Webdunia - Bharat's app for daily news and videos

Install App

ಎಸ್‌ಬಿಐ ಬ್ಯಾಂಕ್ ಗ್ರಾಹಕರೇ ಎಚ್ಚರ: ಇಂತಹ ಸಂದೇಶಗಳಿಂದ ದೂರವಿರಿ

Webdunia
ಮಂಗಳವಾರ, 8 ಜನವರಿ 2019 (14:27 IST)
ಸ್ಟೇಟ್‌ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಅನೇಕ ಸೌಲಭ್ಯಗಳನ್ನು ನೀಡುವುದರೊಂದಿಗೆ ಅವರ ಹಣ ಸುರಕ್ಷಿತವಾಗಿರಲು ನಿರಂತರವಾಗಿ ಪ್ರಯತ್ನಿಸುತ್ತಿದೆ. ಬ್ಯಾಂಕ್ ತನ್ನ ಗ್ರಾಹಕರಿಗೆ ಖಾತೆಯಲ್ಲಿರುವ ಹಣದ ಬಗ್ಗೆ ಎಸ್‌ಎಂಎಸ್ ಸಂದೇಶ ನಿರಂತರವಾಗಿ ಕಳುಹಿಸುತ್ತಿದೆ. ರಿವಾರ್ಡ್ ಪಾಯಿಂಟ್ಸ್ ಹೆಸರಲ್ಲಿ ಗ್ರಾಹಕರ ಕ್ರೆಡಿಟ್ ಕಾರ್ಡ್ ವಿವರಗಳನ್ನು ಬಳಸಿಕೊಂಡು ಲಕ್ಷಾಂತರ ರೂಪಾಯಿಗಳನ್ನು ವರ್ಗಾಯಿಸಿಕೊಂಡು ವಂಚನೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯಿಲ್ಲಿದೆ ಬನ್ನಿ ನೋಡುವಾ.... 
ರಿವಾರ್ಡ್ ಪಾಯಿಂಟ್ಸ್ ಹೆಸರಲ್ಲಿ ಗಿಫ್ಟ್ ಓಚರ್ ನೀಡುವ ಆಮಿಷವೊಡ್ಡುವ ಬಗ್ಗೆ ಗ್ರಾಹಕರು ಎಚ್ಚರವಾಗಿರಬೇಕು ಎನ್ನುವ ಸಂದೇಶವನ್ನು ಬ್ಯಾಂಕ್ ಗ್ರಾಹಕರಿಗೆ ಈಗಾಗಲೇ ರವಾನಿಸಿದೆ.ಯಾವತ್ತೂ ನಿಮ್ಮ ಕ್ರೆಡಿಟ್ ಕಾರ್ಡ್ ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಓಟಿಪಿ ಸಂಖ್ಯೆಯನ್ನು ಶೇರ್ ಮಾಡಬೇಡಿ. ಬ್ಯಾಂಕ್ ವಿಡಿಯೋ ಲಿಂಕ್ ಶೇರ್ ಮಾಡಿದ್ದು ಯಾವ ರೀತಿ ಗ್ರಾಹಕರನ್ನು ವಂಚಿಸಲಾಗುತ್ತಿದೆ ಎನ್ನುವ ಬಗ್ಗೆ ಸಂಪೂರ್ಣ ವಿವರ ಲಭ್ಯವಿದೆ.  
 
ನಿಮ್ಮನ್ನು ವಂಚಕರು ಈ ರೀತಿ ವಂಚಿಸುತ್ತಾರೆ ನೋಡಿ: ದೆಹಲಿಯ ಮಯೂರ್ ವಿಹಾರ್ ನಿವಾಸಿಯಾದ ಅಮಿತ್ ಚೌಹಾನ್ ಎನ್ನುವವರಿಗೆ ರಿವಾರ್ಡ್ ಪಾಯಿಂಟ್ಸ್ ಬಗ್ಗೆ ಎಸ್‌ಎಂಎಸ್ ಸಂದೇಶ ಬಂದಿತ್ತು. ಸಂದೇಶದಲ್ಲಿ ನಿಮ್ಮ ಇಮೇಲ್, ಡೆಬಿಟ್ ಕಾರ್ಡ್ ಸಂಖ್ಯೆ, ಡೆಬಿಟ್ ಕಾರ್ಡ್ ವಿವರಗಳನ್ನು ಕೇಳಲಾಗಿತ್ತು. 
 
ಅಮಿತ್ ಚೌಹಾನ್ ತಮಗೆ ಬಂದ ಎಸ್‌ಎಂಎಸ್ ಸಂದೇಶದ ಅರ್ಜಿಯನ್ನು ಪೂರ್ಣಗೊಳಿಸಿದ ಕೂಡಲೇ ಅವರಿಗೆ ತಮ್ಮ ಖಾತೆಯಲ್ಲಿರುವ ಹಣ ವರ್ಗಾವಣೆಯಾಗಿರುವ ಸಂದೇಶ ಬಂದಿತು. ಚೌಹಾನ್ ಕೂಡಲೇ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಿದ್ದಾರೆ. ತಜ್ಞರ ಪ್ರಕಾರ ಹ್ಯಾಕರ್‌ಗಳು ಓಟಿಪಿ ಸಂಖ್ಯೆಯನ್ನು ಹ್ಯಾಕ್ ಮಾಡಿ ನಿಮ್ಮ ಖಾತೆಯಲ್ಲಿರುವ ಹಣದ ವಿವರಗಳನ್ನು ಪಡೆಯುತ್ತಾರೆ.
 
ವಂಚನೆಯಿಂದ ಪಾರಾಗುವುದು ಹೇಗೆ: ಬ್ಯಾಂಕ್‌ ಅಧಿಕಾರಿಗಳು ಯಾವತ್ತೂ ತಮ್ಮ ಗ್ರಾಹಕರಿಗೆ ಎಸ್‌ಎಂಎಸ್ ಸಂದೇಶ ರವಾನಿಸಿ ಬ್ಯಾಂಕ್ ಖಾತೆಯ ಬಗ್ಗೆ ಸಂಪೂರ್ಣ ವಿವರಗಳನ್ನು ಕೇಳುವುದಿಲ್ಲ. ಆದ್ದರಿಂದ, ಗ್ರಾಹಕರು ಇಂತಹ ವಂಚಕ ಎಸ್‌ಎಂಎಸ್‌‌ಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ಹಣ ವಂಚನೆಯ ಬಗ್ಗೆ ಗ್ರಾಹಕರು ದೂರು ದಾಖಲಿಸುವುದು ಅಗತ್ಯ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments