ಫೇಸ್ಬುಕ್ ಒಡೆತನದ ವಾಟ್ಸಪ್ ಸಾಮಾಜಿಕ ಜಾಲತಾಣವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಭದ್ರತೆ ದೃಷ್ಟಿಯಿಂದ ಸಾಮಾಜಿಕ ಜಾಲತಾಣ ವಾಟ್ಸಪ್ ಸೇರಿದಂತೆ ಮೆಸೆಂಜರ್ ಅಪ್ಲಿಕೇಶನ್ಗಳನ್ನು ನಿಷೇಧಿಸಬೇಕೆಂದು ಕೋರಿ ಹರಿಯಾಣ ಮೂಲದ ಆರ್ ಟಿಐ ಕಾರ್ಯಕರ್ತ ಸುಧೀರ್ ಯಾದವ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳು ತಿರಸ್ಕರಿಸಿದ್ದಾರೆ.
ಭಾರತದಲ್ಲಿ ಪಾಟ್ಸಪ್ ಜಾಲತಾಣವನ್ನು ನಿಷೇಧಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಸುಧೀರ್ ಯಾದವ್, ಭಾರತದಲ್ಲಿ ಉಗ್ರಗಾಮಿಗಳು ಮತ್ತು ಕ್ರಿಮಿನಲ್ಗಳು ವಾಟ್ಸಪ್ ಮೂಲಕ ಸುರಕ್ಷಿತವಾಗಿ ಸಂಭಾಷಣೆ ನಡೆಸುತ್ತಿದ್ದು, ದೇಶದ ವಿರುದ್ಧ ಸಂಚು ರೂಪಿಸುತ್ತಿದ್ದಾರೆ. ಆದರೆ, ವಾಟ್ಸಪ್ ಸಂಭಾಷಣೆ ಕುರಿತು ಭಾರತದ ಗುಪ್ತಚರ ಸಂಸ್ಥೆಗಳಿಗೆ ಯಾವುದೇ ಮಾಹಿತಿಗಳು ಲಭ್ಯವಾಗುವುದಿಲ್ಲ. ದೇಶದ ಭದ್ರತೆ ದೃಷ್ಟಿಯಿಂದ ವಾಟ್ಸಪ್ ನಿಷೇಧಿಸಬೇಕೆಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.