲ, ವಾಹನ ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಕಡಿತವಾಗಬಹುದೆಂದು ನಿರೀಕ್ಷಿಸಲಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments