Webdunia - Bharat's app for daily news and videos

Install App

ಜಿಎಸ್‌ಟಿಗೆ ಸಂವಿಧಾನಿಕ ತಿದ್ದುಪಡಿ ಮಸೂದೆಗೆ ತಮಿಳುನಾಡು ತಿರಸ್ಕಾರ

Webdunia
ಶುಕ್ರವಾರ, 19 ಡಿಸೆಂಬರ್ 2014 (15:31 IST)
ಎಸ್‌ಟಿಗೆ( ಸರಕು ಮತ್ತು ಸೇವಾ ತೆರಿಗೆ) ಸಂವಿಧಾನ ತಿದ್ದುಪಡಿ ಮಸೂದೆಯನ್ನು ಪರಿಚಯಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ತಮಿಳುನಾಡು ಸರ್ಕಾರ ತಿರಸ್ಕರಿಸಿದೆ.

ಜಿಎಸ್‌ಟಿ ಸಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರುವ ಮುಂಚೆ ರಾಜ್ಯ ಹಣಕಾಸು ಸಚಿವರ  ಉನ್ನತಾಧಿಕಾರ ಸಮಿತಿಗೆ ಜಟಿಲ ವಿಷಯಗಳ ಬಗ್ಗೆ ಒಮ್ಮತ ಮೂಡುವಂತೆ ಪ್ರಯತ್ನಿಸಲು ಕೇಂದ್ರ ಅನುಮತಿ ನೀಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಪ್ರಧಾನಿ ನರೇಂದ್ರ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಆತುರದಲ್ಲಿ ಮಸೂದೆಯನ್ನು ಜಾರಿಗೆ ತರುವುದಕ್ಕೆ ಆಕ್ಷೇಪಿಸಿದ ಅವರು, ಇಂತಹ ಕ್ರಮದಿಂದ, ವಿತ್ತೀಯ ಸ್ವಾಯತ್ತತೆ ಮತ್ತು ರಾಜ್ಯಗಳ ಆದಾಯ ಸ್ಥಿತಿಗೆ ಗಂಭೀರ ದೀರ್ಘಾವಧಿ ದುಷ್ಪರಿಣಾಮ ಉಂಟಾಗುತ್ತದೆ ಎಂದು ಅವರು ಹೇಳಿದ್ದಾರೆ. ಇಂತಹ ಸುಧಾರಣೆ ಪ್ರಯತ್ನಿಸುವುದಕ್ಕೆ ಮುಂಚೆ ನಿಜವಾದ ಒಮ್ಮತ ಸಾಧಿಸುವಂತೆ ಮತ್ತು ರಾಜ್ಯಗಳ ಭಯ ನಿವಾರಿಸುವುದನ್ನು ಕೇಂದ್ರ ಸರ್ಕಾರ ಖಾತರಿಪಡಿಸಬೇಕು ಎಂದು ನುಡಿದಿದ್ದಾರೆ.

ಪನ್ನೀರ್ ಸೆಲ್ವಂ ವಿರೋಧದ ನಡುವೆ ಪಶ್ಚಿಮ ಬಂಗಾಳದ ಆಕ್ಷೇಪವೂ ಕೂಡ ಹೊರಬಿದ್ದಿದೆ.  ಜಿಎಸ್‌ಟಿಯಿಂದ ಆದಾಯ ನಷ್ಟಕ್ಕೆ ಕಾರಣವಾಗುತ್ತದೆಂದು ಹೇಳಿ ರಾಜ್ಯಗಳು ಸುದೀರ್ಘ ಕಾಲದಿಂದ ಈ ವಿಷಯದ ಬಗ್ಗೆ ನಿರಾಸಕ್ತಿ ಹೊಂದಿದ್ದವು. ಈ ವಾರದ ಆರಂಭದಲ್ಲಿ ಕೇಂದ್ರ ಸರ್ಕಾರ, ಪೆಟ್ರೋಲಿಯಂ ಉತ್ಪನ್ನಗಳನ್ನು ಮಸೂದೆಯಿಂದ ಕೆಲವು ವರ್ಷಗಳ ಕಾಲ ಹೊರಗಿರಿಸಿ, ರಾಜ್ಯಗಳ ಆದಾಯ ನಷ್ಟಕ್ಕೆ ಪರಿಹಾರ ನೀಡುವುದಾಗಿ ಪ್ರಸ್ತಾಪ ಮಂಡನೆ ಮಾಡಿತ್ತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments