Webdunia - Bharat's app for daily news and videos

Install App

ಭವಿಷ್ಯ ಬಡ್ಡಿ ದರದಲ್ಲಿ ಇಳಿಕೆ: ಪ್ರತಿಭಟನೆಗೆ ಸಂಘಟನೆಗಳ ನಿರ್ಧಾರ

Webdunia
ಮಂಗಳವಾರ, 26 ಏಪ್ರಿಲ್ 2016 (19:44 IST)
ಕಾರ್ಮಿಕರ ಭವಿಷ್ಯ ನಿಧಿ ಠೇವಣಿಗಳಿಗೆ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ನಿಗದಿಗೊಳಿಸಿದ್ದ 8.8 ಪ್ರತಿಶತ ಬಡ್ಡಿ ದರದ ಬದಲು 8.7 ಪ್ರತಿಶತ ದರದಲ್ಲಿ ಬಡ್ಡಿ ನೀಡಲು ಹಣಕಾಸು ಸಚಿವಾಲಯ ಒಪ್ಪಿಗೆ ನೀಡಿದೆ. 
ನೌಕರರ ಭವಿಷ್ಯ ನಿಧಿ ಠೇವಣಿ ಮೇಲಿನ ಬಡ್ಡಿ ದರ ಕಡಿಮೆ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ ಎಂದು ಆರ್‌ಎಸ್‌ಎಸ್ ಬೆಂಬಲಿತ ಭಾರತೀಯ ಮಜ್ದೂರ್‌ ಸಂಘವು ಏಪ್ರಿಲ್ 27ರಂದು ದೇಶದಾದ್ಯಂತ ಭವಿಷ್ಯ ನಿಧಿ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸುವುದಾಗಿ ತಿಳಿಸಿದೆ.
 
ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ನಿರ್ಧಾರವನ್ನು ಸರಕಾರ ಪ್ರಥಮ ಭಾರಿ ತಳ್ಳಿಹಾಕಿದೆ. ನೌಕರರ ಭವಿಷ್ಯ ನಿಧಿ ಠೇವಣಿ ಮೇಲಿನ ಬಡ್ಡಿ ದರ 2013-14 ಮತ್ತು 2014-15 ರ ಆರ್ಥಿಕ ವರ್ಷದಲ್ಲಿ 8.75 ಪ್ರತಿಶತ ಬಡ್ಡಿದರ, 2012-13 ರ ಆರ್ಥಿಕ ವರ್ಷದಲ್ಲಿ 8.5 ಪ್ರತಿಶತ ಬಡ್ಡಿದರ ಮತ್ತು 2011-12 ಆರ್ಥಿಕ ವರ್ಷದಲ್ಲಿ 8.25 ಪ್ರತಿಶತ ಬಡ್ಡಿದರವನ್ನು ನಿಗದಿ ಪಡಿಸಿದ್ದು, ಕಾರ್ಮಿಕ ಸಂಘಟನೆಗಳು ಪ್ರಸಕ್ತ ವರ್ಷದಲ್ಲಿ 9 ಪ್ರತಿಶತ ಬಡ್ಡಿದರವನ್ನು ನಿಗದಿ ಮಾಡುವಂತೆ ಆಗ್ರಹಿಸಿದ್ದವು.
 
ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟೀಸ್ ಪ್ರಸಕ್ತ ವರ್ಷದ ಫೆಬ್ರುವರಿಯಲ್ಲಿ ನಡೆದ ಸಭೆಯಲ್ಲಿ ನೌಕರರ ಭವಿಷ್ಯ ನಿಧಿ ಠೇವಣಿಯ ಮೇಲೆ 8.8 ಪ್ರತಿಶತ ಬಡ್ಡಿದರ ನಿಗದಿ ಮಾಡುವಂತೆ ಪ್ರಸ್ತಾವನೆ ನೀಡಿತ್ತು ಎಂದು ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments