Webdunia - Bharat's app for daily news and videos

Install App

ಗ್ರಾಹಕರ ಆಕ್ರೋಶ: ಮತ್ತೆ ಅಡುಗೆ ಸಿಲಿಂಡರ್ ದರದಲ್ಲಿ ಹೆಚ್ಚಳ

Webdunia
ಬುಧವಾರ, 1 ನವೆಂಬರ್ 2017 (16:19 IST)
ಸಿಲಿಂಡರ್ ದರವನ್ನು ಪ್ರತಿ ತಿಂಗಳು ಹೆಚ್ಚಿಸಿ ಸಬ್ಸಿಡಿ ಅಂತ್ಯಗೊಳಿಸಲು ಸರಕಾರ ತೀರ್ಮಾನಿಸಿದ ನಂತರ ಕ ಳೆದ ಜುಲೈ 2016 ರಿಂದ 19ನೇ ಬಾರಿಗೆ ಸಿಲಿಂಡರ್ ದರದಲ್ಲಿ ಹೆಚ್ಚಳಗೊಳಿಸಲಾಗಿದೆ. ಇದೀಗ ಮತ್ತೆ ಸಿಲಿಂಡರ್ ದರದಲ್ಲಿ 4.50 ರೂಪಾಯಿ ಏರಿಕೆಗೊಳಿಸಲಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ದರ ಏರಿಕೆಯಿಂದಾಗಿ ಜೆಟ್ ಇಂಧನ ದರದಲ್ಲೂ ಶೇ.2 ರಷ್ಟು ಹೆಚ್ಚಳವಾಗಿದ್ದು ಕಳೆದ ಆಗಸ್ಟ್ ತಿಂಗಳಿನಿಂದ ನಾಲ್ಕನೇ ಬಾರಿ ದರ ಹೆಚ್ಚಳ ಮಾಡಲಾಗಿದೆ ಎಂದು ಸರಕಾರಿ ಸ್ವಾಮ್ಯದ ತೈಲ ಸಂಸ್ಥೆ ಮೂಲಗಳು ತಿಳಿಸಿವೆ.
 
ಸಬ್ಸಿಡಿರಹಿತ ಅಡುಗೆ ಸಿಲಿಂಡರ್ ದರ ಪ್ರತಿ ಸಿಲಿಂಡರ್‌ಗೆ 93 ರೂಪಾಯಿ ಹೆಚ್ಚಳಗೊಳಿಸಿ 742 ರೂಪಾಯಿಗಳಾಗಿವೆ. ಸಬ್ಸಿಡಿ ಸಿಲಿಂಡರ್‌ ದರ ಪ್ರತಿ ಸಿಲಿಂಡರ್‌ಗೆ 4.50 ರೂಪಾಯಿ ಹೆಚ್ಚಳಗೊಳಿಸಿ 495.69 ರೂಪಾಯಿಗಳಿಗೆ ತಲುಪಿದೆ.
 
ಕಳೆದ ವರ್ಷ ಸರಕಾರ, ಮಾರ್ಚ್‌ವರೆಗೆ ಸಿಲಿಂಡರ್ ಸಬ್ಸಿಡಿಯನ್ನು ಅಂತ್ಯಗೊಳಿಸುವಂತಾಗಲು ಸರಕಾರಿ ಸ್ವಾಮ್ಯದ ತೈಲ ಕಂಪೆನಿಗಳು ಪ್ರತಿ ತಿಂಗಳು ದರವನ್ನು ಹೆಚ್ಚಿಸಲು ಅವಕಾಶ ನೀಡಿತ್ತು.  
 
ಕಳೆದ ಜೂನ್ 2016ರಲ್ಲಿ ಪ್ರತಿ ಸಿಲಿಂಡರ್ ದರ 419.18 ರೂಪಾಯಿಗಳಾಗಿತ್ತು. ಇದೀಗ ಸಿಲಿಂಡರ್ ದರದಲ್ಲಿ ಒಟ್ಟು 76.51 ರೂಪಾಯಿಗಳ ಏರಿಕೆಯಾಗಿ 495.69 ರೂಪಾಯಿಗಳಿಗೆ ತಲುಪಿದೆ 
 
ಪ್ರತಿಯೊಂದು ಕುಟುಂಬಕ್ಕೆ ವಾರ್ಷಿಕವಾಗಿ 12 ಸಿಲಿಂಡರ್‌ಗಳನ್ನು ಬಳಸುವ ಅವಕಾಶವಿದ್ದು, ತದನಂತರದ ಸಿಲಿಂಡರ್ ಅಗತ್ಯವಾದಲ್ಲಿ ಮಾರುಕಟ್ಟೆ ದರದಲ್ಲಿ ಸಬ್ಸಿಡಿರಹಿತ ಸಿಲಿಂಡರ್‌ಗಳನ್ನು ಖರೀದಿಸಬೇಕಾಗುತ್ತದೆ ಎಂದು ಸರಕಾರಿ ಸ್ವಾಮ್ಯದ ತೈಲ ಸಂಸ್ಥೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments