Webdunia - Bharat's app for daily news and videos

Install App

ಕೈಗಾರಿಕೆ- ಸರಕಾರಿ ಸಹಭಾಗಿತ್ವದಲ್ಲಿ ಪಾಲುದಾರಿಕೆ: ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 30 ಜೂನ್ 2016 (15:54 IST)
ರಾಜ್ಯದಲ್ಲಿ ವಹಿವಾಟು ಸುಲಭವಾಗಿಸಲು ಕೈಗಾರಿಕೆ- ಸರಕಾರದ ಸಹಭಾಗಿತ್ವದಡಿಯಲ್ಲಿ ಒಪ್ಪಂದ ಮಾಡಿಕೊಳ್ಳಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿಯ(ಫಿಕ್ಕಿ) 99 ನೇಯ ವಾರ್ಷಿಕ ಮಹಾ ಸಭೆಯಲ್ಲಿ, ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾ ಮುಂದಿನ ದಾರಿ ಎನ್ನುವ ಶೀರ್ಷಿಕೆಯಡಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
 
ಕರ್ನಾಟಕ ರಾಜ್ಯದಲ್ಲಿ ವ್ಯಾಪಾರ ವಹಿವಾಟು ಸುಲಭವಾಗಿ ನಡೆಸಲು ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.  
 
ಇನ್‌ವೆಸ್ಟ್ ಕರ್ನಾಟಕ ಬ್ಯ್ರಾಂಡ್ ಅಡಿಯಲ್ಲಿ  ಕೈಗಾರಿಕೆ- ಸರಕಾರದ ಸಹಭಾಗಿತ್ವಕ್ಕೆ ಹಲವಾರು ರೀತಿಯ ಸೇವೆಗಳನ್ನು ನೀಡಲು ರಾಜ್ಯ ಸರಕಾರ ಹಲವು ಯೋಜನೆಗಳನ್ನು ರೂಪಿಸಿದೆ ಎಂದು ಮಾಹಿತಿ ನೀಡಿದ್ದಾರೆ.
 
ಕರ್ನಾಟಕ ರಾಜ್ಯ ಹೆಚ್ಚಿನ ಬೆಳವಣಿಗೆ ಪಥದಲ್ಲಿ ಸಾಗುತ್ತಿದ್ದು, ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವತ್ತ ಸರಕಾರ ಚಿತ್ತ ಹರಿಸಿದೆ ಎಂದಿದ್ದಾರೆ.
 
ಕರ್ನಾಟಕ ರಾಜ್ಯವನ್ನು ಸಂಪತ್ಭರಿತ ರಾಜ್ಯವನ್ನಾಗಿ ಮಾಡಬೇಕು ಎಂಬುದು ನಮ್ಮ ಗುರಿ. ಇನ್‌ವೆಸ್ಟ್ ಕರ್ನಾಟಕ ಅಂತ್ಯವಲ್ಲ, ರಾಜ್ಯದ ಇತಿಹಾಸವನ್ನು ಬದಲಿಸುವ ನಿಟ್ಟಿನಲ್ಲಿ ಇದೊಂದು ಆರಂಭ. ದೇಶದಲ್ಲಿಯೇ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿ ಇಂಜಿನ್‌ನಂತೆ ಮಾರ್ಪಡಿಸುವುದೇ ನಮ್ಮ ಗುರಿಯಾಗಿದೆ ಎಂದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments