Webdunia - Bharat's app for daily news and videos

Install App

HMT ಸಂಸ್ಥೆಗೆ ಮರು ಜೀವ ನೀಡಲು ಸಿದ್ಧರಾದ ಕುಮಾರಸ್ವಾಮಿ: ಕಂಪನಿ ಮುಚ್ಚಿದ್ದೇಕೆ

Krishnaveni K
ಬುಧವಾರ, 11 ಸೆಪ್ಟಂಬರ್ 2024 (11:51 IST)
Photo Credit: Facebook
ಬೆಂಗಳೂರು: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್ ಡಿ ಕುಮಾರಸ್ವಾಮಿ ಎಚ್ ಎಂಟಿ ಸಂಸ್ಥೆಗೆ ಮರು ಜೀವ ನೀಡಲು ಮುಂದಾಗಿದ್ದಾರೆ. ಇದಕ್ಕಾಗಿ ಕೇಂದ್ರದಿಂದ ಹೂಡಿಕೆ ಮಾಡಲು ಯೋಜನೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿದ್ದ ಎಚ್ ಎಂಟಿ ಸಂಸ್ಥೆ 2016 ರಲ್ಲಿ ಸ್ಥಗಿತವಾಗಿತ್ತು. ಕಂಪನಿ ನಷ್ಟದಲ್ಲಿ ಸಾಗುತ್ತಿತ್ತು ಎನ್ನುವ ಕಾರಣಕ್ಕೆ ಇದನ್ನು ಬಂದ್ ಮಾಡಲಾಗಿತ್ತು. ಆದರೆ ಇದರಿಂದ ಅನೇಕರು ಉದ್ಯೋಗ ಕಳೆದುಕೊಳ್ಳುವಂತಾಯಿತು. ಇದೀಗ ಕುಮಾರಸ್ವಾಮಿ ಎಚ್ ಎಂಟಿ ಸಂಸ್ಥೆಗೆ ಮರುಜೀವ ನೀಡಲು ಜಿದ್ದಿಗೆ ಬಿದ್ದಿದ್ದಾರೆ.

ಇದಕ್ಕೆ ಮರು ಜೀವ ನೀಡಲು ಕೇಂದ್ರ ಸರ್ಕಾರದಿಂದ ಸಹಾಯ ಪಡೆಯಲು ಮುಂದಾಗಿದ್ದಾರೆ. ಕೇಂದ್ರದ ಅನುದಾನ ಪಡೆದು ಮತ್ತೆ ಸಂಸ್ಥೆ ಪುನರಾರಂಭಿಸಲು ಸಿದ್ಧತೆ ನಡೆಸಿದ್ದಾರೆ. ಇದರ ಅಂಗವಾಗಿಯೇ ಇತ್ತೀಚೆಗೆ ಎಲ್ಲರೂ ಎಚ್ ಎಂಟಿ ವಾಚ್ ಗಳನ್ನು ಉಡುಗೊರೆಯಾಗಿ ನೀಡಿ ಎಂದು ಕರೆ ನೀಡಿದ್ದರು.

ಸಚಿವ ಕುಮಾರಸ್ವಾಮಿಯವರ ಈ ಯೋಜನೆಯಿಂದ ಮತ್ತಷ್ಟು ಉದ್ಯೋಗ ಸೃಷ್ಟಿಯಾಗಬಹುದು. ರಾಜ್ಯದ ಹಲವರಿಗೆ ಉದ್ಯೋಗ ಸಿಗಬಹುದು. ಎಚ್ ಎಂಟಿ ವಾಚು ತಯಾರಿಕೆ ಕಂಪನಿ ಪುನರಾರಂಭಿಸಲು 6,500 ಕೋಟಿ ಹೂಡಿಕೆ ಮಾಡಲು ಕೇಂದ್ರ ಸಮ್ಮತಿ ನೀಡಿದೆ.  ರೋಬೋಟಿಕ್ ತಂತ್ರಜ್ಞಾನ ಬಳಸಿ ಹೊಸ ಬಗೆಯ ವಾಚ್ ತಯಾರಿಕೆ ನೀಲನಕ್ಷೆಯನ್ನೂ ಸಿದ್ಧಪಡಿಸಿದ್ದಾರೆ.  ಈ ಬಗ್ಗೆ ತಜ್ಞರ ಜೊತೆ ಕುಮಾರಸ್ವಾಮಿ ಮಾತುಕತೆಯನ್ನೂ ನಡೆಸಿದ್ದಾರೆ. ಸ್ಥಳೀಯರಿಗೆ ಆದ್ಯತೆ ನೀಡಿ ವಾಚು ತಯಾರಿಕೆ ಮಾಡಲು ಯೋಜನೆ ರೂಪಿಸಿದ್ದಾರೆ. ಇದರಿಂದ ಉದ್ಯೋಗಾವಕಾಶ ಹೆಚ್ಚಿಸಬಹುದು ಎಂಬುದು ಅವರ ಯೋಜನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments