Webdunia - Bharat's app for daily news and videos

Install App

ದಿಡೀರ್ ಏರಿಕೆ ಕಂಡ ಷೇರು ಮಾರುಕಟ್ಟೆ: ಎಲ್ಲಾ ಚಂದ್ರಬಾಬು ನಾಯ್ಡು ಮಹಿಮೆ

Krishnaveni K
ಬುಧವಾರ, 5 ಜೂನ್ 2024 (15:36 IST)
ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ನಿನ್ನೆ ಯಾವುದೇ ಪಕ್ಷ ಬಹುಮತ ಸಾಧಿಸದೇ ಇದ್ದಾಗ ಷೇರು ಮಾರುಕಟ್ಟೆ ದಿಡೀರ್ ಇಳಿಕೆ ಕಂಡಿತ್ತು. ಆದರೆ ಇಂದು ಷೇರು ಮಾರುಕಟ್ಟೆ ಮತ್ತೆ ಏರಿಕೆ ಕಾಣುತ್ತಿದೆ. ಇದಕ್ಕೆಲ್ಲಾ ಚಂದ್ರಬಾಬು ನಾಯ್ಡು ಮಹಿಮೆಯೇ ಕಾರಣ.

ಎಕ್ಸಿಟ್ ಪೋಲ್ ಫಲಿತಾಂಶ ಬಂದ ಮೇಲೆ ಷೇರು ಮಾರುಕಟ್ಟೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಆದರೆ ನಿನ್ನೆ ಲೋಕಸಭೆ ಚುನಾವಣೆ ಫಲಿತಾಂಶ ಘೋಷಣೆಯಾಗುತ್ತಿದ್ದಂತೇ ಭಾರೀ ಇಳಿಕೆಯಾಗಿತ್ತು.

ಆದರೆ ಇಂದು ಅಪರಾಹ್ನದ ನಂತರ ಸೆನ್ಸೆಕ್ಸ್ ದಿಡೀರ್ 2200 ಪಾಯಿಂಟ್ ದಾಟಿದೆ. ನಿನ್ನೆಗಿಂತ ಇಂದು 3.08% ಏರಿಕೆ ಕಂಡಿದೆ. ಇನ್ನು, ನಿಫ್ಟಿ ಬ್ಯಾಂಕ್ 2000 ಪಾಯಿಂಟ್ ದಾಟಿದೆ. ನಿಫ್ಟಿ ಫಿಫ್ಟಿ 702 ಗಳಷ್ಟಾಗಿದೆ.  ನಿನ್ನೆಗಿಂತ ನಿಫ್ಟಿ ಬ್ಯಾಂಕ್ 4 ಪರ್ಸೆಂಟ್ ಏರಿಕೆ ಕಂಡಿದೆ. ಬೆಳಿಗ್ಗಿನ ಅವಧಿಯಲ್ಲಿ 200 ಪಾಯಿಂಟ್ ಗಳಷ್ಟೇ ಏರಿಕೆಯಿತ್ತಷ್ಟೆ. ಇದೀಗ ಇಷ್ಟರ ಮಟ್ಟಿಗೆ ಏರಿಕೆಯಾಗಿರುವುದಕ್ಕೆ ಚಂದ್ರಬಾಬು ನಾಯ್ಡು ಎನ್ ಡಿಎಗೆ ಬೆಂಬಲ ಘೋಷಿಸಿರುವುದೇ ಕಾರಣ.

ಬಿಜೆಪಿಗೆ ಬಹುಮತ ಬಾರದ ಹಿನ್ನಲೆಯಲ್ಲಿ ಸರ್ಕಾರ ರಚನೆಗೆ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ಬೆಂಬಲ ನೀಡುತ್ತಿದ್ದಾರೆ. ಇದರ ಬಗ್ಗೆ ಇಂದು ಅವರು ಅಧಿಕೃತವಾಗಿ ಘೋಷಣೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮೋದಿ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದು, ಶನಿವಾರ ಮತ್ತೆ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಮತ್ತೆ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗುವುದು ಪಕ್ಕಾ ಆಗುತ್ತಿದ್ದಂತೇ ಷೇರು ಮಾರುಕಟ್ಟೆಯಲ್ಲಿ ಮತ್ತೆ ಏರಿಕೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments