Webdunia - Bharat's app for daily news and videos

Install App

ಜಿಎಸ್ ಟಿ ಕಡಿತವಾದ್ರೆ ಜನರಿಗೆ ಲಾಭ: ಇಂಡಿಯಾ ಒಕ್ಕೂಟದ ರಾಜ್ಯಗಳ ವಿರೋಧ ಯಾಕೆ

Krishnaveni K
ಬುಧವಾರ, 3 ಸೆಪ್ಟಂಬರ್ 2025 (11:04 IST)
Photo Credit: Instagram
ನವದೆಹಲಿ: ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ದೀಪಾವಳಿ ವೇಳೆಗೆ ಜನರಗೆ ಜಿಎಸ್ ಟಿ ಕಡಿತದ ಉಡುಗೊರೆ ನೀಡುವುದಾಗಿ ಘೋಷಿಸಿದ್ದರು. ಅದರಂತೆ ಇಂದು ಜಿಎಸ್ ಟಿ ಮಂಡಳಿ ಸಭೆ ನಡೆಸಲಿದೆ. ಆದರೆ ಜಿಎಸ್ ಟಿ ಕಡಿತಕ್ಕೆ ಇಂಡಿಯಾ ಒಕ್ಕೂಟದ ರಾಜ್ಯಗಳು ವಿರೋಧಿಸುತ್ತಿರುವುದು ಯಾಕೆ?

ಅದರಂತೆ ಇಂದು ದೇಶದ ತೆರಿಗೆ ವ್ಯವಸ್ಥೆಗೆ ಅತೀ ದೊಡ್ಡ ಬದಲಾವಣೆ ತರಲು ಇಂದು ಜಿಎಸ್ ಟಿ ಮಂಡಳಿ ಸಭೆ ನಡೆಸಲಿದೆ. ಇಂದಿನಿಂದ ಎರಡು ದಿನಗಳ ಕಾಲ ಸಭೆ ನಡೆಯಲಿದ್ದು ಈ ಸಭೆಯಲ್ಲಿ ತೆರಿಗೆ ಕಡಿತ, ಜಿಎಸ್ ಟಿ ಕಡಿತದ ಬಗ್ಗೆ ಪ್ರಮುಖವಾಗಿ ತೀರ್ಮಾನವಾಗಲಿದೆ.

ಈಗ ಇರುವ ನಾಲ್ಕು ಜಿಎಸ್ ಟಿ ಸ್ಲ್ಯಾಬ್ ಗಳ ಬದಲಾಗಿ ಎರಡು ಸ್ಲ್ಯಾಬ್ ಗಳಿಗೆ ಕಡಿತಗೊಳಿಸಲು ಕೇಂದ್ರ ತೀರ್ಮಾನಿಸಿದೆ. ಇದರಿಂದ ಮಧ್ಯಮ ವರ್ಗದವರಿಗೆ ಲಾಭವಾಗಲಿದೆ. ದಿನ ಬಳಕೆಯ ಅನೇಕ ವಸ್ತುಗಳ ಬೆಲೆ ಕಡಿತವಾಗಲಿದೆ.

ಆದರೆ ಇದಕ್ಕೆ ಇಂಡಿಯಾ ಒಕ್ಕೂಟದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಿವೆ. ಇದರಿಂದ ರಾಜ್ಯಕ್ಕೆ ಬರುವ ಜಿಎಸ್ ಟಿ ಆದಾಯದಲ್ಲಿ ಕಡಿತವಾಗಲಿದೆ ಎನ್ನುವುದು ಆ ರಾಜ್ಯಗಳ ಆರೋಪವಾಗಿದೆ. ಹೀಗಾಗಿ ಆ ನಷ್ಟವನ್ನು ಕೇಂದ್ರ ಭರಿಸಿಕೊಡಬೇಕು ಎಂಬುದು ಅವರ ಒತ್ತಾಯ. ಆದರೆ ಉಳಿದಂತೆ ಬಹುತೇಕ ರಾಜ್ಯಗಳು ಇದಕ್ಕೆ ಒಪ್ಪಿದ್ದು, ಸೆಪ್ಟೆಂಬರ್ 22 ರಿಂದಲೇ ಹೊಸ ಜಿಎಸ್ ಟಿ ನಿಯಮ ಜಾರಿಗೆ ಬರುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ತಾಲಿಬಾನ್ ಸರ್ಕಾರವಿದೆ: ಪ್ರತಾಪ ಸಿಂಹ ಆಕ್ರೋಶ

ಮದ್ದೂರು ಗಣೇಶ ಗಲಾಟೆ: ದೇಶದಾದ್ಯಂತ ವೈರಲ್ ಆಯ್ತು ಈ ಒಂದು ವಿಡಿಯೋ

ಕಾಂಗ್ರೆಸ್ ಸರ್ಕಾರ ಅವನತಿ ಆರಂಭವಾಗಿದೆ: ಕುಮಾರಸ್ವಾಮಿ

ಮದ್ದೂರು ಗಲಾಟೆ ಹಾಗಿರಲಿ, ಮೊದಲು ನಿಮ್ಮ ಆರೋಗ್ಯ ನೋಡ್ಕೊಳ್ಳಿ ಕುಮಾರಣ್ಣ ಎಂದ ಜನ

ಒತ್ತಡಕ್ಕೆ ಮಣಿದರೆ ಖುದ್ದು ನಾನೇ ಮದ್ದೂರಿಗೆ ಬರಬೇಕಾಗುತ್ತೆ: ಕೇಂದ್ರ ಸಚಿವ ಎಚ್‌ಡಿಕೆ ವಾರ್ನಿಂಗ್‌

ಮುಂದಿನ ಸುದ್ದಿ
Show comments