Webdunia - Bharat's app for daily news and videos

Install App

ಆರ್ಟಿಜಿಎಸ್ ಹಾಗೂ ನೆಪ್ಟ್ ಮೇಲಿನ ಶುಲ್ಕವನ್ನು ರದ್ದು ಮಾಡಿದ ಆರ್.ಬಿ.ಐ.

Webdunia
ಶುಕ್ರವಾರ, 7 ಜೂನ್ 2019 (07:58 IST)
ನವದೆಹಲಿ : ಆರ್ಟಿಜಿಎಸ್ ಹಾಗೂ ನೆಪ್ಟ್ ವ್ಯವಹಾರಗಳ ಮೇಲೆ ಬ್ಯಾಂಕುಗಳು ವಿಧಿಸುತ್ತಿದ್ದ  ವಹಿವಾಟು ಶುಲ್ಕವನ್ನು ರದ್ದುಗೊಳಿಸುವುದರ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಆನ್ಲೈನ್ ಮೂಲಕ ವ್ಯವಹಾರ ನಡೆಸುವ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.




ಆರ್ಟಿಜಿಎಸ್ (Real Time Gross Settlement System) ಒಂದು ಹಣ ವರ್ಗಾವಣೆ ಮಾಧ್ಯಮವಾಗಿದ್ದು, ದೊಡ್ಡ ಮೊತ್ತದ ಹಣವನ್ನು ಆರ್ಟಿಜಿಎಸ್ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ಇದರ ಮೂಲಕ ಕನಿಷ್ಠ ರೂ. 2 ಲಕ್ಷ ವರ್ಗಾವಣೆ ಮಾಡಬಹುದು. ಭಾನುವಾರ ಹಾಗೂ ರಜಾ ದಿನಗಳಲ್ಲಿ ಆರ್.ಟಿ.ಜಿ.ಎಸ್. ಲಭ್ಯವಿರುವುದಿಲ್ಲ . ಆನ್ಲೈನ್ ಹಾಗೂ ಬ್ಯಾಂಕ್ ಶಾಖೆ ಮೂಲಕ ಇದರ ಬಳಕೆ ಮಾಡಬಹುದು.ಇದಕ್ಕೆ ಬ್ಯಾಂಕುಗಳು ಶುಲ್ಕ ವಿಧಿಸುತ್ತಿದ್ದವು. ಎಸ್.ಬಿ.ಐ. ಬ್ಯಾಂಕ್ ನಲ್ಲಿ ಬೆಳಿಗ್ಗೆ 9 ಗಂಟೆಯಿಂದ 12 ಗಂಟೆಯೊಳಗೆ 2 ಲಕ್ಷದಿಂದ 5 ಲಕ್ಷ ರೂಪಾಯಿ ವರ್ಗಾವಣೆ ಮಾಡಿದ್ರೆ 25 ರೂಪಾಯಿ ಶುಲ್ಕ ವಸೂಲಿ ಮಾಡುತ್ತಿತ್ತು. 5 ಲಕ್ಷಕ್ಕಿಂತ ಹೆಚ್ಚಿನ ಮೊತ್ತಕ್ಕೆ 51 ರೂಪಾಯಿ ಶುಲ್ಕ ನೀಡಬೇಕಾಗಿತ್ತು.


ಹಾಗೇ ನೆಫ್ಟ್ ( National Electronic Funds Transfer ) ಮಾಧ್ಯಮದ ಮೂಲಕವೂ ಆನ್ಲೈನ್ ಹಾಗೂ ಬ್ಯಾಂಕ್ ಮೂಲಕ ಹಣ ವರ್ಗಾವಣೆ ಮಾಡಬಹುದು. ಇದು ವರ್ಗಾವಣೆ ಮಾಡಿದ ತಕ್ಷಣ ತಲುಪುವುದಿಲ್ಲ. ವರ್ಗಾವಣೆ ಪ್ರಕ್ರಿಯೆಗೆ ಸ್ವಲ್ಪ ಸಮಯ ಹಿಡಿಯುತ್ತದೆ. ಎಸ್ಬಿಐ ಗ್ರಾಹಕರು ನೆಫ್ಟ್ ಮೂಲಕ ರೂ. 10,000 ವರ್ಗಾವಣೆ ಮಾಡಿದರೆ ರೂ. 50 ಶುಲ್ಕ ಪಾವತಿ ಮಾಡಬೇಕಾಗಿತ್ತು. ರು. 1 ಲಕ್ಷಕ್ಕೆ 5 ರೂಪಾಯಿ, 1 ರಿಂದ 2 ಲಕ್ಷಕ್ಕೆ 15 ರೂಪಾಯಿ ಶುಲ್ಕ ಪಾವತಿಸಬೇಕಾಗಿತ್ತು. ಆದರೆ ಈಗ ಆರ್.ಬಿ.ಐ. ಆರ್ಟಿಜಿಎಸ್ ಹಾಗೂ ನೆಪ್ಟ್ ವ್ಯವಹಾರಗಳ ಮೇಲೆ ವಿಧಿಸಲಾದ ಶುಲ್ಕವನ್ನು ರದ್ದುಗೊಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments