Webdunia - Bharat's app for daily news and videos

Install App

ಜಿಯೋ, ಏರಟೆಲ್‌ಗೆ ಸೆಡ್ಡು ಹೊಡೆದ ಐಡಿಯಾ....!!!

ಗುರುಮೂರ್ತಿ
ಬುಧವಾರ, 21 ಫೆಬ್ರವರಿ 2018 (13:45 IST)
ಇತ್ತೀಚಿನ ದಿನಗಳಲ್ಲಿ ಒಂದರ ಮೇಲೊಂದು ಹೊಸ ಆಫರ್‌ಗಳನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲು ಏರ್‌ಟೆಲ್ ಹಾಗೂ ಜಿಯೋ ಪೈಫೋಟಿಗೆ ಬಿದ್ದಿರುವುದು ಎಲ್ಲರಿಗೂ ತಿಳಿದಿರುವಂತದ್ದೇ, ಇಗಾಗಲೇ ಹಲವು ಕಡಿಮೆ ದರದ ಆಫರ್‌ಗಳನ್ನು ನೀಡಿ ಪ್ರಚಾರದಲ್ಲಿದ್ದ ಏರ್‌ಟೆಲ್ ಮತ್ತು ಜಿಯೋಗೆ ಐಡಿಯಾ ಟಕ್ಕರ್ ನೀಡಿದ್ದು ತನ್ನ ಹೊಸ ರಿಚಾರ್ಜ್‌ ಪ್ಲಾನ್ ಅನ್ನು ಬಿಡುಗಡೆ ಮಾಡುವ ಮೂಲಕ ಮತ್ತೆ ಸುದ್ದಿಯಲ್ಲಿದೆ.
ಐಡಿಯಾ ತನ್ನ ಹೊಸ ಪ್ರಿಪೇಯ್ಡ್ ರಿಚಾರ್ಜ್ ಅನ್ನು ಬಿಡುಗಡೆಗೊಳಿಸಿದ್ದು, ಗ್ರಾಹಕರಿಗೆ ಬಂಫರ್ ಆಫರ್ ನೀಡಿದೆ. ಕೇವಲ 109 ರೂಪಾಯಿಗಳಿಗೆ ಅನ್‌ಲಿಮಿಟೆಡ್ ಕರೆಗಳನ್ನು ಹೊಂದಿರುವ ಈ ಪ್ಲಾನ್ 14 ದಿನಗಳ  ವ್ಯಾಲಿಡಿಟಿಯನ್ನು ಹೊಂದಿದೆ. ಇದು ಕೆಲವು ವಲಯಗಳಿಗೆ ಮಾತ್ರ ಸೀಮಿತವಾಗಿದೆ. ಅದಲ್ಲಗೇ 93 ರೂಪಾಯಿಗಳ ಇನ್ನೊಂದು ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದರಲ್ಲಿ 10 ದಿನಗಳ ವ್ಯಾಲಿಡಿಟಿ ಹಾಗೂ ಅನಿಯಮಿತ ಕರೆ ಮತ್ತು ಪ್ರತಿ ದಿನ 1 GB ಡೇಟಾವನ್ನು ಪಡೆಯಬಹುದಾಗಿದೆ.
 
ಅಧಿಕೃತ ಐಡಿಯಾ ಸೆಲ್ಯುಲರ್ ವೈಬ್‌ಸೈಟ್ ಪ್ರಾಕಾರ, 109 ರ ರಿಚಾರ್ಜ್ ಪ್ಲಾನ್, ಅನಿಯಮಿತ ಸ್ಥಳೀಯ ಹಾಗೂ ಎಸ್‌ಟಿಡಿ ಮತ್ತು ರೋಮಿಂಗ್ ಕರೆಗಳನ್ನು ಹೊಂದಿದ್ದು, 1 GB  4G/3G ಡೇಟಾವನ್ನು ಹೊಂದಿದೆ. ಅಲ್ಲದೇ ಸ್ಥಳೀಯ 100 ಎಸ್‌ಎಂಎಸ್‌ಗಳನ್ನು ಈ ಪ್ಯಾಕ್ ಒಳಗೊಂಡಿದೆ. ಇದರಲ್ಲಿ ಧ್ವನಿ ಕರೆಗಳು, ಪ್ರತಿದಿನ 250 ನಿಮಿಷಗಳು ಮತ್ತು ವಾರಕ್ಕೆ 1000 ನಿಮಿಷಗಳು ಉಚಿತವಾಗಿದ್ದು, ಇದು ಉಳಿದ ಉಚಿತ ಪ್ಯಾಕ್‌ಗೆ ಸಮನಾಗಿರುತ್ತದೆ. ಒಂದು ವೇಳೆ ಈ ಉಚಿತ ಅವಧಿಯವನ್ನು ಮೀರಿದರೆ ಪ್ರತಿ ಸೆಕೆಂಡ್‌ಗೆ 1 ಪೈಸೆಯಂತೆ ದರವನ್ನು ವಿಧಿಸಲಾಗುತ್ತದೆ ಎಂದು ಹೇಳಲಾಗಿದೆ.
 
ಈ ರೀಚಾರ್ಜ್ ಪ್ಯಾಕ್, ಆಂಧ್ರ ಪ್ರದೇಶ ಮತ್ತು  ತೆಲಂಗಾಣ, ಬಿಹಾರ್. ಜಾರ್ಕಂಡ್, ಗುಜರಾತ್, ಹರಿಯಾಣ ಮತ್ತು ಕರ್ನಾಟಕ ಸೇರಿದಂತೆ ಕೆಲವು ವಲಯಗಳಲ್ಲಿ ಮಾತ್ರವೇ ಲಭ್ಯವಿರುತ್ತದೆ. ಈ ರೀಚಾರ್ಜ್ ಈಗಾಗಲೇ ಲಭ್ಯವಿದ್ದು, ಆನ್‌ಲೈನ್‌ನಲ್ಲಿ ಇಲ್ಲವೇ ನಿಮ್ಮ ಮೈ ಐಡಿಯಾ ಆಪ್ ಮೂಲಕ ರಿಚಾರ್ಜ್ ಮಾಡಿಕೊಳ್ಳಬಹುದಾಗಿದೆ.
 
ಅಷ್ಟೇ ಅಲ್ಲ ಈ ವಾರಕ್ಕೂ ಮೊದಲು ಬಿಡುಗಡೆಯಾಗಿರುವ ಪೋಸ್ಟ್‌ಪೇಯ್ಡ್ ಯೋಜನೆಗಳಾದ ರೂ. 499, 649, 999, 389, 1,299, 1,699, 1,999,ಮತ್ತು 2,999 ಪ್ಲಾನ್ ಉಳಿದ ಬ್ರಾಂಡ್ ರಿಚಾರ್ಜ್‌ ಆಫರ್‌ಗಳಿಗೆ ಹೋಲಿಸಿದಲ್ಲಿ ಉತ್ತಮ ಎಂದೇ ಹೇಳಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments