Webdunia - Bharat's app for daily news and videos

Install App

ಆರ್ಥಿಕತೆ ಪುನಶ್ಚೇತನಕ್ಕೆ ಆರ್‌ಬಿಐ ದಿಟ್ಟ ಕ್ರಮ: ಐದು ವರ್ಷಗಳ ಬಳಿಕ ರೆಪೊ ದರ ಕಡಿತ

Sampriya
ಶುಕ್ರವಾರ, 7 ಫೆಬ್ರವರಿ 2025 (14:29 IST)
Photo Courtesy X
ನವದೆಹಲಿ: ದೇಶದ ಆರ್ಥಿಕತೆಗೆ ಪುನಶ್ಚೇತನ ನೀಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಮಹತ್ವದ ಕ್ರಮಕೈಗೊಂಡಿದೆ. ಐದು ವರ್ಷಗಳ ಬಳಿಕ ಮೊದಲ ಬಾರಿಗೆ ಬಡ್ಡಿ ದರಗಳನ್ನು ಕಡಿತ ಮಾಡಿದೆ.

 ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ನೇತೃತ್ವದ ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯು ಐದು ವರ್ಷಗಳ ಬಳಿಕ  ರೆಪೊ ದರ  ಕಡಿಮೆ ಮಾಡಿದೆ. 2020ರ ಮೇ ತಿಂಗಳಲ್ಲಿ ಕೊನೆಯದಾಗಿ ಕಡಿಮೆ ಮಾಡಲಾಗಿತ್ತು. ಅದಾದ ಬಳಿಕ ನಡೆದ 11 ನೀತಿ ಸಭೆಗಳಲ್ಲಿ ರೆಪೊ ದರದಲ್ಲಿ ಯಾವುದೇ ಬದಲಾವಣೆ ತಂದಿರಲಿಲ್ಲ.

ಈ ಮಾರ್ಚ್‌ನಲ್ಲಿ ಕೊನೆಗೊಳ್ಳುವ ಹಣಕಾಸು ವರ್ಷದ ನೈಜ ಜಿಡಿಪಿ ಬೆಳವಣಿಗೆ ಶೇ 6.4  ಎಂದು ಅಂದಾಜಿಸಲಾಗಿದೆ ಎಂದು ಆರ್‌ಬಿಐ ಗವರ್ನರ್ ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕ ನಂತರ ಐದು ವರ್ಷಗಳಲ್ಲಿ ಕೇಂದ್ರ ಬ್ಯಾಂಕ್ ಮಾಡಿದ ಮೊದಲ ದರ ಕಡಿತ ಇದಾಗಿದೆ.

ಮುಂಬರುವ ಹಣಕಾಸು ವರ್ಷದಲ್ಲಿ ನಿರೀಕ್ಷಿತ ನೈಜ ಬೆಳವಣಿಗೆ ಮೊದಲ ತ್ರೈಮಾಸಿಕದಲ್ಲಿ ಶೇ 6.7, ಎರಡನೇ ತ್ರೈಮಾಸಿಕದಲ್ಲಿ ಶೇ7, ಮೂರನೇ ತ್ರೈಮಾಸಿಕದಲ್ಲಿ ಶೇ 6.5 ಮತ್ತು ನಾಲ್ಕನೇ ತ್ರೈಮಾಸಿಕದಲ್ಲಿ ಶೇ 6.5 ಎಂದು ಅವರು ಅಂದಾಜಿಸಿದ್ದಾರೆ.

ಇಂದು ಬೆಳಗಿನ ವಹಿವಾಟು ಆರಂಭಕ್ಕೆ ಸೆನ್ಸೆಕ್ಸ್ ಕನಿಷ್ಠ 77,730 ಮತ್ತು ಗರಿಷ್ಠ 78,357 ರ ನಡುವೆ ಏರಿಳಿತಗೊಂಡಿತು, ಆದರೆ ನಿಫ್ಟಿ ಕನಿಷ್ಠ 23,439.60 ಮತ್ತು ಗರಿಷ್ಠ 23,694.50ರ ನಡುವೆ ತಲುಪಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments