Webdunia - Bharat's app for daily news and videos

Install App

ಬ್ಯಾಂಕ್‌ಗಳಿಗೆ ಪ್ಯಾಕೇಜ್ ಕುರಿತು ಹಣಕಾಸು ಸಚಿವಾಲಯ ಚಿಂತನೆ

Webdunia
ಬುಧವಾರ, 1 ಜುಲೈ 2015 (15:51 IST)
ವಸೂಲಾಗದ ಸಾಲಗಳಿಂದ ಜರ್ಜರಿತವಾದ ಬ್ಯಾಂಕ್‌ಗಳಿಗೆ ನೆರವಾಗಲು ಹಣಕಾಸು ಸಚಿವಾಲಯ ಸಮಗ್ರ ಪ್ಯಾಕೇಜ್  ಬಗ್ಗೆ ಪರಿಶೀಲಿಸುತ್ತಿದೆ ಎಂದು ಹಣಕಾಸು ರಾಜ್ಯ ಸಚಿವ ಜಯಂತ್ ಸಿನ್ಹಾ ಬುಧವಾರ ತಿಳಿಸಿದರು. 
 
ಕಳೆದ ಮೂರು ವರ್ಷಗಳಿಂದ ಆರ್ಥಿಕ ಹಿಂಜರಿತದ ನಡುವೆ ವಸೂಲಾಗದ ಸಾಲಗಳಿಂದ ಬ್ಯಾಂಕ್‌ಗಳು ಮತ್ತಷ್ಟು ಸಾಲ ನೀಡುವುದಕ್ಕೆ ವಿಫಲವಾಗುತ್ತಿವೆ. ರಿಸರ್ವ್ ಬ್ಯಾಂಕ್ ಮೂರು ಬಾರಿ ಬಡ್ಡಿ ದರಗಳನ್ನು ಕಡಿತ ಮಾಡಿದ್ದರೂ ಬ್ಯಾಂಕ್‌ಗಳಿಗೆ ಹೆಚ್ಚಿನ ಸಾಲ ನೀಡುವುದಕ್ಕೆ ಸಾಧ್ಯವಾಗುತ್ತಿಲ್ಲ.  ಇದರಿಂದ ಮೂಲಸೌಲಭ್ಯ ಮುಂತಾದ ಪ್ರಮುಖ ಕ್ಷೇತ್ರಗಳನ್ನು ಪುನಶ್ಚೇತನಗೊಳಿಸುವ ಸರ್ಕಾರದ ಯೋಜನೆಗೆ ಅಡ್ಡಿಯಾಗಿದೆ. 
 
ಆರ್‌ಬಿಐ ಮೂರನೇ ಬಾರಿಗೆ ಬ್ಯಾಂಕ್ ಬಡ್ಡಿದರಗಳನ್ನು ಕಡಿತಮಾಡಿದ್ದು, ಬ್ಯಾಂಕ್‌ಗಳಿಗೆ ಕೂಡ ಗ್ರಾಹಕರ ಗೃಹ, ವಾಹನ ಸಾಲ ಮತ್ತಿತರ ಸಾಲಗಳ ಮೇಲಿನ ಬಡ್ಡಿ ದರಗಳಲ್ಲಿ ಕಡಿತ ಮಾಡಬೇಕೆಂದು ಸೂಚಿಸಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments