Webdunia - Bharat's app for daily news and videos

Install App

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಈ ಉದ್ಯಮಿಗಳಿಂದ ಆಕ್ಷೇಪ

Krishnaveni K
ಬುಧವಾರ, 17 ಜುಲೈ 2024 (14:28 IST)
ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಶೇ.100 ಉದ್ಯೋಗ ಮೀಸಲಾತಿ ನೀಡುವ ಮಸೂದೆಗೆ ಅನುಮೋದನೆ ನೀಡುತ್ತಿದ್ದಂತೇ ಇತ್ತ ಕೆಲವು ಉದ್ಯಮಿಗಳಿಂದ ಇದಕ್ಕೆ ವಿರೋಧ ವ್ಯಕ್ತವಾಗಿದೆ.

ಖಾಸಗಿ ಕಾರ್ಖಾನೆಗಳು, ಸಂಸ್ಥೆಗಳಲ್ಲಿ ಮ್ಯಾನೇಜ್ ಮೆಂಟ್ ಹಂತದಲ್ಲಿ ಶೇ.50, ಮ್ಯಾನೇಜ್ ಮೆಂಟ್ ಹೊರತಾದ ಹುದ್ದೆಗಳಲ್ಲಿ ಶೇ. 75 ಮತ್ತು ಸಿ ಮತ್ತು ಡಿ ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.100 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಪಾಸ್ ಮಾಡಲಾಗಿದೆ. ಆದರೆ ಇದು ಕೆಲವು ಉದ್ಯಮಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಉದ್ಯಮಿ ಮೋಹನ್ ದಾಸ್ ಪೈ, ‘ಉದ್ಯೋಗ ಮೀಸಲಾತಿ ನೀಡುವುದು ಎಂದರೆ ಈ ರೀತಿ ಅಲ್ಲ. ಕನ್ನಡಿಗರಿಗೆ ಹೆಚ್ಚು ಅವಕಾಶ ನೀಡಬೇಕು ಎಂದು ನಿಮಗೆ ನಿಜವಾಗಿಯೂ ಮನಸ್ಸಿದ್ದರೆ ಕನ್ನಡಿಗರ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿ, ಉದ್ಯೋಗ ಕೌಶಲ್ಯತೆ ಹೆಚ್ಚಿಸುವ ತರಬೇತಿ ನೀಡಿ. ಅದು ಬಿಟ್ಟು ಹೀಗೆ ಏಕಾಏಕಿ ಮೀಸಲಾತಿ ಎಂದು ಘೋಷಿಸುವುದಲ್ಲ. ಇದದರಿಂದ ನೀವು ಏನು ಸಾಧಿಸಿದಂತಾಗುತ್ತದೆ?’ ಎಂದು ಪ್ರಶ್ನೆ ಮಾಡಿದ್ದಾರೆ.

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಕನ್ನಡಿಗರಿಗೆ ಮೀಸಲಾತಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಕೆಲವೊಂದು ಅನುಮಾನಗಳನ್ನು ವ್ಯಕ್ತಪಡಿಸಿದ್ದಾರೆ. ‘ಟೆಕ್ ಹಬ್ ಆಗಿರುವ ಬೆಂಗಳೂರಿನಂತಹ ನಗರದಲ್ಲಿ ನಮಗೆ ಕೌಶಲ್ಯವಿರುವ ಉದ್ಯೋಗಿಗಳು ಬೇಕು. ಸ್ಥಳೀಯರಿಗೆ ಉದ್ಯೋಗ ನೀಡುವ ಭರದಲ್ಲಿ ತಂತ್ರಜ್ಞಾನದಲ್ಲಿ ನಾವು ಇರುವ ಸ್ಥಾನಕ್ಕೆ ಧಕ್ಕೆಯಾಗಬಾರದು. ಈ ಮೀಸಲಾತಿ ನಿಯಮದಿಂದ ಕೆಲವು ವಿಶೇಷ ಕೌಶಲ್ಯ ಅಗತ್ಯವಿರುವ ಉದ್ದಿಮೆಗಳನ್ನು ಹೊರಗಿಡಬಹುದಿತ್ತು’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments