Webdunia - Bharat's app for daily news and videos

Install App

ಪುತ್ರ ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ನಲ್ಲಿ ತಾವೇ ಊಟ ಬಡಿಸಿದ ಮುಕೇಶ್ ಅಂಬಾನಿ

Krishnaveni K
ಗುರುವಾರ, 29 ಫೆಬ್ರವರಿ 2024 (09:03 IST)
ಮುಂಬೈ: ರಿಲಯನ್ಸ್ ಮುಖ್ಯಸ್ಥ, ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಕುಟುಂಬದಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಮುಕೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ಪೂರ್ವ ಕಾರ್ಯಕ್ರಮ ಆರಂಭವಾಗಿದೆ. ಇದರ ಸಲುವಾಗಿ ಮುಕೇಶ್ ಕುಟುಂಬ ಸಾರ್ವಜನಿಕರಿಗೆ ಊಟ ಬಡಿಸಿದೆ.

ಮುಕೇಶ್ ಅಂಬಾನಿ ಕುಟುಂಬ ಮೊದಲಿನಿಂದಲೂ ಈ ಪದ್ಧತಿ ನಡೆಸಿಕೊಂಡು ಬರುತ್ತಿದೆ. ಸುಮಾರು 50 ಸಾವಿರ ಮಂದಿಗೆ ಅಂಬಾನಿ ಕುಟುಂಬ ಊಟೋಪಚಾರ ಮಾಡಿದೆ. ಸಾಂಪ್ರದಾಯಿಕ ಗುಜರಾತಿ ಶೈಲಿಯ ಊಟ ಉಣಬಡಿಸಲಾಗಿದೆ. ಖುದ್ದಾಗಿ ಅಂಬಾನಿ ಕುಟುಂಬದವರೇ ಈ ಊಟದ ವ್ಯವಸ್ಥೆಯ ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ.

ಮದುವೆ ಪೂರ್ವ ಕಾರ್ಯಕ್ರಮದಿಂದ ಹಿಡಿದು ನಂತರ ಕೆಲವು ದಿನಗಳವರೆಗೆ ಸಾರ್ವಜನಿಕರಿಗೆ ಈ ಭೋಜನ ವ್ಯವಸ್ಥೆಯಿರಲಿದೆ. ಊಟದ ಬಳಿಕ ಪ್ರಸಿದ್ಧ  ಗುಜರಾತಿ ಗಾಯಕರಿಂದ ಮನರಂಜನೆ ಕಾರ್ಯಕ್ರಮವೂ ಏರ್ಪಾಡಾಗಿತ್ತು. ಸ್ಥಳೀಯರ ಆಶೀರ್ವಾದ ಪಡೆಯಲು ಅಂಬಾನಿ ಕುಟುಂಬ ಔತಣಕೂಟ ಏರ್ಪಡಿಸುತ್ತದೆ. ಇದಕ್ಕೆ ಮೊದಲು ಹಿರಿಯ ಪುತ್ರ ಆಕಾಶ್ ಅಂಬಾನಿ ವಿವಾಹ ಸಂದರ್ಭದಲ್ಲಿಯೂ ಅಂಬಾನಿ ಕುಟುಂಬ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಿತ್ತು. ಆಗಲೂ ಖುದ್ದು ಅಂಬಾನಿ ಕುಟುಂಬವೇ ಊಟ ಬಡಿಸಿತ್ತು.

ಇಂದೂ ಕೂಡಾ ಮುಕೇಶ್ ಅಂಬಾನಿ, ಅನಂತ್ ಅಂಬಾನಿ ಮತ್ತು ಅವರ ಭಾವೀ ಪತ್ನಿ ರಾಧಿಕಾ ಮರ್ಚೆಂಟ್ ಅವರೇ ಖುದ್ದಾಗಿ ಅತಿಥಿಗಳಿಗೆ ಊಟ ಬಡಿಸಿದ್ದಾರೆ. ಪ್ರತಿಯೊಬ್ಬರ ಬಳಿ ಬಂದು ಅಂಬಾನಿ ಕೈ ಮುಗಿದು ಯೋಗ ಕ್ಷೇಮ ವಿಚಾರಿಸಿದ್ದಾರೆ. ಜುಲೈನಲ್ಲಿ ಅನಂತ್-ರಾಧಿಕಾ ಮದುವೆ ನಡೆಯಲಿದೆ. ಇದಕ್ಕೆ ಮೊದಲು ಮಾರ್ಚ್ 1 ರಿಂದ 3 ರವರೆಗೆ ಗುಜರಾತ್ ನ ಜಾಮ್ನಾನಗರದಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರ್ಸ್ ನಿಮಿಷಾ ಪ್ರಿಯಾ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮರಣದಂಡನೆ ಶಿಕ್ಷೆ ಇನ್ನೂ ರದ್ದಾಗಿಲ್ಲ ಎಂದ ಎಂಇಎ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂದಿನ ಸುದ್ದಿ
Show comments