Webdunia - Bharat's app for daily news and videos

Install App

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಸಿಹಿ ಸುದ್ದಿ

Webdunia
ಶನಿವಾರ, 17 ನವೆಂಬರ್ 2018 (14:04 IST)
ಬೆಂಗಳೂರು : ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಒಂದು ಸಿಹಿ ಸುದ್ಧಿ.ಇನ್ನುಮುಂದೆ ವಾಹನ ಸವಾರರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಚಿಂತಿಸುವ ಅಗತ್ಯವಿಲ್ಲ.


ಹೌದು. ಬೆಸ್ಕಾಂ ವಾಹನ ಸವಾರರಿಗೆ ಕಡಿಮೆ ದರದಲ್ಲಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಮಾಡುವ ಕೇಂದ್ರಗಳನ್ನು ಸ್ಥಾಪಿಸಿದೆ. ಸಿಎಂ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ನೂತನ ಚಾರ್ಜಿಂಗ್ ಕೇಂದ್ರಗಳಿಗೆ ಚಾಲನೆ ನೀಡಿದ್ದಾರೆ.


ಬೈಕ್ ಮತ್ತು ಕಾರುಗಳಿಗೆ ಚಾರ್ಜಿಂಗ್ ಕೇಂದ್ರದ ಮೂಲಕ ಚಾರ್ಜ್ ಮಾಡಲು ಬೆಂಗಳೂರಿನಲ್ಲಿ 14 ಕಡೆ ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಬೆಸ್ಕಾಂ ಕೇಂದ್ರ ಕಚೇರಿ, ವಿಧಾನಸೌಧ ಹಾಗೂ ಕೆಇಆರ್ ಸಿ ಕಚೇರಿಯಲ್ಲಿ ಈ ವ್ಯವಸ್ಥೆ ಇರಲಿದೆ. ಪ್ರತಿ ಯೂನಿಟ್ ಚಾರ್ಜ್ ಗೆ 4 ರೂಪಾಯಿ 85 ಪೈಸೆ ನಿಗದಿ ಪಡಿಸಿದ್ದು, ಕಿಲೋ ವ್ಯಾಟ್ ಗೆ 50 ರೂಪಾಯಿ ಆಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments