Webdunia - Bharat's app for daily news and videos

Install App

ಆರ್ಬಿಐ ಮಹತ್ವದ ನಿರ್ಧಾರ: ಬ್ಯಾಂಕ್ ಗ್ರಾಹಕರಿಗೆ ಕಹಿ ಸುದ್ದಿ!

Webdunia
ಶನಿವಾರ, 7 ಆಗಸ್ಟ್ 2021 (08:06 IST)
ಮುಂಬೈ(ಆ.07): ಕೋವಿಡ್ನಿಂದಾಗಿ ದೇಶದ ಆರ್ಥಿಕತೆಗೆ ಹೊಡೆತ ಬಿದ್ದಿರುವ ಹಿನ್ನೆಲೆಯಲ್ಲಿ ಬಡ್ಡಿ ದರಗಳನ್ನು ಪರಿಷ್ಕರಿಸದೆ ಇರಲು ಭಾರತೀಯ ರಿಸವ್ರ್ ಬ್ಯಾಂಕ್ (ಆರ್ಬಿಐ) ನಿರ್ಧರಿಸಿದೆ. ತನ್ನ ದ್ವೈಮಾಸಿಕ ಹಣಕಾಸು ನೀತಿಯನ್ನು ಆರ್ಬಿಐ ಶುಕ್ರವಾರ ಬಿಡುಗಡೆ ಮಾಡಿದ್ದು, ಐತಿಹಾಸಿಕ ಕನಿಷ್ಠ ಮಟ್ಟದಲ್ಲಿರುವ ಬಡ್ಡಿ ದರಗಳ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ಪ್ರಕಟಿಸಿದೆ.

ಮತ್ತೊಂದೆಡೆ, ಕೋವಿಡ್ ಬಳಿಕ ಆರ್ಥಿಕತೆ ಚೇತರಿಸಿಕೊಳ್ಳುತ್ತಿದ್ದು, ಪ್ರಸಕ್ತ ಹಣಕಾಸು ವರ್ಷದ ಮಾಚ್ರ್ ಅಂತ್ಯದ ವೇಳೆಗೆ ದೇಶದ ಜಿಡಿಪಿ ದರ ಶೇ.9.5ಕ್ಕೆ ಏರಿಕೆಯಾಗಲಿದೆ ಎಂದು ಅಂದಾಜಿಸಿದೆ.
ರಿಸವ್ರ್ ಬ್ಯಾಂಕ್ ಕೊನೆಯ ಬಾರಿಗೆ ಬಡ್ಡಿ ದರ ಪರಿಷ್ಕರಣೆ ಮಾಡಿದ್ದು 2020ರ ಮೇ 22ರಂದು. ಅದಾದ ಬಳಿಕ 7 ದ್ವೈಮಾಸಿಕ ವಿತ್ತ ನೀತಿಗಳು ಪ್ರಕಟವಾಗಿವೆಯಾದರೂ ಬಡ್ಡಿ ದರದ ತಂಟೆಗೇ ಹೋಗಿಲ್ಲ. ಆರು ಮಂದಿಯ ಹಣಕಾಸು ನೀತಿ ಸಮಿತಿಯ ಪೈಕಿ ಐವರು ಈಗಿರುವ ಬಡ್ಡಿ ದರವನ್ನೇ ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ಮಾಡಿದರೆ, ಒಬ್ಬರು ಮಾತ್ರ ಅದಕ್ಕೆ ವಿರೋಧ ವ್ಯಕ್ತಪಡಿಸಿದರು. ಮುಂದಿನ ಹಣಕಾಸು ನೀತಿ ಸಭೆ ಅ.6ರಿಂದ 8ರವರೆಗೆ ನಡೆಯಲಿದೆ. ಅಲ್ಲಿವರೆಗೂ ಬಡ್ಡಿ ದರ ಯಥಾಸ್ಥಿತಿಯಲ್ಲೇ ಇರಲಿದೆ.
ನೀತಿಯಲ್ಲೇನಿದೆ?
- ರೆಪೋ ದರ ಶೇ.4ರ ದರದಲ್ಲೇ ಮುಂದುವರಿಕೆ
- ರಿವರ್ಸ್ ರೆಪೋ ದರ ಶೇ.3.35 ಇದ್ದು ಬದಲಾವಣೆ ಇಲ್ಲ
- ಚಿಲ್ಲರೆ ಹಣದುಬ್ಬರ ಶೇ.5.7 ಇದ್ದು, ಶೇ.5.1ಕ್ಕೆ ಇಳಿವ ಸಂಭವ
- ಈ ವರ್ಷ ಜಿಡಿಪಿ ದರ ಶೇ.9.5ಕ್ಕೆ ಏರುವ ನಿರೀಕ್ಷೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments