Webdunia - Bharat's app for daily news and videos

Install App

ಮೈಕ್ರೋಮ್ಯಾಕ್ಸ್‌ನಿಂದ ಕ್ಯಾನ್‌ವಾಲ್ ಫೈರ್ 5 ಮಾಡೆಲ್ ಮಾರುಕಟ್ಟೆಗೆ

Webdunia
ಶುಕ್ರವಾರ, 24 ಜೂನ್ 2016 (16:59 IST)
ಸ್ಮಾರ್ಟ್‌ಪೋನ್ ತಯಾರಿಕಾ ಸಂಸ್ಥೆಯಾಗಿರುವ ಮೈಕ್ರೋಮ್ಯಾಕ್ಸ್, ಫೈರ್ ಮ್ಯೂಸಿಕ್ ವೈಶಿಷ್ಟ್ಯದ ಕ್ಯಾನವಾಸ್ ಫೈರ್-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
 
ಈ ಹೊಸ ವೈಶಿಷ್ಟ್ಯದ ಸ್ಮಾರ್ಟ್‌ಪೋನ್‌ಗಳು ಮೈಕ್ರೋಮ್ಯಾಕ್ಸ್ ಅಧಿಕೃತ ಮಳಿಗೆಗಳಲ್ಲಿ ಗ್ರಾಹಕರಿಗೆ 6,199 ರೂಪಾಯಿ ಬೆಲೆಯಲ್ಲಿ ಲಭ್ಯವಾಗಲಿದೆ.
 
ಫೈರ್ ಮ್ಯೂಸಿಕ್ ವೈಶಿಷ್ಟ್ಯದ ಕ್ಯಾನವಾಸ್ ಫೈರ್-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 1.3ಜಿಎಚ್‌ಝಡ್ ಕ್ವಾಡ್ ಕೋರ್ ಮೀಡಿಯಾ ಟೆಕ್ ಪ್ರೊಸೆಸರ್, 1 ಜಿಬಿ ರ್ಯಾಮ್ ಜೊತೆಗೆ 16 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯ ಹೊಂದಿದ್ದು, ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ ಸ್ಟೋರೇಜ್ ಸಾಮರ್ಥ್ಯವನ್ನು 64 ಜಿಬಿಯವರೆಗೂ ಹೆಚ್ಚಿಸಬಹುದಾಗಿದೆ.
 
ಈ ಹೊಸ ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು 5.5 ಇಂಚ್ ಐಪಿಎಸ್ ಎಚ್‌ಡಿ ಡಿಸ್‌ಪ್ಲೇ ಹೊಂದಿದ್ದು, 8 ಮೆಗಾ ಪಿಕ್ಸೆಲ್ ರಿಯರ್ ಕ್ಯಾಮೆರಾ ಜೊತೆಗೆ 5 ಮೆಗಾ ಪಿಕ್ಸೆಲ್ ಫ್ರಂಟ್ ಕ್ಯಾಮೆರಾ ಹೊಂದಿದೆ.
 
ಫೈರ್ ಮ್ಯೂಸಿಕ್ ವೈಶಿಷ್ಟ್ಯದ ಕ್ಯಾನವಾಸ್ ಫೈರ್-5 ಆವೃತ್ತಿಯ ಸ್ಮಾರ್ಟ್‌ಪೋನ್‌ಗಳು ಡ್ಯುಯಲ್ ಸಿಮ್ ವೈಶಿಷ್ಟ್ಯವನ್ನು ಹೊಂದಿದ್ದು, 2500 ಸಾಮರ್ಥ್ಯದ ಬ್ಯಾಟರಿ ಮತ್ತು ಆಂಡ್ರಾಯ್ಡ್ ಮಾರ್ಷ್ಮ್ಯಾಲೋ ವೈಶಿಷ್ಟ್ಯವನ್ನು ಹೊಂದಿದೆ.
 
ಭಾರತದಲ್ಲಿ ಇಂಟರ್‌ನೆಟ್ ಬಳಕೆಯ ಪ್ರಮಾಣ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಬಳಕೆದಾರರು ದೊಡ್ಡ ಸ್ಕ್ರೀನ್ ಗಾತ್ರದ ಪೋನ್‌ಗಳನ್ನು ಬಳಸುತ್ತಿದ್ದಾರೆ. ದೇಶದ 80 ಪ್ರತಿಶತ ಸ್ಮಾರ್ಟ್‌ಪೋನ್‌ ಬಳಕೆದಾರರು ಎರಡು ಮೂರು ದಿನಗಳಲ್ಲಿ ಒಮ್ಮೆಯಾದರು ತಮ್ಮ ಪೋನ್ ಮೂಲಕ ವೀಡಿಯೊಗಳನ್ನು ವಿಕ್ಷೀಸುತ್ತಾರೆ. 
 
ಇದರಲ್ಲಿ ಅರ್ಧದಷ್ಟು ಬಳಕೆದಾರರು ಪ್ರತಿನಿತ್ಯ ತಮ್ಮ ಪೋನ್‌ ಮೂಲಕ ವೀಡಿಯೊ ವೀಕ್ಷಿಸುತ್ತಾರೆ. ಮತ್ತು ಭಾರತೀಯ ಯುವ ಪೀಳಿಗೆ ಆಡಿಯೋ ಮತ್ತು ವೀಡಿಯೊ ಮನರಂಜನೆಗೆ ಮಾರು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮ್ಯೂಸಿಕ್ ವೈಶಿಷ್ಟ್ಯದ ಪೋನ್‌ಗಳನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಮೈಕ್ರೋಮ್ಯಾಕ್ಸ್ ಇನ್ಫರ್ಮ್ಯಾಟಿಕ್ಸ್ ಮುಖ್ಯ ಮಾರುಕಟ್ಟೆ ಅಧಿಕಾರಿ ಶುಭಜಿತ್ ಸೇನ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments