Webdunia - Bharat's app for daily news and videos

Install App

ಪ್ಯಾನ್ 2.0 ಬಂದ ಮೇಲೆ ಹಳೇ ಪ್ಯಾನ್ ಕಾರ್ಡ್ ಬದಲಾಯಿಸಬೇಕಾ, ಇಲ್ಲಿದೆ ವಿವರ

Krishnaveni K
ಶುಕ್ರವಾರ, 29 ನವೆಂಬರ್ 2024 (08:55 IST)
Photo Credit: X
ನವದೆಹಲಿ: ಕೇಂದ್ರ ಸರ್ಕಾರ ಈಗ ಕ್ಯೂ ಆರ್ ಕೋಡ್ ಒಳಗೊಂಡ ಹೊಸ ಪ್ಯಾನ್ ಕಾರ್ಡ್ ಜಾರಿಗೆ ತರಲು ಹೊರಟಿದೆ. ಪ್ಯಾನ್ 2.0 ಬಂದ ಮೇಲೆ ನಿಮ್ಮ ಬಳಿ ಈಗಾಗಲೇ ಇರುವ ಹಳೆಯ ಪ್ಯಾನ್ ಕಾರ್ಡ್ ನ್ನು ಬದಲಾಯಿಸಬೇಕೇ? ಇಲ್ಲಿದೆ ಮಾಹಿತಿ.

ಪ್ಯಾನ್ 2.0 ರಲ್ಲಿ ಕ್ಯೂ ಆರ್ ಕೋಡ್ ಸಹಿತ ಆಧುನಿಕ ತಂತ್ರಜ್ಞಾನವಿದೆ. ಗ್ರಾಹಕರ ಅನುಕೂಲಕ್ಕಾಗಿ ಇದನ್ನು ಈಮೇಲ್ ಮೂಲಕವೂ ಪಡೆದುಕೊಳ್ಳುವಂತೆ ಸರ್ಕಾರ ಅನುಕೂಲ ಕಲ್ಪಿಸಿದೆ. ಇ-ಆಡಳಿತ ವ್ಯವಸ್ಥೆಯ ಭಾಗವಾಗಿ ಕೇಂದ್ರ ಸರ್ಕಾರ ಪ್ಯಾನ್ 2.0 ಅನ್ನು ನವಂಬರ್ 25 ರಂದು ಜಾರಿಗೆ ತಂದಿದೆ. ಆದರೆ ಹೊಸ ಮಾದರಿಯ ಪ್ಯಾನ್ ಕಾರ್ಡ್ ಬಗ್ಗೆ ಕೇಳಿದಾಗಿನಿಂದ ನಮ್ಮ ಬಳಿ ಈಗ ಇರುವ ಪ್ಯಾನ್ ಕಾರ್ಡ್ ಬದಲಾಯಿಸಬೇಕೇ ಎಂಬ ಅನುಮಾನ ಅನೇಕರಿಗೆ ಬಂದಿದೆ. ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಹೊಸ ಪ್ಯಾನ್ ಕಾರ್ಡ್ ಗಾಗಿ ಈಗ ಇರುವ ಪ್ಯಾನ್ ಕಾರ್ಡ್ ನ್ನು ಬದಲಾಯಿಸಬೇಕೆಂದೇನೂ ಇಲ್ಲ. ಹೊಸ ಪ್ಯಾನ್ ಕಾರ್ಡ್ ಬಂದಿದೆ ಎಂಬ ಕಾರಣಕ್ಕೆ ಹಳೆಯ ಪ್ಯಾನ್ ಕಾರ್ಡ್ ವ್ಯಾಲಿಡಿಟಿ ಕಳೆದುಕೊಳ್ಳುವುದಿಲ್ಲ. ಹೀಗಾಗಿ ತೆರಿಗೆ ಪಾವತಿದಾರರು ಸೇರಿದಂತೆ ಸಾಮಾನ್ಯ ಜನ ಈ ಬಗ್ಗೆ ಗೊಂದಲಕ್ಕೆ ಒಳಗಾಗಬೇಕಿಲ್ಲ.

ಹೊಸ ಪ್ಯಾನ್ ಕಾರ್ಡ್ ಎಲ್ಲಾ ಸರ್ಕಾರೀ ಏಜೆನ್ಸಿಗಳ ಕಾರ್ಯನಿರ್ವಹಣೆಗೆ ಕಾಮನ್ ಐಡೆಂಟಿಟಿಯಾಗಿ ಬಳಕೆಯಾಗಲಿದೆ. ಹೊಸ ಪ್ಯಾನ್ ಕಾರ್ಡ್ ನಿಂದ ನಿಮ್ಮ ಕಾರ್ಯನಿರ್ವಹಣೆ ಮತ್ತಷ್ಟು ಸುಲಭವಾಗಲಿದೆ.  ಇದು ಪರಿಸರ ಸ್ನೇಹಿ ವ್ಯವಸ್ಥೆಯಾಗಿದ್ದು ವೆಚ್ಚದ ಹೊರೆಯೂ ಕಡಿಮೆಯಾಗಲಿದೆ. ಇದರಲ್ಲಿ ಸುರಕ್ಷತೆ ಕೂಡಾ ಹೆಚ್ಚು. ಹಾಗಂತ ಹಳೆಯ ಪ್ಯಾನ್ ಕಾರ್ಡ್ ದಾರರು ಯಾವುದೇ ಆತಂಕಪಡಬೇಕಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments