Webdunia - Bharat's app for daily news and videos

Install App

ಬೆಂಗಳೂರಿಗರನ್ನು ಹೊಗಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Krishnaveni K
ಗುರುವಾರ, 29 ಫೆಬ್ರವರಿ 2024 (09:39 IST)
Photo Courtesy: Twitter
ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ತೆರಿಗೆದಾರರನ್ನು ಭರಪೂರ ಹೊಗಳಿದ್ದಾರೆ. ಇದಕ್ಕೆ ಕಾರಣವೂ ಇದೆ.  ಒಂದೆಡೆ ಕರ್ನಾಟಕಕ್ಕೆ ಕೇಂದ್ರ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರೆ ಇನ್ನೊಂದೆಡೆ ವಿತ್ತ ಸಚಿವೆ ಬೆಂಗಳೂರಿಗರಿಗೆ ಶಹಬಾಶ್ ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಾಗಿ ನಿರ್ಮಿಸಲಾಗುತ್ತಿರುವ ‘ಹೊಂಗಿರಣ’ ಸಂಕೀರ್ಣಕ್ಕೆ ಶಂಕು ಸ್ಥಾಪನೆ ಕಾರ್ಯ ನೆರವೇರಿಸಿದ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ತೆರಿಗೆದಾರರ ಪ್ರಾಮಾಣಿಕತೆಯನ್ನು ಹೊಗಳಿದ್ದಾರೆ.

‘ವಿಕಸಿತ್ ಭಾರತ್ ನಿರ್ಮಿಸಲು ಬೆಂಗಳೂರಿನ ತೆರಿಗೆದಾರರ ಕೊಡುಗೆ ಅಪಾರ. ಇಲ್ಲಿನ ತೆರಿಗೆದಾರರು ನಮಗೆ ಸಂಪೂರ್ಣವಾಗಿ ಸಹಕಾರ ನೀಡುತ್ತಿದ್ದಾರೆ. ಯಾವತ್ತೂ ಇಲ್ಲಿನ ತೆರಿಗೆದಾರರ ಉತ್ಸಾಹ ಕುಗ್ಗಿಲ್ಲ. ಇಲ್ಲಿನ ವೈಯಕ್ತಿಕ ಮತ್ತು ಕಾರ್ಪೋರೇಟ್ ತೆರಿಗೆದಾರರಿಗೆ ನನ್ನ ಧನ್ಯವಾದಗಳು ಎಂದು ನಿರ್ಮಲಾ ಹೊಗಳಿದ್ದಾರೆ.

ಇನ್ನು, ರಾಜ್ಯ ಸರ್ಕಾರ ಪದೇ ಪದೇ ಕೇಂದ್ರದ ಮೇಲೆ ತೆರಿಗೆ ತಾರತಮ್ಯ ಆರೋಪ ಮಾಡುತ್ತಿರುವುದಕ್ಕೆ ಪರೋಕ್ಷವಾಗಿ ಸಚಿವರು ತಿರುಗೇಟು ನೀಡಿದ್ದಾರೆ. ಕರ್ನಾಟಕ ರಾಜ್ಯದ ಹಣ ಮತ್ತೆ ರಾಜ್ಯಕ್ಕೇ ಹಿಂತಿರುಗುತ್ತಿದೆ. ಇಲ್ಲಿನ ರಸ್ತೆ, ಮೆಟ್ರೋ, ಬಂದರು ನಿರ್ಮಾಣಕ್ಕೇ ಉಪಯೋಗವಾಗುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿ ಬೆಲೆ ಇಳಿಮುಖದತ್ತ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೆಮ್ಮಿದಾಗ ಎದೆನೋವಾಗುತ್ತಿದ್ದರೆ ಏನರ್ಥ

ರಾಬರ್ಟ್ ವಾದ್ರಾ ವಿರುದ್ಧ ಇಡಿ ಚಾರ್ಜ್ ಶೀಟ್: ಮುಗಿಬಿದ್ದ ಕಾಂಗ್ರೆಸ್ ನಾಯಕರು

ಪಹಲ್ಗಾಮ್ ದಾಳಿ ಮಾಡಿದ್ದ ಟಿಆರ್ ಎಫ್ ಸಂಘಟನೆ ಉಗ್ರರ ಲಿಸ್ಟ್ ಗೆ

ಮುಂದಿನ ಸುದ್ದಿ
Show comments