ಒನ್ ಪ್ಲಸ್ ಮೊಬೈಲ್ ಫೋನ್ ಸಂಸ್ಥೆಯ ಅಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಭೇಟಿ ಮಾಡಿ ಚರ್ಚೆ ನಡೆಸಿತು.
ಸಂಸ್ಥೆಯ ಚೇರ್ಮನ್ ಪೀಟ್ ಲಾವ್ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ತಮ್ಮ ಕಂಪನಿ ಕೈಗೊಳ್ಳಲು ಉದ್ದೇಶಿಸಿರುವ ಚಟುವಟಿಕೆಗಳನ್ನು ವಿವರಿಸಿತು. ಚೀನಾದಲ್ಲಿರುವ ತಮ್ಮ ಫ್ಯಾಕ್ಟರಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿಯವರನ್ನು ನಿಯೋಗ ಆಹ್ವಾನಿಸಿತು.
ಜೊತೆಗೆ ಬೆಂಗಳೂರಿನಲ್ಲಿ 20 ಸಾವಿರ ಚದರಡಿ ಜಾಗದಲ್ಲಿ ಕಂಪನಿಯ ಕಾರ್ಪೊರೇಟ್ ಕಚೇರಿ ಮತ್ತು ಮೊಬೈಲ್ ಫೋನ್ ಮಾರಾಟ ಮಳಿಗೆ ತೆರೆಯಲಿರುವುದಾಗಿ ಲಾವ್ ಅವರು ತಿಳಿಸಿದರು. ಜನರಲ್ ಮ್ಯಾನೇಜರ್ ವಿಕಾಸ್ ಅಗರವಾಲ್ ನಿಯೋಗದಲ್ಲಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.