Webdunia - Bharat's app for daily news and videos

Install App

ಎಪಿಎಲ್ ಕುಟುಂಬಗಳಿಗೆ ಸಬ್ಸಿಡಿ ಆಹಾರ ನಿಲ್ಲಿಸಬಾರದು: ಒಡಿಶಾ

Webdunia
ಸೋಮವಾರ, 22 ಡಿಸೆಂಬರ್ 2014 (10:29 IST)
ಬಡತನ ರೇಖೆಯ ಮೇಲಿರುವ ಕುಟುಂಬಗಳಿಗೆ ಸಬ್ಸಿಡಿ ದರದಲ್ಲಿ ಆಹಾರಧಾನ್ಯಗಳ ಪೂರೈಕೆಯನ್ನು ನಿಲ್ಲಿಸಬಾರದೆಂದು ಒಡಿಶಾ ಸರ್ಕಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದೆ.

ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆಯಲ್ಲಿ ಫಲಾನುಭವಿಗಳನ್ನು ಗುರ್ತಿಸುವ ಕಾರ್ಯ ಪೂರ್ಣವಾಗುವ ತನಕ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯಗಳನ್ನು ಪೂರೈಸುವಂತೆ ತಿಳಿಸಿದೆ. ಕೇಂದ್ರ ಸರ್ಕಾರ 2015ರ ಏಪ್ರಿಲ್ 5ರಿಂದ ಎಪಿಎಲ್ ಕುಟುಂಬಗಳಿಗೆ ಆಹಾರ ಧಾನ್ಯ ಪೂರೈಕೆಯನ್ನು ನಿಲ್ಲಿಸಲು ನಿರ್ಧರಿಸಿದೆ.

ಆದರೆ ಈ ಗಡುವನ್ನು ಆಗಸ್ಟ 2015ರವರೆಗೆ ವಿಸ್ತರಿಸಲು ರಾಜ್ಯ ಸರ್ಕಾರ ಕೋರಿದೆ. ಏಕೆಂದರೆ ಸರ್ಕಾರ ಆ ತಿಂಗಳಲ್ಲಿ ಫಲಾನುಭವಿಗಳಿಗೆ ಪಡಿತರ ಚೀಟಿಗಳನ್ನು ವಿತರಿಸುವ ನಿರೀಕ್ಷೆಯಿದೆ.

ಕೊರಾಪುಟ್-ಬೊಲಂಗಿರ್-ಕಾಲಹಂಡಿ ಪ್ರದೇಶದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಕುಟುಂಬಗಳ ಜನರ ಸಂಕಷ್ಟ ಬಹುಮಟ್ಟಿಗೆ ಒಂದೇ ತೆರನಾಗಿದ್ದು ಒಡಿಶಾವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಎಪಿಎಲ್ ಕುಟುಂಬಗಳಿಗೆ ಆಹಾರ ಧಾನ್ಯ ಪೂರೈಸಲು ಅವಕಾಶ ನೀಡಬೇಕು ಎಂದು ಆಹಾರ ಪೂರೈಕೆ ಕಾರ್ಯದರ್ಶಿ ಮಧುಸೂದನ್ ಪಾಡಿ ಕೋರಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments