Webdunia - Bharat's app for daily news and videos

Install App

ನಿನ್ನೆ ರಾತ್ರಿನೇ ಪೆಟ್ರೋಲ್ ನೋ ಸ್ಟಾಕ್...!

Webdunia
ಗುರುವಾರ, 3 ನವೆಂಬರ್ 2016 (10:00 IST)
ಬೆಂಗಳೂರು: ಇಂದು ಮತ್ತು ನಾಳೆ ಅಖಿಲ ಕರ್ನಾಟಕ ಪೆಟ್ರೋಲಿಯಂ ಡೀಲರ್ಸ್ ಫೆಡರೇಷನ್ ಸರಕಾರಿ ಸ್ವಾಮ್ಯದ 3 ತೈಲ ಕಂಪನಿಗಳಿಂದ ಇಂಧನವನ್ನು ಖರೀದಿಸದೆ ಮುಷ್ಕರ ನಡೆಸಲು ನಿರ್ಧರಿಸಿದೆ. ಪರಿಣಾಮ ವಾಹನ ಸವಾರರು ಎರಡು ದಿನಗಳ ಕಾಲ ತೀವ್ರ ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ.
ಪೆಟ್ರೋಲ್ ಬಂಕ್ ಮುಷ್ಕರದ ಸುದ್ದಿ ಮಾಧ್ಯಮದಲ್ಲಿ ಬಿತ್ತರವಾಗುತ್ತಿದ್ದಂತೆ ವಾಹನ ಸವಾರರು ಪೆಟ್ರೊಲ್ ಬಂಕ್ ಎದುರು ಜಮಾಯಿಸಲು ಆರಂಭಿಸಿದ್ದರು. ರಾಜ್ಯದ ಕೆಲವು ಕಡೆ ರಾತ್ರಿ 12 ರವರೆಗೂ ಪೆಟ್ರೊಲ್ ಬಂಕ್ ಎದುರು ಕ್ಯೂ ಇದ್ದ ದೃಶ್ಯ ಕಂಡು ಬಂದಿತು. ಕೆಲವು ಪೆಟ್ರೋಲ್ ಬಂಕ್ ನೋ ಸ್ಟಾಕ್ ಎಂದು ಬೋರ್ಡ್ ಹಾಕಿದ್ದವು.
 
ದೇಶದಲ್ಲೇ ಮೊದಲ ಬಾರಿಗೆ ಪೆಟ್ರೋಲ್ ಡೀಲರ್ಸ್‌‌ಗಳೆಲ್ಲ ಒಟ್ಟಾಗಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಮುಷ್ಕರದ ಹಿನ್ನೆಲೆಯಲ್ಲಿ ಸರ್ಕಾರಿ ರಜಾದಿನಗಳು, 2ನೇ ಶನಿವಾರ ಹಾಗೂ ಭಾನುವಾರ ಕೂಡ ಬಂಕ್​ಗಳನ್ನು ತೆರೆಯದಿರುವಂತೆ ನಿರ್ಧರಿಸಿದ್ದಾರೆ. ಕಮಿಷನ್ ಹೆಚ್ಚಳ, ಲ್ಯೂಬ್ ಡಂಪಿಂಗ್ ಸ್ಥಗಿತ, ಅಧಿಕಾರಿಗಳ ಕಿರುಕುಳ ತಡೆ, ಪೆಟ್ರೋಲಿಯಂ ಉತ್ಪನ್ನಗಳ ಸಾಗಣೆ ವೆಚ್ಚ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಸಂಘ ಆಗ್ರಹಿಸಿ ಈ ಪ್ರತಿಭಟನೆ ಹಮ್ಮಿಕೊಂಡಿದೆ.
 
ಇಂದು ಮತ್ತು ನಾಳೆ(3&4) ಡೀಲರ್ಸ್ ಗಳು ತೈಲ ಕಂಪನಿಯಿಂದ ತೈಲ ಖರೀದಿಯನ್ನಷ್ಟೇ ಸ್ಥಗಿತಗೊಳಿಸಲಿವೆ. ಈ ಹಿನ್ನೆಲೆಯಲ್ಲಿ ಈ ಎರಡು ದಿನ ಬಂಕ್ ಗಳಲ್ಲಿ ಸಂಗ್ರಹವಾಗಿರುವ ಪೆಟ್ರೋಲ್, ಡಿಸೇಲ್ ಗ್ರಾಹಕರಿಗೆ ಲಭ್ಯವಾಗಲಿದೆ. ಆದರೆ ನ.5 ರಿಂದ ಪ್ರಾರಂಭವಾಗುವ ಅನಿರ್ದಿಷ್ಟಾವಧಿ ಮುಷ್ಕರದಿಂದ ಗ್ರಾಹಕರಿಗೆ ಸ್ವಲ್ಪಮಟ್ಟಿನ ತೊಂದರೆಯಾಗಬಹುದು. ಏಕೆಂದರೆ ಆ ದಿನಗಳಂದು ಒಂದು ಪಾಳಿಯಲ್ಲಿ ಮಾತ್ರ ಬಂಕ್ ಕಾರ್ಯನಿರ್ವಹಿಸಲಿದೆ. ಅಂದರೆ ಬೆಳಗ್ಗೆ 9 ರಿಂದ ಸಂಜೆ 6 ರವರೆಗೆ ಮಾತ್ರ ಬಂಕ್‌ಗಳು ತೆರೆದಿರುವುದರಿಂದ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಬೇಡಿಕೆ ಈಡೇರುವವರೆಗೂ ರಾಜ್ಯಾದ್ಯಂತ ಪೆಟ್ರೋಲ್ ಬಂಕ್‌ಗಳು ಕೇವಲ ಒಂದು ಪಾಳಿಯಲ್ಲಿ ಮಾತ್ರ ತೆರೆದಿರಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments