Webdunia - Bharat's app for daily news and videos

Install App

ದಲಿತ ಮಹಿಳೆಯನ್ನು ಮದುವೆಯಾದರೆ ರು.3 ಲಕ್ಷ ಪ್ರೋತ್ಸಾಹಧನ

Webdunia
ಭಾನುವಾರ, 25 ಡಿಸೆಂಬರ್ 2016 (09:45 IST)
ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ಅರ್ಥಮಾಡಿಕೊಂಡಷ್ಟು ಬೇರೆ ಯಾರೂ ಅರ್ಥಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ನಡೆದ ಡಾ. ಬಿ. ಆರ್. ಅಂಬೇಡ್ಕರ್ ಮಹಾ ಪರಿ ನಿರ್ವಾಣ ನಿಮಿತ್ತ “ಬೌದ್ಧ ಸಮಾಜ ನಿರ್ಮಾಣ ಸಂಕಲ್ಪ ದಿನ” ರಾಜ್ಯಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದರು.
 
ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಬೇಕು ಎಂಬ ಉದ್ದೇಶದಿಂದ ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುತ್ತಿದ್ದೇವೆ. ದಲಿತ ಮಹಿಳೆಯನ್ನು ವಿವಾಹವಾದರೆ 3 ಲಕ್ಷ ರೂ. ಹಾಗೂ ದಲಿತ ಪುರುಷ ಇತರೆ ಜಾತಿ ಮಹಿಳೆ ವಿವಾಹವಾದರೆ 2 ಲಕ್ಷ ರೂ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಹೇಳಿದರು.
 
2013ರಲ್ಲಿ SCP ಮತ್ತು TSP ಅನುದಾನವನ್ನು ಕಡ್ಡಾಯವಾಗಿ ಈ ಸಮುದಾಯಕ್ಕೆ ಬಳಸಬೇಕು ಎಂದು ಕಾಯಿದೆ ತಂದಿದ್ದೇವೆ. ಹೋದ ವರ್ಷ 6-7 ಸಾವಿರ ಕೋಟಿ ರೂ ಖರ್ಚು ಮಾಡಲಾಗಿದೆ. ನಾವು ಈ ವರ್ಷ 19852 ಕೋಟಿ ರೂಗಳನ್ನು ಈ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುತ್ತಿದ್ದೇವೆ ಎಂದರು.
 
ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ, ವಿಧಾನ ಪರಿಷತ್ ಸದಸ್ಯ ಧರ್ಮಸೇನ, ಶಾಸಕರಾದ ಪಿ. ಎಂ. ನರೇಂದ್ರಸ್ವಾಮಿ, ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಲಕ್ಷೀನಾರಾಯಣ ನಾಗವಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಗುಡ್ ನ್ಯೂಸ್

Dog viral video: ಚಿರತೆಯಿಂದ ತಮ್ಮ ಗೆಳೆಯನ ರಕ್ಷಿಸಿದ ನಾಯಿಗಳು

India Pakistan: ಪಾಕಿಸ್ತಾನದ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದು 400 ಅಲ್ಲ, ಇನ್ಯಾರು

Gruhalakshmi: ಮೂರು ತಿಂಗಳಿನಿಂದ ಬಂದಿಲ್ಲ ಗೃಹಲಕ್ಷ್ಮಿ ಹಣ: ವೋಟ್ ಹಾಕಲ್ಲ ಎಂದ ಮಹಿಳೆಯರು

Republic of Balochistan: ಬಲೂಚಿಸ್ತಾನ ಪ್ರತ್ಯೇಕ ರಾಷ್ಟ್ರದಿಂದ ಭಾರತಕ್ಕೆ ಏನು ಲಾಭ

ಮುಂದಿನ ಸುದ್ದಿ
Show comments