10 ನಿಮಿಷದಲ್ಲೇ ಆನ್ಲೈನ್ ನಲ್ಲಿ ರೇಷನ್ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ

Webdunia
ಶುಕ್ರವಾರ, 20 ಜುಲೈ 2018 (07:24 IST)
ಬೆಂಗಳೂರು : ರೇಷನ್ ಕಾರ್ಡ್ ಮಾಡುವ ಸಲುವಾಗಿ ಕಚೇರಿಗಳಿಗೆ ಅಲೆದಾಡುತ್ತಾ ಕೆಲವು ಅಧಿಕಾರಿಗಳ ಲಂಚದ ಆಸೆಗೆ ರೋಸಿ ಹೋಗಿರುವ ಜನರಿಗೆ ಸರ್ಕಾರ ಸಿಹಿಸುದ್ದಿಯೊಂದನ್ನು  ನೀಡಿದೆ.


ಇನ್ನು ಮುಂದೆ  ರೇಷನ್ ಕಾರ್ಡ್ ಮಾಡಲು ಕಚೇರಿಯಿಂದ ಮನೆಗೆ ಅಲೆಯಬೇಕಾಗಿಲ್ಲ. ಆನ್ಲೈನ್ ಮೂಲಕ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ನಿಮ್ಮ ಪಡಿತರ ಚೀಟಿಗಳಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.


ಕೇವಲ ಹತ್ತು ನಿಮಿಷದಲ್ಲಿ ಪಡಿತರ ಚೀಟಿ ಪಡೆಯಬಹುದಾಗಿದೆ. ಇದಕ್ಕೆ ಮಾಡಬೇಕಾಗಿರುವುದು ಇಷ್ಟೇ. ಮೊದಲನೇಯದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ಸೈಟ್ https://ahara.kar.nic.in/home.aspx ಪುಟ ತೆರೆಯಬೇಕು. ಇಲ್ಲಿ ಕಾಣುವ ಇ-ಸೇವೆಗಳು ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಅನೇಕ ಆಯ್ಕೆಗಳು ಕಾಣಲಿವೆ ಆದರೆ ನಿಮಗೆ ಬೇಕಾಗಿರುವ ಇ-ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿ ಮುಂದುವರೆಯಿರಿ.


ನಂತರ ಕಾಣುವ ಹೊಸ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿದರೆ ಕನ್ನಡ, ಇಂಗ್ಲೀಷ ಎರಡು ಭಾಷೆಗಳನ್ನು ಕಾಣುತ್ತವೆ. ಇಲ್ಲಿ ನಿಮಗೆ ಬೇಕಾಗುವ ಭಾಷೆಯನ್ನು ಆಯ್ಕೆ ಮಾಡಿ. ಕನ್ನಡ ಭಾಷೆ ಆಯ್ಕೆ ಮಾಡಿರುವವರು ಮುಂದಿನ ಹಂತದಲ್ಲಿ ಕಾಣುವ ಹೊಸ ಪಡಿತರ ಚೀಟಿ ಮೇಲೆ ಕ್ಲಿಕ್ ಮಾಡಿ.


ನಂತರ ಮುಂದೆ ಆದ್ಯತಾ ಕುಟುಂಬ ಹಾಗು ಆದ್ಯತೇತರ ಕುಟುಂಬ ಎಂಬ ಎರಡು ಆಯ್ಕೆಗಳು ನಿಮಗೆ ಕಾಣಲಿವೆ. ಇದರಲ್ಲಿ ನಿಮ್ಮ ಆಯ್ಕೆ ಯಾವುದು ಎಂಬುದನ್ನು ಅವುಗಳ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಆಧಾರ್ ಸಂಖ್ಯೆ ಮತ್ತು ಮೊಬೈಲ್ ನಂಬರ್ ನೀಡಬೇಕು. ನಂತರ ಮೊಬೈಲ್ ನಂಬರ್ ಗೆ ಬರುವ ಓಟಿಪಿಯನ್ನು ನೋಂದಾಯಿಸಿ. ಇಲ್ಲವೇ ಕೈಬೆರಳಿನ ಜೀವಮಾಪನ ನೀಡಿ. ಓಟಿಪಿಯನ್ನು ನಮೂದಿಸಿ, ಕ್ಯಾಪ್ಚಾ ಕೋಡ್ ನಮೂದಿಸಿ  ಮುನ್ನಡೆಯಿರಿ. ನಂತರ ಆಧಾರ್ ಇಲಾಖೆಯಿಂದ ದತ್ತಾಂಶ ಪಡೆದುಕೊಳ್ಳಲಾಗುತ್ತದೆ. ಅಲ್ಲಿ ನಿಮ್ಮ ಹೆಸರು, ವಿವರ ಕಾಣುತ್ತದೆ. ಅದರ ಪಕ್ಕದಲ್ಲಿ 'ಸೇರಿಸಿ' ಎಂಬ ಆಯ್ಕೆ ಇರುತ್ತದೆ.


ಇದರೊಂದಿಗೆ ನಿಮ್ಮ ಕುಟುಂಬದವರ ಮಾಹಿತಿಯನ್ನು ಸೇರಿಸಬಹುದು. ನಂತರದಲ್ಲಿ ಗ್ರಾಮೀಣ ವಾಸಿಗಳೇ ಇಲ್ಲವೇ ನಗರದಲ್ಲಿ ವಾಸಿಸುವವರೆ ಎಂಬ ಮಾಹಿತಿ ಒದಗಿಸಬೇಕಾಗುತ್ತದೆ. ಅಲ್ಲಿ ಕಾಣುವ ಆಯ್ಕೆಗಳ ಮೇಲೆ ಕ್ಲಿಕ್ ಮಾಡಿರಿ.


ಈ ಎಲ್ಲಾ ಮಾಹಿತಿಗಳನ್ನು ಯಶಸ್ವಿಯಾಗಿ ತುಂಬಿದ ನಂತರ ರೇಷನ್ ಕಾರ್ಡ್ ಮುಂದಿನ ಹಂತದಲ್ಲಿ ನಿಮಗೆ ಕಾಣುತ್ತದೆ. ಆಗ ಪ್ರಿಂಟ್ ತೆಗೆದುಕೊಳ್ಳಬಹುದು. ಕೇವಲ ಹತ್ತರಿಂದ ಹದಿನೈದು ನಿಮಿಷಗಳ ಒಳಗೆ ನಿಮ್ಮ ಕೈಯಲ್ಲಿ ಪಡಿತರ ಚಿಟಿ ಇರುತ್ತದೆ. ಹೀಗೆ ಅತ್ಯಂತ ಸುಲಭ ವಿಧಾನದಲ್ಲಿ ನೀವು ರೇಷನ್ ಕಾರ್ಡ್ ಪಡೆಯಬಹುದು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments