Webdunia - Bharat's app for daily news and videos

Install App

ಮಧ್ಯಂತರ ಬಜೆಟ್ 2024: ಆದಾಯ ತೆರಿಗೆಯಲ್ಲಿ ಆಗಿರುವ ಬದಲಾವಣೆ ಏನು?

Krishnaveni K
ಗುರುವಾರ, 1 ಫೆಬ್ರವರಿ 2024 (12:03 IST)
ನವದೆಹಲಿ: ಕೇಂದ್ರ ಮಧ‍್ಯಂತರ ಬಜೆಟ್ ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೆರಿಗೆದಾರರಿಗೆ ಕೆಲವು ಕೊಡುಗೆ ನೀಡಿದ್ದಾರೆ. ಜೊತೆಗೆ ತೆರಿಗೆ ಪದ್ಧತಿಯಲ್ಲಿ ಕೆಲವೊಂದು ಬದಲಾವಣೆಯಾಗಿದೆ.

 
ನೇರ ತೆರಿಗೆ ಸಂಗ್ರಹದಲ್ಲಿ ಹೆಚ್ಚಳವಾಗಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ 2 ಪಟ್ಟು ಹೆಚ್ಚಳವಾಗಿದೆ ಎಂದು ವಿತ್ತ ಸಚಿವೆ ಘೋಷಿಸಿದ್ದಾರೆ. ಎಲ್ಲಾ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ಘೋಷಣೆ ಮಾಡಲಾಗಿದೆ. ಆದರೆ ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ಕಾರ್ಪೋರೇಟ್ ಟ್ಯಾಕ್ಸ್ ಶೇ.30 ರಿಂದ ಶೇ.22 ಕ್ಕೆ ಇಳಿಕೆ ಮಾಡಲಾಗಿದೆ. ತೆರಿಗೆ ಸಂಗ್ರಹದಲ್ಲಿ ಕಳೆದ ಐದು ವರ್ಷದಲ್ಲಿ ಮೂರು ಪಟ್ಟು ಹೆಚ್ಚಳವಾಗಿದೆ ಎಂಬ ಸಿಹಿ ಸುದ್ದಿಯನ್ನು ಘೋಷಿಸಿದ್ದಾರೆ.

ವಿಶೇಷವಾಗಿ ಆದಾಯ ತೆರಿಗೆ ಕಟ್ಟಲು 7 ಲಕ್ಷ ರೂ.ವರೆಗೆ ಆದಾಯ ಮಿತಿ ಹೆಚ್ಚಿಸಲಾಗಿದೆ. ಇದುವರೆಗೆ ಇದು 5 ಲಕ್ಷ ರೂ. ಗಳಾಗಿತ್ತು. ಅಂದರೆ ವಾರ್ಷಿಕ ಆದಾಯ 7 ಲಕ್ಷ ರೂ.ಗಿಂತ ಕಡಿಮೆಯಿದ್ದಲ್ಲಿ ಆದಾಯ ತೆರಿಗೆ ಕಟ್ಟಬೇಕಾಗಿಲ್ಲ. ಇದುವರೆಗೆ 5 ಲಕ್ಷ ರೂ. ಆದಾಯ ಇದ್ದವರಿಗೆ ಆದಾಯ ತೆರಿಗೆ ಅನ್ವಯವಾಗುತ್ತಿತ್ತು. ಅಲ್ಲದೆ ಟಿಡಿಎಸ್ ಕಡಿತವಾಗುವವರು ಇನ್ನು ಮುಂದೆ  10 ದಿನದಲ್ಲಿ ವಾಪಸ್ ಮಾಡಲು ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಉಳಿದಂತೆ ಆದಾಯ ತೆರಿಗೆ ಸ್ಲ್ಯಾಬ್ ಗಳಲ್ಲಿ ಯಾವುದೇ ಬದಲಾವಣೆಯಿಲ್ಲ.

ಈ ವರ್ಷ ಚುನಾವಣೆ ಎದುರಿಸಬೇಕಾಗಿರುವುದರಿಂದ ಮೋದಿ ಸರ್ಕಾರ ಜನರನ್ನು ಸೆಳೆಯುವ ಉದ್ದೇಶದಿಂದ ಜನಪ್ರಿಯ ಯೋಜನೆ ಆಥವಾ ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸಬಹುದೇ ಎಂಬ ನಿರೀಕ್ಷೆಯಿತ್ತು. ಆದರೆ ಅದು ಎರಡನ್ನೂ ಸುಳ್ಳಾಗಿಸಿದೆ. ಯಾವುದೇ ವಿನಾಯಿತಿಯನ್ನೂ ಘೋಷಿಸಿಲ್ಲ ಎಂಬುದು ಗಮನಾರ್ಹ. ಕೃಷಿ ಮತ್ತು ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡಲಿದೆ ಎಂದು ಹೇಳಿದರೂ ವಿಶೇಷ ಘೋಷಣೆ ಮಾಡಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments