Webdunia - Bharat's app for daily news and videos

Install App

Gold Price Today: ಮತ್ತೆ ಶಾಕ್ ಆಗುವಂತಿದೆ ಚಿನ್ನದ ದರ, ಇಂದು ಎಷ್ಟಾಗಿದೆ ನೋಡಿ

Krishnaveni K
ಮಂಗಳವಾರ, 6 ಮೇ 2025 (11:14 IST)
ಬೆಂಗಳೂರು: ಚಿನ್ನದ ದರ ಎರಡು ದಿನಗಳ ಹಿಂದೆ ಸತತವಾಗಿ ಇಳಿಕೆಯಾಗಿದ್ದರಿಂದ ಗ್ರಾಹಕರು ನೆಮ್ಮದಿಯಾಗಿದ್ದರು. ಆದರೆ ಈಗ ಮತ್ತೆ ಶಾಕ್ ಆಗುವಂತೆ ಚಿನ್ನದ ದರ ಏರಿಕೆಯಾಗುತ್ತಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಸತತ ಎರಡು ದಿನ ಇಳಿಕೆಯಾಗಿತ್ತು. ಲಕ್ಷದ ಗಡಿ ದಾಟಿದ್ದ ಚಿನ್ನದ ದರ ಇಳಿಕೆಯಾಗಿದ್ದರಿಂದ ಗ್ರಾಹಕರೂ ನೆಮ್ಮದಿಯಾಗಿದ್ದರು. ಆದರೆ ವಾರದ ಆರಂಭದಲ್ಲೇ ಕೊಂಚ ಏರಿಕೆಯಾಗಿದ್ದು ಮತ್ತೆ ಗ್ರಾಹಕರ ಚಿಂತೆಗೆ ಕಾರಣವಾಗಿದೆ. ಚಿನ್ನದ ಬೆಲೆ ಇಳಿಕೆಯಾಗಬಹುದು ಎಂದು ನಿರೀಕ್ಷಿಸಿದ್ದ ಗ್ರಾಹಕರಿಗೆ ಇಂದಿನ ಬೆಲೆ ಶಾಕ್ ಆಗುವಂತಿದೆ. ಪರಿಶುದ್ಧ ಚಿನ್ನದ ಬೆಲೆ ನಿನ್ನೆ 96,555 ರೂ.ಗಳಷ್ಟಿದೆ. ಇಂದು ಮತ್ತಷ್ಟು ಏರಿಕೆಯಾಗಿದ್ದು 98,385.00 ರೂ.ಗೆ ಬಂದು ನಿಂತಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂಗೆ 250 ರೂ. ಏರಿಕೆಯಾಗಿದ್ದು 9,025 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಪ್ರತೀ ಗ್ರಾಂಗೆ 273 ರೂ. ಏರಿಕೆಯಾಗಿದ್ದು 9,846 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆ ಇಂದು ಗ್ರಾಂಗೆ 204 ಏರಿಕೆಯಾಗಿದ್ದು 7,384 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ದರ ಮೊನ್ನೆಯಿಂದ ಇಳಿಕೆಯತ್ತ ಸಾಗಿದೆ.  ಇಂದೂ ಕೂಡಾ ಬೆಳ್ಳಿ ದರ ಮತ್ತೆ ಇಳಿಕೆಯಾಗಿದೆ. ಇಂದು ಪ್ರತೀ ಕೆ.ಜಿ. ಬೆಳ್ಳಿ ಬೆಲೆ 100 ರೂ. ನಷ್ಟು ಇಳಿಕೆಯಾಗಿದ್ದು ಇಂದು 96,900 ರೂ.ಗಳಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತ ಯುದ್ಧವೇ ಮಾಡಿಲ್ಲ, ಆಗಲೇ ನಮ್ಮ ಸಪೋರ್ಟ್ ಪಾಕಿಸ್ತಾನಕ್ಕೆ ಎಂದ ಚೀನಾ

Mangaluru Suhas Shetty murder: ಮಂಗಳೂರು ಸುಹಾಸ್ ಶೆಟ್ಟಿ ಹತ್ಯೆಗೆ ಮುಸ್ಲಿಂ ಹೆಡ್ ಕಾನ್ಸ್ ಟೇಬಲ್ ಕೈವಾಡ

Mock Drill: ಮಾಕ್ ಡ್ರಿಲ್ ಎಂದರೇನು, ಹೇಗೆ ಮಾಡಲಾಗುತ್ತದೆ, ಯುದ್ಧಕ್ಕೆ ಸಿದ್ಧತೆ ಹೇಗಿರುತ್ತದೆ ಇಲ್ಲಿದೆ ಡೀಟೈಲ್ಸ್

Karnataka Weather: ಇಂದು ಈ ಭಾಗಗಳಿಗೆ ಮಳೆ ನಿರೀಕ್ಷೆಯೇ ಬೇಡ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಮುಂದಿನ ಸುದ್ದಿ
Show comments