Webdunia - Bharat's app for daily news and videos

Install App

ಬೆಂಗಳೂರಿಗರನ್ನು ಹೊಗಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Krishnaveni K
ಗುರುವಾರ, 29 ಫೆಬ್ರವರಿ 2024 (09:39 IST)
Photo Courtesy: Twitter
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ತೆರಿಗೆದಾರರನ್ನು ಭರಪೂರ ಹೊಗಳಿದ್ದಾರೆ. ಇದಕ್ಕೆ ಕಾರಣವೂ ಇದೆ.  ಒಂದೆಡೆ ಕರ್ನಾಟಕಕ್ಕೆ ಕೇಂದ್ರ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರೆ ಇನ್ನೊಂದೆಡೆ ವಿತ್ತ ಸಚಿವೆ ಬೆಂಗಳೂರಿಗರಿಗೆ ಶಹಬಾಶ್ ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ನಿರ್ಮಿಸಲಾಗುತ್ತಿರುವ ‘ಹೊಂಗಿರಣ’ ಸಂಕೀರ್ಣಕ್ಕೆ ಶಂಕು ಸ್ಥಾಪನೆ ಕಾರ್ಯ ನೆರವೇರಿಸಿದ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ತೆರಿಗೆದಾರರ ಪ್ರಾಮಾಣಿಕತೆಯನ್ನು ಹೊಗಳಿದ್ದಾರೆ.

‘ವಿಕಸಿತ್ ಭಾರತ್ ನಿರ್ಮಿಸಲು ಬೆಂಗಳೂರಿನ ತೆರಿಗೆದಾರರ ಕೊಡುಗೆ ಅಪಾರ. ಇಲ್ಲಿನ ತೆರಿಗೆದಾರರು ನಮಗೆ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದಾರೆ. ಯಾವತ್ತೂ ಇಲ್ಲಿನ ತೆರಿಗೆದಾರರ ಉತ್ಸಾಹ ಕುಗ್ಗಿಲ್ಲ. ಇಲ್ಲಿನ ವೈಯಕ್ತಿಕ ಮತ್ತು ಕಾರ್ಪೋರೇಟ್ ತೆರಿಗೆದಾರರಿಗೆ ನನ್ನ ಧನ್ಯವಾದಗಳು ಎಂದು ನಿರ್ಮಲಾ ಹೊಗಳಿದ್ದಾರೆ.

ಇನ್ನು, ರಾಜ್ಯ ಸರ್ಕಾರ ಪದೇ ಪದೇ ಕೇಂದ್ರದ ಮೇಲೆ ತೆರಿಗೆ ತಾರತಮ್ಯ ಆರೋಪ ಮಾಡುತ್ತಿರುವುದಕ್ಕೆ ಪರೋಕ್ಷವಾಗಿ ಸಚಿವರು ತಿರುಗೇಟು ನೀಡಿದ್ದಾರೆ. ಕರ್ನಾಟಕ ರಾಜ್ಯದ ಹಣ ಮತ್ತೆ ರಾಜ್ಯಕ್ಕೇ ಹಿಂತಿರುಗುತ್ತಿದೆ. ಇಲ್ಲಿನ ರಸ್ತೆ, ಮೆಟ್ರೋ, ಬಂದರು ನಿರ್ಮಾಣಕ್ಕೇ ಉಪಯೋಗವಾಗುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments