Webdunia - Bharat's app for daily news and videos

Install App

ಮುಕ್ತ ವ್ಯಾಪಾರ' ಮಾತುಕತೆಗೆ ಮರುಚಾಲನೆ

Webdunia
ಸೋಮವಾರ, 18 ಅಕ್ಟೋಬರ್ 2021 (17:05 IST)
ಜೆರುಸಲೇಂ : ಭಾರತ ಮತ್ತು ಇಸ್ರೇಲ್ ನಡುವಿನ ಮುಕ್ತ ವಾಣಿಜ್ಯ ಒಪ್ಪಂದದ (ಎಫ್ ಟಿಎ)ಮಾತುಕತೆಯನ್ನು ಪುನರಾರಂಭಿಸಲು ಎರಡೂ ರಾಷ್ಟ್ರಗಳು ಒಪ್ಪಿವೆ. ಸದ್ಯಕ್ಕೆ ಇಸ್ರೇಲ್ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಈ ವಿಷಯ ತಿಳಿಸಿದ್ದಾರೆ.

ಸೋಮವಾರ ಜೈಶಂಕರ್, ಇಸ್ರೇಲ್ನ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವರೂ ಆಗಿರುವ ಯೈರ್ ಲಪಿಡ್ ಅವರನ್ನು ಭೇಟಿ ಮಾಡಿದರು. ಭೇಟಿಯ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ ಟಿಎ ಮಾತುಕತೆಯನ್ನು ಮರುಚಾಲನೆ ಗೊಳಿಸಲಾಗುತ್ತದೆ. ದೀರ್ಘಕಾಲದಿಂದ ನಡೆಯುತ್ತಿರುವ ಈ ಒಪ್ಪಂದ ಆಧಾರಿತ ಚರ್ಚೆಗಳು ಮುಂದಿನ ಜೂನ್ ಹೊತ್ತಿಗೆ ನಿರ್ಣಾಯಕ ಹಂತಕ್ಕೆ ಬರಬಹುದು ಎಂದು ಆಶಿಸಿದ್ದಾರೆ.
ಇದೇ ವೇಳೆ, ಕೋವಿಡ್ ಭೀತಿ ನಿವಾರಣೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎರಡೂ ದೇಶಗಳ ಪ್ರಜೆಗಳ ಭಾರತ ಮತ್ತು ಇಸ್ರೇಲ್ ನಡುವೆ ಸುಲಲಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments