Webdunia - Bharat's app for daily news and videos

Install App

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Krishnaveni K
ಮಂಗಳವಾರ, 17 ಜೂನ್ 2025 (09:58 IST)
Photo Credit: X
ಹೈದರಾಬಾದ್: ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧದ ವಾತಾವರಣದಿಂದಾಗಿ ಕರ್ನಾಟಕದ ಮೇಲೆ ಆಗುವ ಪರಿಣಾಮಗಳೇನು? ಇಲ್ಲಿದೆ ವಿವರ.

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದಿಂದ ಭಾರತಕ್ಕೆ ಮುಖ್ಯವಾಗಿ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಬಹುದು. ಇದು ಕರ್ನಾಟಕದ ಮೇಲೂ ಪರಿಣಾಮ ಬೀರಲಿದೆ. ಇರಾನ್ ನಿಂದ ಭಾರತ ಹೆಚ್ಚು ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತದೆ.

ಇದೇ ತೈಲವೇ ಬೆಂಗಳೂರು ಸೇರಿದಂತೆ ದೇಶದ ಎಲ್ಲಾ ಮಹಾನಗರಗಳಿಗೂ ಪೂರೈಕೆಯಾಗುತ್ತದೆ. ಬೆಂಗಳೂರಿನಲ್ಲಿ ಇದೀಗ 1 ಲೀ. ಪೆಟ್ರೋಲ್ ಬೆಲೆ 102.92 ರೂ. ಇದೆ. ಒಂದು ವೇಳೆ ಇರಾನ್ ನಿಂದ ಕಚ್ಚಾ ತೈಲ ಬೆಲೆ ಪೂರೈಕೆ ಸಮರ್ಪಕವಾಗಿ ಆಗದೇ ಇದ್ದಲ್ಲಿ ಬೆಂಗಳೂರಿನಲ್ಲೂ ಪೆಟ್ರೋಲ್ ಬೆಲೆ ಏರಿಕೆಯಾಗಲಿದೆ.

ಪರಿಶುದ್ಧ ಚಿನ್ನದ ದರ ಬೆಂಗಳೂರಿನಲ್ಲಿ ಈಗಾಗಲೇ 1 ಲಕ್ಷ ದಾಟಿ ದಾಖಲೆ ಬರೆದಿದೆ. ಎರಡೂ ದೇಶಗಳ ನಡುವೆ ಸಂಘರ್ಷ ಮುಂದುವರಿದರೆ ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗಲಿದೆ. ಇದೇ ರೀತಿ ಯುದ್ಧ ಮುಂದುವರಿದರೆ ಮುಂದಿನ 6 ತಿಂಗಳಲ್ಲಿ 12 ರಿಂದ 13 ಸಾವಿರ ಹೆಚ್ಚಳವಾಗಲಿದೆ. ಹೀಗಾಗಿ ಈ ಎರಡು ವಿಚಾರಗಳು ನೇರವಾಗಿ ಪರಿಣಾಮ ಬೀರುವುದು ಮಧ್ಯಮ ವರ್ಗದ ಮೇಲೆಯೇ. ಇದರಿಂದ ಕರ್ನಾಟಕ ಸೇರಿದಂತೆ ಭಾರತಕ್ಕೇ ಇರಾನ್-ಇಸ್ರೇಲ್ ಯುದ್ಧ ಸಂಕಷ್ಟ ತಂದೊಡ್ಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments