Webdunia - Bharat's app for daily news and videos

Install App

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 11 ಸಾವಿರ ಕೋಟಿ ಗುಳಂ

ಗುರುಮೂರ್ತಿ
ಗುರುವಾರ, 15 ಫೆಬ್ರವರಿ 2018 (13:05 IST)
ಮುಂಬೈ ಶಾಖೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಸುಮಾರು 11,360 ಕೋಟಿ ರೂಪಾಯಿಗಳಷ್ಟು ಬಾರಿ ಅಕ್ರಮ ವ್ಯವಹಾರವನ್ನು ಅಧಿಕಾರಿಗಳು ಪತ್ತೆಮಾಡಿದ್ದಾರೆ.

ಈ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬ್ಯಾಂಕ್ ಅಧಿಕಾರಿಗಳು ಮೋಸದ ಕುರಿತಾದ ಹೇಳಿಕೆಯನ್ನು ನೀಡಿದ್ದು, ಇದರಿಂದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ ಷೇರು ದರವು ಮುಂಬೈ ಷೇರು ಸೂಚ್ಯಂಕದಲ್ಲಿ ನಿನ್ನೆ ಮಧ್ಯಾಹ್ನ 2.15 ರ ಮುಕ್ತಾಯಕ್ಕೆ ಹೋಲಿಸಿದರೆ ಶೇಕಡಾ 8% ರಷ್ಟು ಕಡಿಮೆ ಆಗಿದೆ ಎಂದು ತಿಳಿಸಿದ್ದಾರೆ.
 
ಕೆಲವೇ ಆಯ್ದು ಗ್ರಾಹಕರೊಂದಿಗೆ ಸ್ಪಷ್ಟವಾದ ಒಪ್ಪಂದ ಮಾಡಿಕೊಂಡು ಅನುಕೂಲ ಮಾಡಿಕೊಟ್ಟಿರುವುದು ಇದಕ್ಕೆ ಮುಖ್ಯವಾದ ಕಾರಣ ಎಂಬುದು ಬ್ಯಾಂಕ್ ವಹಿವಾಟನ್ನು ಪರಿಶೀಲಿಸಿದಾಗ ತಿಳಿದುಬಂದಿದೆ. ಅಷ್ಟೇ ಅಲ್ಲ ಇದರ ಆಧಾರದ ಮೇಲೆ ವಿದೇಶದಲ್ಲಿರುವ ಗ್ರಾಹಕರಿಗೆ ಇನ್ನಿತರ ಬ್ಯಾಂಕ್‌ಗಳಲ್ಲಿ ಮುಂಗಡ ಹಣ ನೀಡಿರುವುದನ್ನು ಪತ್ತೆ ಹಚ್ಚಲಾಗಿದೆ.
 
ಈ ಮೋಸದ ಖಾತೆಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್‌ನ ಷೇರು ಸೂಚ್ಯಂಕವು ನಿನ್ನೆಯ ಸೂಚ್ಯಂಕಕ್ಕೆ ಹೋಲಿಸಿದರೆ ಶೇಕಡಾ 6.9% ರಷ್ಟು ಕುಸಿತ ಕಂಡಿದೆ. ಪಿಎನ್‌ಬಿ ದೇಶದಲ್ಲಿಯೇ ಸಾಲ ನೀಡುವಲ್ಲಿ ಎರಡನೇ ಅತೀ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದ್ದು ದೇಶದಲ್ಲಿಯೇ ಹೆಚ್ಚು ಸ್ವತ್ತುಗಳನ್ನು ಹೊಂದಿರುವ ನಾಲ್ಕನೇ ಅತೀ ದೊಡ್ಡ ಬ್ಯಾಂಕ್ ಆಗಿದೆ. ಈ ಬಗ್ಗೆ ತನಿಖೆ ನಡೆಸಿರುವ ಅಧಿಕಾರಿಗಳು ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ಹೆಸರನ್ನು ಹೊರಹಾಕಿಲ್ಲ. ಆದರೆ ಪ್ರಕರಣದ ಕುರಿತು ಕಾನೂನು ಜಾಗೃತ ಸಂಸ್ಥೆಗೆ ಮಾಹಿತಿ ತಿಳಿಸಲಾಗಿದೆ. ವಹಿವಾಟಿನ ಮೂಲಕ ಯಾವುದೇ ಅಕ್ರಮ ನಡೆದಿದ್ದರೆ ಅದರ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಬ್ಯಾಂಕ್ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments