Webdunia - Bharat's app for daily news and videos

Install App

ಐದು ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ರೂ.50 ಕೋಟಿ

Webdunia
ಗುರುವಾರ, 2 ಫೆಬ್ರವರಿ 2017 (12:40 IST)
ಹಿಂದುಳಿದ ವರ್ಗಗಳಾದ ಉಪ್ಪಾರ, ಮಡಿವಾಳ, ತಿಗಳ, ಸವಿತಾ ಹಾಗೂ ಕಂಬಾರ ಸಮಾಜದವರ ಅಭಿವೃದ್ಧಿಗಾಗಿ ತಲಾ 10 ಕೋಟಿ ರೂ. ಗಳಂತೆ 50 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
 
ಮೈಸೂರಿನ ಜೆ.ಕೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಾಚಿದೇವರ ಜಯಂತ್ಯೋತ್ಸವ ಹಾಗೂ ಬೃಹತ್ ಜಾಗೃತ ಸಮಾವೇಶವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು. ಅನ್ನಪೂರ್ಣ ಅವರ ವರದಿಯ ಆಧಾರದ ಮೇಲೆ ಮಡಿವಾಳ ಜಾತಿಯನ್ನು ಪರಿಶಿಷ್ಟ ಜಾತಿಗೆ ಸೇರಿಸಬೇಕು ಎಂಬ ಮನವಿ ತಮಗೆ ಬಂದಿದ್ದು, ಈ ಬಗ್ಗೆ ಕ್ಯಾಬಿನೆಟ್ ಸಭೆ ಕರೆದು ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
 
ಜಯಂತಿ ಆಚರಣೆಗೆ ಆದೇಶ: ಮುಂದಿನ ಸಾಲಿನ ಫೆಬ್ರವರಿ 1 ರಿಂದ ಸರ್ಕಾರದ ವತಿಯಿಂದ ಮಾಚಿದೇವರ ಜಯಂತ್ಯೋತ್ಸವವನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಆಚರಿಸಲಾಗುವುದು. ಈ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದರು.
 
ಬಿಜಾಪುರದಲ್ಲಿರುವ ದೇವರ ಹಿಪ್ಪರಿಗೆ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರ್ಕಾರದಿಂದ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಹಿಂದುಳಿದ ವರ್ಗಗಳು ಶೈಕ್ಷಣಿಕವಾಗಿ ಅಭಿವೃದ್ಧಿಯಾಗಬೇಕು ಇದಕ್ಕಾಗಿ ಹಿಂದುಳಿದ ವರ್ಗದವರ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆ ಅಥವಾ ಹಾಸ್ಟೆಲ್ ತೆರೆಯಲು ಸರ್ಕಾರದಿಂದ ಸಹಾಯಧನ ಒದಗಿಸಲಾಗುವುದು ಎಂದರು.
ಶೋಷಿತ ವರ್ಗದವರು ಶಿಕ್ಷಣ ಸಂಘಟನೆ, ಹೋರಾಟಗಳ ಮೂಲಕ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಬೆಳೆಯಲು ಸಾಧ್ಯ. ಶೋಷಿತ ವರ್ಗದವರು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು. ಸಂಘಟಿತರಾದಾಗ ತಮ್ಮಲ್ಲಿರುವ ತೊಂದರೆಗಳ ಬಗ್ಗೆ ಚರ್ಚಿಸಿ ಹೋರಾಟ ಮಾಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
 
ಸಮಾಜದಲ್ಲಿರುವ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಹಲವಾರು ಶಾಂತರು ದಾರ್ಶನಿಕರು, ದಾಸರು ತಮ್ಮ ಭೋದನೆ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಜಾತಿರಹಿತ ಹಾಗೂ ವರ್ಗರಹಿತ ಸಮಾಜ ನಿರ್ಮಾಣ ಬಾಬಾ ಸಹೇಬ್ ಅಂಬೇಡ್ಕರ್ ಅವರ ಕನಸು. ವೃತ್ತಿಯ ಆಧಾರದ ಮೇಲೆ ಜಾತಿ ಪದ್ಧತಿಯನ್ನು ಜಾರಿಗೆ ತರಲಾಗಿದೆ. ವೃತ್ತಿಯ ಕಾರಣದಿಂದ ಕೆಳವರ್ಗದವರು ಅಕ್ಷರದಿಂದ ವಂಚಿತರಾದರು ಹಾಗೂ ಕೆಳವರ್ಗದವರ ಜನಸಂಖ್ಯೆಯೇ ಹೆಚ್ಚು. ಹಿಂದುಳಿದ ವರ್ಗದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಸಮಾಜದಲ್ಲಿ ಜಾತಿರಹಿತ, ವರ್ಗರಹಿತ ಸಮ ಸಮಾಜ ನಿರ್ಮಾಣವಾಗಬೇಕು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments