Webdunia - Bharat's app for daily news and videos

Install App

ಷೇರು ಪೇಟೆ ಕುಸಿತ: 3 ದಿನಗಳ ಲಾಭಕ್ಕೆ ಬ್ರೇಕ್

Webdunia
ಸೋಮವಾರ, 11 ಜುಲೈ 2022 (20:42 IST)
ಕಳೆದ ಮೂರು ಸೆಷನ್‌ಗಳಲ್ಲಿ ಲಾಭವನ್ನು ಕಂಡಿದ್ದ ಷೇರು ಮಾರುಕಟ್ಟೆ ಈ ವಾರದ ವಹಿವಾಟಿನ ಆರಂಭದಲ್ಲೇ ಕೆಳಕ್ಕೆ ಕುಸಿದಿದೆ. ಸ್ಥಳೀಯ ಹಾಗೂ ಅಂತಾರಾಷ್ಟ್ರೀಯವಾಗಿ ಹಣದುಬ್ಬರವು ಹೂಡಿಕೆದಾರರ ಮೇಲೆ ಪರಿಣಾಮವನ್ನು ಉಂಟು ಮಾಡಿದೆ.ಬಿಎಸ್‌ಇ ಸೆನ್ಸೆಕ್ಸ್ ಸೂಚ್ಯಂಕವು 372 ಅಂಕ ಕುಸಿತ ಕಂಡು 54,109. ಕ್ಕೆ ಇಳಿಕೆ ಕಂಡಿದೆ. ನಿಫ್ಟಿ ಸೂಚ್ಯಂಕವು ಸುಮಾರು ಶೇಕಡಾ 0.6ರಷ್ಟು ಕೆಳಕ್ಕೆ ಇಳಿದು 16,126.45 ಕ್ಕೆ ತಲುಪಿದೆ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಭಾರೀ ಕೆಳಕ್ಕೆ ಕುಸಿದಿದೆ. ಡಿ-ಮಾರ್ಟ್ ಮಾಲೀಕತ್ವವನ್ನು ಹೊಂದಿರುವ ಸೂಪರ್‌ಮಾರ್ಟ್ಸ್ ಶೇಕಡಾ 2.9 ರಷ್ಟು ಜಿಗಿತ ಕಂಡಿದೆ. ಇನ್ನು ನಿಫ್ಟಿ 50 ಯಲ್ಲಿ ಭಾರ್ತಿ ಏರ್‌ಟೆಲ್, ಟಿಸಿಎಸ್, ಟೆಕ್ ಮಹೀಂದ್ರಾ, ಎಚ್‌ಸಿಎಲ್ ಟೆಕ್ನಾಲಜೀಸ್ ಮತ್ತು ವಿಪ್ರೋ ಭಾರೀ ನಷ್ಟವನ್ನು ಕಂಡಿದ್ದರೆ, ಎನ್‌ಟಿಪಿಸಿ, ಎಂ & ಎಂ, ಒಎನ್‌ಜಿಸಿ, ಈಚರ್ ಮೋಟಾರ್ಸ್ ಮತ್ತು ಟಾಟಾ ಲಾಭವನ್ನು ಗಳಿಸಿದೆ.ಯುಎಸ್ ಡಾಲರ್ ಎದುರು ರೂಪಾಯಿ ಮತ್ತೆ ಸಾರ್ವಕಾಲಿಕ ಕುಸಿತವನ್ನು ಕಂಡಿದೆ. ಯುಎಸ್ ಡಾಲರ್ ಎದುರು ರೂಪಾಯಿ 79.40ಕ್ಕೆ ಕುಸಿದಿದೆ. ರೂಪಾಯಿ ಮೌಲ್ಯ ಕುಸಿತವಾಗುತ್ತಿರುವ ನಡುವೆ ಆರ್‌ಬಿಐ ಮತ್ತೆ ತನ್ನ ವಿತ್ತ ನೀತಿಯಲ್ಲಿ ಬದಲಾವಣೆ ತರುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments