Webdunia - Bharat's app for daily news and videos

Install App

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ. 50 ಮೀಸಲಾತಿಗೆ ಚಿಂತನೆ

Webdunia
ಮಂಗಳವಾರ, 27 ಡಿಸೆಂಬರ್ 2016 (11:23 IST)
ಸರ್ಕಾರದ ಸೌಲಭ್ಯಗಳನ್ನು ಪಡೆದು ರಾಜ್ಯದಲ್ಲಿ ಕೈಗಾರಿಕೆಗಳನ್ನು ನಡೆಸುತ್ತಿರುವ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ನೌಕರಿಯಲ್ಲಿ ಶೇ. 70 ರಷ್ಟು ಉದ್ಯೋಗ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.
 
ಉದ್ದಿಮೆದಾರರು ಉದ್ಯೋಗ ನೀಡದಿದ್ದರೆ ಯಾವ ರೀತಿ ಕ್ರಮ ಜರುಗಿಸಬೇಕು ಎಂಬುದನ್ನು ಕಾನೂನು ಇಲಾಖೆ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಕಾನೂನು ಇಲಾಖೆ ಜೊತೆ ಚರ್ಚೆ ನಡೆಯುತ್ತಿದ್ದು ಈ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಚಿವ ಸಂಪುಟದ ಮುಂದೆ ತಂದು ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗುವುದು ಎಂದರು.
 
ಕೈಗಾರಿಕೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ. 50 ರಷ್ಟು ಎ ಮತ್ತು ಬಿ ದರ್ಜೆ ಹುದ್ದೆಗಳಲ್ಲಿ ಶೇ. 20 ರಷ್ಟು ಮೀಸಲಿಡಬೇಕು ಎಂದ ಸಚಿವರು ಒಟ್ಟಾರೆ ಶೇ. 70 ರಷ್ಟು ಹುದ್ದೆಗಳು ಸ್ಥಳೀಯರಿಗೆ ಸಿಗಬೇಕು ಎಂಬುದು ಸರ್ಕಾರದ ಬಯಕೆಯಾಗಿದೆ ಎಂದರು.
 
ರಾಜ್ಯದಲ್ಲಿ ಸುಮಾರು 16,000 ಕೈಗಾರಿಕೆಗಳಿಗೆ ಎಲ್ಲದರಲ್ಲೂ ಕನ್ನಡಿಗರಿಗೆ ಆದ್ಯತೆ ಮೇಲೆ ಉದ್ಯೋಗ ಕಲ್ಪಿಸಬೇಕು ಎಂಬ ಉದ್ದೇಶದಿಂದ ಈ ಮಸೂದೆಯನ್ನು ಜಾರಿಗೆ ತರಲಾಗುತ್ತಿದೆ. ಪ್ರಸ್ತುತ ಎಷ್ಟು ಕೈಗಾರಿಕೆಗಳು ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿವೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ ಮಾಹಿತಿ ತರಿಸಲಾಗುವುದು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ರಾಹುಲ್ ಗಾಂಧಿ ಆಮೇಲೆ, ಮೊದಲು ಇವರನ್ನು ಮೀಟ್ ಮಾಡಲಿರುವ ಸಿಎಂ, ಡಿಸಿಎಂ

ಮುಂದಿನ ಸುದ್ದಿ
Show comments