Webdunia - Bharat's app for daily news and videos

Install App

ಪೇಟಿಎಂ ಮೂಲಕ ಪೇಮೆಂಟ್ ಗೆ ಆರ್ ಬಿಐ ನಿಷೇಧ: ವಿವರಗಳಿಗಾಗಿ ಇಲ್ಲಿ ಓದಿ

Krishnaveni K
ಶುಕ್ರವಾರ, 2 ಫೆಬ್ರವರಿ 2024 (09:42 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಯಾವುದೇ ಸಣ್ಣ ಪುಟ್ಟ ಅಂಗಡಿ, ಮಾರುಕಟ್ಟೆಗೆ ಹೋದರೂ ಪೇಟಿಎಂ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಸುಲಭವಾಗಿ ಡಿಜಿಟಲ್ ಪೇಮೆಂಟ್ ಮಾಡಿ ಬಿಡುತ್ತೇವೆ. ಆದರೆ ಇದೀಗ ಪೇಟಿಎಂ ಪೇಮೆಂಟ್ ಗೆ ಆರ್ ಬಿಐ ಶಾಕ್ ನೀಡಿದೆ.

ಫೆಬ್ರವರಿ 29 ರಿಂದ ಜಾರಿಗೆ ಬರುವಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಪೇಟಿಎಂ ಪಾವತಿಗಳ ಮೇಲೆ ನಿರ್ಬಂಧ ವಿಧಿಸಿದೆ. ಪೇಟಿಎಂ ಪೇಮೆಂಟ್ ಬ್ಯಾಂಕ್ ನಿಯಮಗಳನ್ನು ಅನುಸರಿಸದೇ ಇರುವ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನಲೆಯಲ್ಲಿ ಆರ್ ಬಿಐ ಈ ನಿರ್ಧಾರಕ್ಕೆ ಬಂದಿದೆ. ಆರ್ ಬಿಐ ಸೆಕ್ಷನ್ 35ಎ ಅಡಿಯಲ್ಲಿ ಪೇಟಿಎಂ ಪೇಮೆಂಟ್ ಬ್ಯಾಂಕ್ ಮತ್ತು ಲಿಂಕ್ಡ್ ಸೇವೆಗಳಿಗೆ ಠೇವಣಿ ಅಥವಾ ಟಾಪ್-ಅಪ್ ಗಳನ್ನು ಸ್ವೀಕರಿಸುವುದಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಿದೆ. ಈ ಆದೇಶ ಕೋಟ್ಯಾಂತರ ಬಳಕೆದಾರರ ಮೇಲೆ ಪರಿಣಾಮ ಬೀರಲಿದೆ.

ಪೇಟಿಎಂ ಷೇರಿನಲ್ಲ ಭಾರೀ ಕುಸಿತ
ಫೆ.29 ರ ನಂತರ ಹೊಸ ಠೇವಣಿ ಸ್ವೀಕರಿಸುವುದಕ್ಕೆ ಮತ್ತು ಕ್ರೆಡಿಟ್ ವ್ಯವಹರಾಗಳನ್ನು ನಡೆಸುವುದಕ್ಕೆ ನಿಷೇಧ ಹೇರಲಾಗಿದೆ. ಆರ್ ಬಿಐ ಇಂತಹದ್ದೊಂದು ಆದೇಶ ಹೊರಡಿಸುತ್ತಿದ್ದಂತೇ ಪೇಟಿಎಂ ಷೇರಿನಲ್ಲಿ ಭಾರೀ ಕುಸಿತ ಕಂಡಿದೆ. ಪೇಟಿಎಂ ಷೇರುಗಳು ಶೇ.20 ರಷ್ಟು ಕುಸಿತ ಕಂಡಿದೆ.

ಆರ್ ಬಿಐ ನಿಷೇಧದ ಬೆನ್ನಲ್ಲೇ ಎಚ್ಚೆತ್ತುಕೊಂಡ ಪೇಟಿಎಂ ಇದೀಗ ನಿರ್ದೇಶನಗಳನ್ನು ಪಾಲಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಕೇಂದ್ರೀಯ ಬ್ಯಾಂಕ್ ಆಕ್ಷೇಪಗಳನ್ನು ಸರಿಪಡಿಸಲು ಆರ್ ಬಿಐನೊಂದಿಗೆ ಕೆಲಸ ಮಾಡುವುದಾಗಿ ಹೇಳಿದೆ.

ಯಾವೆಲ್ಲಾ ಪಾವತಿಗೆ ತೊಂದರೆ?
ಫೆ.29 ರ ನಂತರ ನಿಧಿ ವರ್ಗಾವಣೆಗಳು, ಭಾರತ್ ಬಿಲ್ ಕಾರ್ಯಾಚರಣಾ ಘಟಕ, ಯುಪಿಐ ಸೇವೆಗಳನ್ನು ನಿರ್ಬಂಧಿಸಲಾಗಿದೆ. ಹಾಗಿದ್ದರೂ ಗ್ರಾಹಕರು ಮರುಪಾವತಿಗಳು, ಕ್ಯಾಶ್ ಬ್ಯಾಕ್ ಗಳು, ಬಡ್ಡಿ ಸಾಲಗಳ, ಖಾತೆಯ ಬ್ಯಾಲೆನ್ಸ್ ಹಿಂಪಡೆಯುವಿಕೆ ಅಥವಾ ಬಳಕೆಗೆ ಅರ್ಹರಾಗಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments