ಭಾರತಕ್ಕೆ ತಾಲಿಬಾನ್ ನಿರ್ಬಂಧ, ಆಮದು -ರಫ್ತು ವ್ಯವಹಾರಕ್ಕೆ ಉಗ್ರರ ತಡೆ

Webdunia
ಗುರುವಾರ, 19 ಆಗಸ್ಟ್ 2021 (10:38 IST)
ನವದೆಹಲಿ: ಆಫ್ಘಾನಿಸ್ಥಾನ ವಶಕ್ಕೆ ಪಡೆದುಕೊಂಡ ತಾಲಿಬಾನ್ ಉಗ್ರರು ಭಾರತದೊಂದಿಗಿನ ಎಲ್ಲಾ ಆಮದು, ರಫ್ತು ವ್ಯವಹಾರಕ್ಕೆ ನಿರ್ಬಂಧ ಹೇರಿದ್ದಾರೆ. ಪಾಕಿಸ್ತಾನದ ಮಾರ್ಗವಾಗಿ ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ನಡೆಯುತ್ತಿದ್ದ ಎಲ್ಲಾ ಸರಕು ಸಾಗಾಣಿಕೆಗೆ ತಾಲಿಬಾನ್ ನಿರ್ಬಂಧ ಹೇರಿರುವುದಾಗಿ ಫೆಡರೇಶನ್ ಆಫ್ ಇಂಡಿಯನ್ ಎಕ್ಸ್ಪೋರ್ಟ್ ಆರ್ಗನೈಸೇಶನ್ (ಎಫ್ಐಇಒ) ಮಹಾನಿರ್ದೇಶಕ ಡಾ ಅಜಯ್ ಸಹಾಯ್ ತಿಳಿಸಿದ್ದಾರೆ.

ಎರಡು ದಶಕಗಳ ನಂತರ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಹಿಡಿತ ಸಾಧಿಸಿದ ತಾಲಿಬಾನ್ ಗಳು ಭಾರತದೊಂದಿಗಿನ ಎಲ್ಲಾ ಆಮದು ಮತ್ತು ರಫ್ತುಗಳನ್ನು ನಿಲ್ಲಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಫ್ಘಾನಿಸ್ತಾನದೊಂದಿಗೆ ಪಾಕಿಸ್ತಾನ ಮಾರ್ಗವಾಗಿ ಆಮದು-ರಫ್ತು ನಡೆಯುತ್ತದೆ. ಭಾರತದ ಅತಿ ದೊಡ್ಡ ಪಾಲುದಾರ ದೇಶವಾಗಿದ್ದು, ಭಾರಿ ಪ್ರಮಾಣದ ಹೂಡಿಕೆಯನ್ನು ಹೊಂದಿದೆ. 400ಕ್ಕೂ ಅಧಿಕ ಪ್ರಾಜೆಕ್ಟ್ ಗಳು ನಡೆಯುತ್ತಿವೆ ಎಂದು ಹೇಳಲಾಗಿದೆ.
2021 ರ ವೇಳೆಗೆ ಆಫ್ಘಾನಿಸ್ತಾನಕ್ಕೆ 835 ಮಿಲಿಯನ್ ಡಾಲರ್ ನಷ್ಟು ಸರಕು ರಫ್ತು ಮತ್ತು 510 ಮಿಲಿಯನ್ ಡಾಲರ್ ಸರಕು ಆಮದು ಮಾಡಿಕೊಳ್ಳಲಾಗುತ್ತಿದೆ. ಹೂಡಿಕೆ ಮಾಡಿರುವ ಕೆಲವು ಪ್ರಾಜೆಕ್ಟ್ ಪ್ರಗತಿಯಲ್ಲಿವೆ. ಪ್ರಸ್ತುತ, ಭಾರತವು ಸಕ್ಕರೆ, ಔಷಧಿಗಳು, ಉಡುಪು, ಚಹಾ, ಕಾಫಿ, ಮಸಾಲೆಗಳು ಮತ್ತು ಪ್ರಸರಣ ಗೋಪುರಗಳನ್ನು ಅಫ್ಘಾನಿಸ್ತಾನಕ್ಕೆ ರಫ್ತು ಮಾಡುತ್ತದೆ. ಹೆಚ್ಚಾಗಿ ಒಣ ಹಣ್ಣುಗಳು, ಈರುಳ್ಳಿ ಮೊದಲಾದವುಗಳನ್ನು ಆಮದು ಮಾಡಿಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments