Webdunia - Bharat's app for daily news and videos

Install App

ಫ್ರೀಡಂ 251: ಮೇ ತಿಂಗಳಲ್ಲಿ ಗ್ರಾಹಕರಿಗೆ ಸ್ಮಾರ್ಟ್‌ಫೋನ್ ವಿತರಣೆ

Webdunia
ಶನಿವಾರ, 30 ಏಪ್ರಿಲ್ 2016 (19:46 IST)
ವಿಶ್ವದಲ್ಲೇ ಅತಿ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ನೀಡುವುದಾಗಿ ಭಾರಿ ಸುದ್ದಿ ಮಾಡಿದ್ದ ರಿಂಗಿಂಗ್ ಬೆಲ್ಸ್ ಸಂಸ್ಥೆ, ಸ್ಮಾರ್ಟ್‌ಪೋನ್‌ ಮಾರುಕಟ್ಟೆಯಲ್ಲಿ ಸಾಕಷ್ಟು ವಿವಾದದ ಜೊತೆಗೆ ಹೊಸ ಸಂಚಲವನ್ನು ಮೂಡಿಸಿತ್ತು.
ಮಾಧ್ಯಮಗಳ ಹೊಸ ವರದಿಯ ಪ್ರಕಾರ, ಫ್ರೀಡಂ 251 ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ರಿಂಗಿಂಗ್ ಬೆಲ್ಸ್, ಮೊದಲನೆಯ ಬ್ಯಾಚ್‌ನ ಗ್ರಾಹಕರಿಗೆ ಸ್ಮಾರ್ಟ್‌ಪೋನ್ ನೀಡುವುದಾಗಿ ಭರವಸೆ ನೀಡಿದೆ.
 
ಟೆಕ್ನಾಲಾಜಿ ವೆಬ್‌ಸೈಟ್ ಟೆಕ್‌ರಡಾರ್ ವರದಿಯ ಪ್ರಕಾರ, ಫ್ರೀಡಂ 251 ಸ್ಮಾರ್ಟ್‌ಪೋನ್‌ಗಳನ್ನು ಹಣ ಪಾವತಿ ಮಾಡುವ ಮೂಲಕ ಬುಕ್ ಮಾಡಿರುವ ಮೊದಲ 30 ಸಾವಿರ ಗ್ರಾಹಕರಿಗೆ ರಿಂಗಿಂಗ್ ಬೆಲ್ಸ್ ಸಂಸ್ಥೆ ಮೊಬೈಲ್ ಪೋನ್‌ಗಳನ್ನು ನೀಡಲಿದೆ ಎಂದು ವರದಿ ಮಾಡಿದೆ.
 
ರಿಂಗಿಂಗ್ ಬೆಲ್ಸ್ ಸಂಸ್ಥೆ, ಮೇ ತಿಂಗಳಲ್ಲಿ ಗ್ರಾಹಕರಿಗೆ ಸ್ಮಾರ್ಟ್‌ಪೋನ್ ತಲುಪಿಸಲಿದೆ ಎಂದು ಮೂಲಗಳು ತಿಳಿಸಿವೆ. 
 
ಪ್ರಸಕ್ತ ಸಾಲಿನ ಫೆಬ್ರುವರಿ ತಿಂಗಳಲ್ಲಿ ರಿಂಗಿಂಗ್ ಬೆಲ್ಸ್ ಸಂಸ್ಥೆ, ವಿಶ್ವದಲ್ಲೇ ಅತಿ ಕಡಿಮೆ ಬೆಲೆಗೆ ಸ್ಮಾರ್ಟ್ ಫೋನ್ ನೀಡುವುದಾಗಿ ಭಾರಿ ಸುದ್ದಿ ಮಾಡಿದ್ದು, ಗ್ರಾಹಕರು ಸಹ ಕಡಿಮೆ ಬೆಲೆಯ ಸ್ಮಾರ್ಟ್‌ಪೋನ್‌ ಕೊಳ್ಳಲು ಮುಗಿ ಬಿದ್ದಿದ್ದರು. 
 
ನಾವು ಮತ್ತೆ ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದರೆ, ಇದೀಗ ಸ್ಮಾರ್ಟ್‌ಪೋನ್ ಬುಕಿಂಗ್ ಮುಕ್ತಾಯಗೊಂಡಿದೆ ಎಂದು ತೊರಿಸುತ್ತಿದೆ. ಸಂಸ್ಥೆ ಇ-ಮೇಲ್‌ಗಳನ್ನು ಕಂಪೈಲ್ ಮಾಡುತ್ತಿದ್ದು, ಮೊದಲು ಸ್ಮಾರ್ಟ್‌ಪೋನ್ ಬುಕ್ ಮಾಡಿರುವ 25 ಲಕ್ಷ ಗ್ರಾಹಕರಿಗೆ, ಶೀಘ್ರದಲ್ಲಿ ಪೋನ್‌ ತಲುಪಿಸುವ ಪ್ರಕ್ರಿಯೆಯಲ್ಲಿ ತೊಡಗಿದೆ ಎಂದು ಮೂಲಗಳು ತಿಳಿಸಿವೆ.
 
888 ರೂಪಾಯಿಗಳಲ್ಲಿ ಡೊಕೊಸ್ಸ್ ಎಕ್ಸ್-1 ಸ್ಮಾರ್ಟ್‌ಪೋನ್ ನೀಡುವುದಾಗಿ ಭರವಸೆ ನೀಡಿರುವ ಜೈಪುರ್ ಮೂಲದ ಡೊಕೊಸ್ಸ್ ಸಂಸ್ಥೆ ರಿಂಗಿಂಗ್ ಬೆಲ್ಸ್ ಸಂಸ್ಥೆಗೆ ತೀವ್ರ ಪೈಪೋಟಿ ನೀಡುತ್ತಿದೆ. ನಿನ್ನೆ ಡೊಕೊಸ್ಸ್ ಎಕ್ಸ್-1 ಆವೃತ್ತಿಯ ಪೋನ್‌ಗಳು ಅನಾವರಣಗೊಂಡಿದ್ದು, ಈ ಪೋನ್‌ಗಳು ಮೇ 2 ರಂದು ಬಿಡುಗಡೆ ಹೊಂದುತ್ತಿವೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments